ಬ್ರೇಕಿಂಗ್ ನ್ಯೂಸ್
07-03-26 12:01 pm HK News Staffer ಕರ್ನಾಟಕ
ವಿಜಯವಾಡ, ಮಾರ್ಚ್ 06: ಜನಸಂಖ್ಯೆ ಕುಸಿತದ ಹಿನ್ನೆಲೆ ದಂಪತಿಗಳು ಹೆಚ್ಚು ಮಕ್ಕಳನ್ನು ಹೊಂದಲು ಉತ್ತೇಜನ ನೀಡುವ ಉದ್ದೇಶದಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ ಯೋಜನೆ ಘೋಷಿಸಿದೆ. 3ನೇ ಮಗುವಿಗೆ ₹25,000 ನಗದು ಪ್ರೋತ್ಸಾಹಧನ ಹಾಗೂ 18 ವರ್ಷದ ತನಕ ಉಚಿತ ಶಿಕ್ಷಣ ನೀಡಲು ಸರ್ಕಾರ ತೀರ್ಮಾನಿಸಿದ್ದು, ಇದರ ಕುರಿತ ಕರಡು ಮಸೂದೆಯನ್ನು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ. ಈ ಯೋಜನೆಯನ್ನು ಏಪ್ರಿಲ್ 1ರಿಂದ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ.
‘ಪೋಷಣ–ಶಿಕ್ಷಾ–ಸುರಕ್ಷಾ ಪ್ಯಾಕೇಜ್’ ಅಡಿಯಲ್ಲಿ ಈ ಯೋಜನೆ ಜಾರಿಯಾಗಲಿದೆ. ಇದರ ಜೊತೆಗೆ, ಕೆಲಸ ಮಾಡುವ ತಾಯಂದಿರಿಗೆ 12 ತಿಂಗಳ ಮಾತೃತ್ವ ರಜೆ ಹಾಗೂ ತಂದೆಗಳಿಗೆ 2 ತಿಂಗಳ ಪಿತೃತ್ವ ರಜೆ ನೀಡುವ ಪ್ರಸ್ತಾವನೆಯೂ ಇದೆ. ಐವಿಎಫ್ (IVF) ಮೂಲಕ ಮಗು ಪಡೆಯಲು ಬಯಸುವ ದಂಪತಿಗಳಿಗೆ ಸಬ್ಸಿಡಿ ದರದಲ್ಲಿ ಚಿಕಿತ್ಸೆ ಸೌಲಭ್ಯ ನೀಡಲಾಗುತ್ತದೆ.
ಇದೇ ವೇಳೆ, 3 ಮಕ್ಕಳನ್ನು ಹೊಂದಿರುವ ಸರ್ಕಾರಿ ನೌಕರರು ನಿವೃತ್ತಿಯ ವಯಸ್ಸಿನ ಹಂತಕ್ಕೆ ಬಂದಾಗ ಅವರಿಗೆ 15 ದಿನಗಳ ಯೋಗಕ್ಷೇಮ ರಜೆ ಹಾಗೂ ₹50,000 ಆರೋಗ್ಯ ನಿಧಿ ನೀಡುವ ವ್ಯವಸ್ಥೆಯೂ ಯೋಜನೆಯಲ್ಲಿ ಸೇರಿಸಲಾಗಿದೆ.
ಯೋಜನೆಗೆ ಕಾರಣವೇನು?
ಆಂಧ್ರಪ್ರದೇಶದಲ್ಲಿ ಜನನ ಪ್ರಮಾಣದಲ್ಲಿ ಗಣನೀಯ ಕುಸಿತ ಕಂಡುಬಂದಿದೆ. 1993ರಲ್ಲಿ ರಾಜ್ಯದ ಒಟ್ಟು ಫಲವತ್ತತೆ ದರ (ಟಿಎಫ್ಆರ್) 3.0 ಇತ್ತಾದರೆ, ಇದೀಗ ಅದು 1.4ಕ್ಕೆ ಇಳಿದಿದೆ. ಇದು ದಕ್ಷಿಣ ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಪ್ರಮಾಣವಾಗಿದೆ.
ಈ ಪರಿಸ್ಥಿತಿ ಮುಂದುವರೆದರೆ ರಾಜ್ಯದ ಆರ್ಥಿಕ ಬೆಳವಣಿಗೆಗೂ ಹಾಗೂ ಭವಿಷ್ಯದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸರ್ಕಾರ ಆತಂಕ ವ್ಯಕ್ತಪಡಿಸಿದೆ.
ಈ ಹಿನ್ನೆಲೆಯಲ್ಲಿ ಜನಸಂಖ್ಯೆ ಕುಸಿತ ತಡೆಯಲು ಮೊದಲು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 2ಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಇದ್ದ ಸ್ಪರ್ಧಾ ನಿರ್ಬಂಧವನ್ನು ಸರ್ಕಾರ ತೆರವುಗೊಳಿಸಿತ್ತು. ಇದೀಗ ದಂಪತಿಗಳನ್ನು ಹೆಚ್ಚು ಮಕ್ಕಳನ್ನು ಹೊಂದಲು ಉತ್ತೇಜಿಸುವ ಉದ್ದೇಶದಿಂದ ಹೊಸ ಯೋಜನೆಯನ್ನು ಘೋಷಿಸಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 12:18 pm
HK News Staffer
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm