ಬ್ರೇಕಿಂಗ್ ನ್ಯೂಸ್
07-03-26 12:01 pm HK News Staffer ಕರ್ನಾಟಕ
ವಿಜಯವಾಡ, ಮಾರ್ಚ್ 06: ಜನಸಂಖ್ಯೆ ಕುಸಿತದ ಹಿನ್ನೆಲೆ ದಂಪತಿಗಳು ಹೆಚ್ಚು ಮಕ್ಕಳನ್ನು ಹೊಂದಲು ಉತ್ತೇಜನ ನೀಡುವ ಉದ್ದೇಶದಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ ಯೋಜನೆ ಘೋಷಿಸಿದೆ. 3ನೇ ಮಗುವಿಗೆ ₹25,000 ನಗದು ಪ್ರೋತ್ಸಾಹಧನ ಹಾಗೂ 18 ವರ್ಷದ ತನಕ ಉಚಿತ ಶಿಕ್ಷಣ ನೀಡಲು ಸರ್ಕಾರ ತೀರ್ಮಾನಿಸಿದ್ದು, ಇದರ ಕುರಿತ ಕರಡು ಮಸೂದೆಯನ್ನು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ. ಈ ಯೋಜನೆಯನ್ನು ಏಪ್ರಿಲ್ 1ರಿಂದ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ.
‘ಪೋಷಣ–ಶಿಕ್ಷಾ–ಸುರಕ್ಷಾ ಪ್ಯಾಕೇಜ್’ ಅಡಿಯಲ್ಲಿ ಈ ಯೋಜನೆ ಜಾರಿಯಾಗಲಿದೆ. ಇದರ ಜೊತೆಗೆ, ಕೆಲಸ ಮಾಡುವ ತಾಯಂದಿರಿಗೆ 12 ತಿಂಗಳ ಮಾತೃತ್ವ ರಜೆ ಹಾಗೂ ತಂದೆಗಳಿಗೆ 2 ತಿಂಗಳ ಪಿತೃತ್ವ ರಜೆ ನೀಡುವ ಪ್ರಸ್ತಾವನೆಯೂ ಇದೆ. ಐವಿಎಫ್ (IVF) ಮೂಲಕ ಮಗು ಪಡೆಯಲು ಬಯಸುವ ದಂಪತಿಗಳಿಗೆ ಸಬ್ಸಿಡಿ ದರದಲ್ಲಿ ಚಿಕಿತ್ಸೆ ಸೌಲಭ್ಯ ನೀಡಲಾಗುತ್ತದೆ.
ಇದೇ ವೇಳೆ, 3 ಮಕ್ಕಳನ್ನು ಹೊಂದಿರುವ ಸರ್ಕಾರಿ ನೌಕರರು ನಿವೃತ್ತಿಯ ವಯಸ್ಸಿನ ಹಂತಕ್ಕೆ ಬಂದಾಗ ಅವರಿಗೆ 15 ದಿನಗಳ ಯೋಗಕ್ಷೇಮ ರಜೆ ಹಾಗೂ ₹50,000 ಆರೋಗ್ಯ ನಿಧಿ ನೀಡುವ ವ್ಯವಸ್ಥೆಯೂ ಯೋಜನೆಯಲ್ಲಿ ಸೇರಿಸಲಾಗಿದೆ.
ಯೋಜನೆಗೆ ಕಾರಣವೇನು?
ಆಂಧ್ರಪ್ರದೇಶದಲ್ಲಿ ಜನನ ಪ್ರಮಾಣದಲ್ಲಿ ಗಣನೀಯ ಕುಸಿತ ಕಂಡುಬಂದಿದೆ. 1993ರಲ್ಲಿ ರಾಜ್ಯದ ಒಟ್ಟು ಫಲವತ್ತತೆ ದರ (ಟಿಎಫ್ಆರ್) 3.0 ಇತ್ತಾದರೆ, ಇದೀಗ ಅದು 1.4ಕ್ಕೆ ಇಳಿದಿದೆ. ಇದು ದಕ್ಷಿಣ ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಪ್ರಮಾಣವಾಗಿದೆ.
ಈ ಪರಿಸ್ಥಿತಿ ಮುಂದುವರೆದರೆ ರಾಜ್ಯದ ಆರ್ಥಿಕ ಬೆಳವಣಿಗೆಗೂ ಹಾಗೂ ಭವಿಷ್ಯದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸರ್ಕಾರ ಆತಂಕ ವ್ಯಕ್ತಪಡಿಸಿದೆ.
ಈ ಹಿನ್ನೆಲೆಯಲ್ಲಿ ಜನಸಂಖ್ಯೆ ಕುಸಿತ ತಡೆಯಲು ಮೊದಲು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 2ಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಇದ್ದ ಸ್ಪರ್ಧಾ ನಿರ್ಬಂಧವನ್ನು ಸರ್ಕಾರ ತೆರವುಗೊಳಿಸಿತ್ತು. ಇದೀಗ ದಂಪತಿಗಳನ್ನು ಹೆಚ್ಚು ಮಕ್ಕಳನ್ನು ಹೊಂದಲು ಉತ್ತೇಜಿಸುವ ಉದ್ದೇಶದಿಂದ ಹೊಸ ಯೋಜನೆಯನ್ನು ಘೋಷಿಸಲಾಗಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm