ಬ್ರೇಕಿಂಗ್ ನ್ಯೂಸ್
06-03-26 10:21 am HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 5: ಸಿಎಂ ಸಿದ್ದರಾಮಯ್ಯ ಇಂದು 2026–27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದು, ಇದು ಅವರ ರಾಜಕೀಯ ಜೀವನದ ದಾಖಲೆಯ 17ನೇ ಬಜೆಟ್ ಆಗಿದೆ. ಇದರೊಂದಿಗೆ ಕರ್ನಾಟಕದ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಎಂಬ ದಾಖಲೆಯನ್ನು ಸಿದ್ದರಾಮಯ್ಯ ನಿರ್ಮಿಸಲಿದ್ದಾರೆ.
ರಾಜ್ಯದ ರಾಜಕೀಯ ಮತ್ತು ಆರ್ಥಿಕ ವಲಯದ ಗಮನ ಸೆಳೆದಿರುವ ಈ ಬಜೆಟ್ ಮೇಲೆ ವಿವಿಧ ಕ್ಷೇತ್ರಗಳು ದೊಡ್ಡ ನಿರೀಕ್ಷೆ ಇಟ್ಟುಕೊಂಡಿವೆ. ವಿಶೇಷವಾಗಿ ದುಡಿಯುವ ವರ್ಗಕ್ಕೆ ಸಂಬಂಧಿಸಿದ ಹಲವು ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬಹುದೆಂಬ ನಿರೀಕ್ಷೆ ಹೆಚ್ಚಾಗಿದೆ.
ಬಜೆಟ್ ಪೂರ್ವ ಸಿದ್ಧತೆ ಸಭೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ವಲಯಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿ ಅವರ ಬೇಡಿಕೆಗಳನ್ನು ಆಲಿಸಿದ್ದರು. ಹೀಗಾಗಿ ಹೋಟೆಲ್ ಉದ್ಯಮ, ಟ್ಯಾಕ್ಸಿ ಮತ್ತು ಆಟೋ ಚಾಲಕರು, ಸಾರಿಗೆ ನೌಕರರು, ಬೀದಿ ವ್ಯಾಪಾರಿಗಳು ಹಾಗೂ ಕೈಗಾರಿಕಾ ವಲಯ ಸೇರಿದಂತೆ ಹಲವು ಕ್ಷೇತ್ರಗಳ ಕಣ್ಣು ಇಂದಿನ ಬಜೆಟ್ ಮೇಲೆ ನೆಟ್ಟಿದೆ. ಹೋಟೆಲ್ ಉದ್ಯಮವು ರಾಜ್ಯದಲ್ಲಿ 24 ಗಂಟೆ ಹೋಟೆಲ್ ವ್ಯಾಪಾರಕ್ಕೆ ಅವಕಾಶ ನೀಡುವ ಜೊತೆಗೆ ಲೈಸನ್ಸ್ ಮತ್ತು ತೆರಿಗೆ ನಿಯಮಗಳಲ್ಲಿ ಸಡಿಲಿಕೆ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರು ಹೆದ್ದಾರಿಗಳಲ್ಲಿ ಪ್ರತಿ 100 ಕಿಲೋಮೀಟರ್ಗಳಿಗೆ ಬಹುಮಹಡಿ ಪಾರ್ಕಿಂಗ್ ವ್ಯವಸ್ಥೆ ನಿರ್ಮಿಸುವುದು ಹಾಗೂ ರಸ್ತೆ ಸುರಕ್ಷತೆ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಆಟೋ ಚಾಲಕರ ಸಂಘಟನೆಗಳು ಬೈಕ್ ಟ್ಯಾಕ್ಸಿ ಸೇವೆಗೆ ನಿಷೇಧ, ಚಾಲಕರ ಅಭಿವೃದ್ಧಿ ನಿಗಮ ಸ್ಥಾಪನೆ, ಜಾತಿವಾರು ನಿಗಮಗಳ ಮೂಲಕ ಸಾಲ ಸೌಲಭ್ಯ, ಇವಿ ಆಟೋ ಖರೀದಿಗೆ ಶೇಕಡಾ 50 ಸಹಾಯಧನ ಹಾಗೂ ವಸತಿ ಯೋಜನೆಗಳಡಿ ಚಾಲಕರಿಗೆ ಪ್ರತ್ಯೇಕ ಕಾಲೋನಿಗಳ ನಿರ್ಮಾಣಕ್ಕೆ ಮನವಿ ಸಲ್ಲಿಸಿವೆ. ಇದೇ ವೇಳೆ ಸಾರಿಗೆ ನೌಕರರು 36 ತಿಂಗಳ ಬಾಕಿ ಇರುವ ಅರಿಯರ್ಸ್ ಪಾವತಿ ಹಾಗೂ 2024ರಿಂದ ವೇತನ ಹೆಚ್ಚಳ ಕುರಿತು ಸ್ಪಷ್ಟ ನಿರ್ಧಾರ ನಿರೀಕ್ಷಿಸುತ್ತಿದ್ದಾರೆ.
ಇದರ ಜೊತೆಗೆ ಶಿಕ್ಷಣ, ಕೃಷಿ, ಕೈಗಾರಿಕೆ, ಸಾರಿಗೆ ಹಾಗೂ ಆರೋಗ್ಯ ಸೇರಿದಂತೆ ಹಲವು ಪ್ರಮುಖ ವಲಯಗಳೂ ಈ ಬಜೆಟ್ನತ್ತ ದೊಡ್ಡ ನಿರೀಕ್ಷೆ ಇಟ್ಟುಕೊಂಡಿವೆ. ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಸುಮಾರು 60 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಘೋಷಣೆ ಬರುವ ಸಾಧ್ಯತೆ ಇದೆ. ಜೊತೆಗೆ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗೊಳಿಸುವಂತೆ ಸರ್ಕಾರಿ ನೌಕರರು ಒತ್ತಾಯಿಸಿದ್ದಾರೆ. ಅತಿಥಿ ಶಿಕ್ಷಕರು, ಉಪನ್ಯಾಸಕರು ಮತ್ತು ಬಿಸಿಯೂಟ ಸಿಬ್ಬಂದಿಗೆ ಗೌರವಧನ ಹೆಚ್ಚಳ ಮಾಡುವ ನಿರೀಕ್ಷೆಯೂ ಇದೆ.
ಕೃಷಿ ವಲಯದಲ್ಲಿ ಯುವಕರನ್ನು ಕೃಷಿಯತ್ತ ಸೆಳೆಯಲು ಸಹಾಯಧನ, ಶೂನ್ಯ ಬಡ್ಡಿ ಸಾಲ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ, ಬೆಳೆಗಳಿಗೆ ಬೆಂಬಲ ಬೆಲೆ, ವಿಮೆ ಹಾಗೂ ಹನಿ ನೀರಾವರಿಗೆ ಉತ್ತೇಜನ ನೀಡುವ ಕ್ರಮಗಳ ನಿರೀಕ್ಷೆಯಿದೆ. ರೈತರು ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸುವಾಗ ಟೋಲ್ ಶುಲ್ಕದಿಂದ ವಿನಾಯಿತಿ ನೀಡುವಂತೆ ಆಗ್ರಹಿಸಿದ್ದಾರೆ. ಜೊತೆಗೆ ನಕಲಿ ಕೀಟನಾಶಕ ಮತ್ತು ಗೊಬ್ಬರ ಮಾರಾಟಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬೇಡಿಕೆಯೂ ಇದೆ.
ಹಿಂದುಳಿದ ವರ್ಗಗಳ ಸಂಘಟನೆಗಳು ಅಭಿವೃದ್ಧಿಗೆ ಕನಿಷ್ಠ 10 ಸಾವಿರ ಕೋಟಿ ರೂಪಾಯಿ ಅನುದಾನ ಮೀಸಲಿಡಬೇಕು ಮತ್ತು ಮೀಸಲಾತಿಯನ್ನು ಶೇಕಡಾ 50ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿವೆ. ಪ್ರವರ್ಗ-1 ಮತ್ತು 2ಎ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ ಭರವಸೆ ನೀಡುವ ಜೊತೆಗೆ ವಿವಿಧ ನಿಗಮಗಳಿಗೆ ಹೆಚ್ಚಿನ ಅನುದಾನ ನೀಡುವ ನಿರೀಕ್ಷೆಯಿದೆ.
ಕೈಗಾರಿಕಾ ವಲಯವು ಕೇವಲ ಬೆಂಗಳೂರಿಗೆ ಸೀಮಿತವಾಗಿರುವ ಕೈಗಾರಿಕೆಗಳನ್ನು ರಾಜ್ಯದ ದ್ವಿತೀಯ ಮತ್ತು ತೃತೀಯ ಹಂತದ ನಗರಗಳಿಗೆ ವಿಸ್ತರಿಸಲು ಉತ್ತೇಜನ ನೀಡುವ ಘೋಷಣೆಗಳನ್ನು ನಿರೀಕ್ಷಿಸುತ್ತಿದೆ. ಎಂಎಸ್ಎಂಇಗಳಿಗೆ ವಿಶೇಷ ನೀತಿ, ಕೈಗಾರಿಕಾ ಟೌನ್ಶಿಪ್ಗಳ ಸ್ಥಾಪನೆ, ಹಸಿರು ಇಂಧನ, ಕೌಶಲ್ಯಾಭಿವೃದ್ಧಿ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಉತ್ತೇಜನ ನೀಡುವ ಸಾಧ್ಯತೆಯಿದೆ.
ಆರೋಗ್ಯ ಕ್ಷೇತ್ರದಲ್ಲಿಯೂ ಮಹತ್ವದ ಘೋಷಣೆಗಳ ನಿರೀಕ್ಷೆ ಇದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆ ಸಾಮರ್ಥ್ಯ ಹೆಚ್ಚಳ, ಆಧುನಿಕ ವೈದ್ಯಕೀಯ ಉಪಕರಣಗಳ ವ್ಯವಸ್ಥೆ, ಹೊಸ ಐಸಿಯು ಹಾಗೂ ಡಯಾಲಿಸಿಸ್ ಘಟಕಗಳ ಸ್ಥಾಪನೆ, ವೈದ್ಯರು ಮತ್ತು ಸಿಬ್ಬಂದಿ ನೇಮಕಾತಿ ಸೇರಿದಂತೆ ಹಲವು ಯೋಜನೆಗಳಿಗೆ ಅನುದಾನ ನೀಡುವ ಸಾಧ್ಯತೆ ಇದೆ. ಜೊತೆಗೆ ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆ ಹಾಗೂ ಆರೋಗ್ಯ ಸೇವೆಗಳ ಡಿಜಿಟಲೀಕರಣಕ್ಕೂ ಒತ್ತು ನೀಡಲಾಗಬಹುದು.
ಒಟ್ಟಾರೆ, ರಾಜ್ಯದ ವಿವಿಧ ವಲಯಗಳ ನಿರೀಕ್ಷೆಗಳ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ ಈ ಬಜೆಟ್ ರಾಜ್ಯದ ಆರ್ಥಿಕ ದಿಕ್ಕು ಹಾಗೂ ಜನಸಾಮಾನ್ಯರ ಬದುಕಿನ ಮೇಲೆ ಮಹತ್ವದ ಪ್ರಭಾವ ಬೀರುವ ಸಾಧ್ಯತೆ ಇದ್ದು, ಸರ್ಕಾರ ಈ ನಿರೀಕ್ಷೆಗಳಿಗೆ ಯಾವ ಮಟ್ಟಿಗೆ ಸ್ಪಂದಿಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm