ಬ್ರೇಕಿಂಗ್ ನ್ಯೂಸ್
07-03-26 12:01 pm HK News Staffer ಕರ್ನಾಟಕ
ವಿಜಯವಾಡ, ಮಾರ್ಚ್ 06: ಜನಸಂಖ್ಯೆ ಕುಸಿತದ ಹಿನ್ನೆಲೆ ದಂಪತಿಗಳು ಹೆಚ್ಚು ಮಕ್ಕಳನ್ನು ಹೊಂದಲು ಉತ್ತೇಜನ ನೀಡುವ ಉದ್ದೇಶದಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ ಯೋಜನೆ ಘೋಷಿಸಿದೆ. 3ನೇ ಮಗುವಿಗೆ ₹25,000 ನಗದು ಪ್ರೋತ್ಸಾಹಧನ ಹಾಗೂ 18 ವರ್ಷದ ತನಕ ಉಚಿತ ಶಿಕ್ಷಣ ನೀಡಲು ಸರ್ಕಾರ ತೀರ್ಮಾನಿಸಿದ್ದು, ಇದರ ಕುರಿತ ಕರಡು ಮಸೂದೆಯನ್ನು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ. ಈ ಯೋಜನೆಯನ್ನು ಏಪ್ರಿಲ್ 1ರಿಂದ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ.
‘ಪೋಷಣ–ಶಿಕ್ಷಾ–ಸುರಕ್ಷಾ ಪ್ಯಾಕೇಜ್’ ಅಡಿಯಲ್ಲಿ ಈ ಯೋಜನೆ ಜಾರಿಯಾಗಲಿದೆ. ಇದರ ಜೊತೆಗೆ, ಕೆಲಸ ಮಾಡುವ ತಾಯಂದಿರಿಗೆ 12 ತಿಂಗಳ ಮಾತೃತ್ವ ರಜೆ ಹಾಗೂ ತಂದೆಗಳಿಗೆ 2 ತಿಂಗಳ ಪಿತೃತ್ವ ರಜೆ ನೀಡುವ ಪ್ರಸ್ತಾವನೆಯೂ ಇದೆ. ಐವಿಎಫ್ (IVF) ಮೂಲಕ ಮಗು ಪಡೆಯಲು ಬಯಸುವ ದಂಪತಿಗಳಿಗೆ ಸಬ್ಸಿಡಿ ದರದಲ್ಲಿ ಚಿಕಿತ್ಸೆ ಸೌಲಭ್ಯ ನೀಡಲಾಗುತ್ತದೆ.
ಇದೇ ವೇಳೆ, 3 ಮಕ್ಕಳನ್ನು ಹೊಂದಿರುವ ಸರ್ಕಾರಿ ನೌಕರರು ನಿವೃತ್ತಿಯ ವಯಸ್ಸಿನ ಹಂತಕ್ಕೆ ಬಂದಾಗ ಅವರಿಗೆ 15 ದಿನಗಳ ಯೋಗಕ್ಷೇಮ ರಜೆ ಹಾಗೂ ₹50,000 ಆರೋಗ್ಯ ನಿಧಿ ನೀಡುವ ವ್ಯವಸ್ಥೆಯೂ ಯೋಜನೆಯಲ್ಲಿ ಸೇರಿಸಲಾಗಿದೆ.
ಯೋಜನೆಗೆ ಕಾರಣವೇನು?
ಆಂಧ್ರಪ್ರದೇಶದಲ್ಲಿ ಜನನ ಪ್ರಮಾಣದಲ್ಲಿ ಗಣನೀಯ ಕುಸಿತ ಕಂಡುಬಂದಿದೆ. 1993ರಲ್ಲಿ ರಾಜ್ಯದ ಒಟ್ಟು ಫಲವತ್ತತೆ ದರ (ಟಿಎಫ್ಆರ್) 3.0 ಇತ್ತಾದರೆ, ಇದೀಗ ಅದು 1.4ಕ್ಕೆ ಇಳಿದಿದೆ. ಇದು ದಕ್ಷಿಣ ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಪ್ರಮಾಣವಾಗಿದೆ.
ಈ ಪರಿಸ್ಥಿತಿ ಮುಂದುವರೆದರೆ ರಾಜ್ಯದ ಆರ್ಥಿಕ ಬೆಳವಣಿಗೆಗೂ ಹಾಗೂ ಭವಿಷ್ಯದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸರ್ಕಾರ ಆತಂಕ ವ್ಯಕ್ತಪಡಿಸಿದೆ.
ಈ ಹಿನ್ನೆಲೆಯಲ್ಲಿ ಜನಸಂಖ್ಯೆ ಕುಸಿತ ತಡೆಯಲು ಮೊದಲು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 2ಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಇದ್ದ ಸ್ಪರ್ಧಾ ನಿರ್ಬಂಧವನ್ನು ಸರ್ಕಾರ ತೆರವುಗೊಳಿಸಿತ್ತು. ಇದೀಗ ದಂಪತಿಗಳನ್ನು ಹೆಚ್ಚು ಮಕ್ಕಳನ್ನು ಹೊಂದಲು ಉತ್ತೇಜಿಸುವ ಉದ್ದೇಶದಿಂದ ಹೊಸ ಯೋಜನೆಯನ್ನು ಘೋಷಿಸಲಾಗಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm