ಬ್ರೇಕಿಂಗ್ ನ್ಯೂಸ್
08-03-26 07:51 pm HK News Staffer ಕರ್ನಾಟಕ
ಕಲಬುರಗಿ ಜಿಲ್ಲೆ , ಮಾ 08: 'ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಬ್ಬ ಸರ್ವಾಧಿಕಾರಿ. ಎಫ್ಸ್ಟೀನ್ ಫೈಲ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರು ಬಂದಿರುವುದರಿಂದ ಟ್ರಂಪ್ ತಾಳಕ್ಕೆ ತಕ್ಕಂತೆ ಕುಣಿಯುವ ಗುಲಾಮರಾಗಿದ್ದಾರೆ. ಟ್ರಂಪ್ ಜೊತೆ ಸ್ನೇಹ ಮಾಡಿಕೊಂಡು ನಮ್ಮ ದೇಶವನ್ನು ಗಿರವಿ ಇಟ್ಟಿದ್ದಾರೆ' ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಚಿತ್ತಾಪುರ ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ₹ 1069 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ಬೆಳಿಗ್ಗೆ ಚಹಾ ಕುಡಿಯವ ಸಮಯಕ್ಕೆ ಟ್ರಂಪ್ ಅವರೊಂದಿಗೆ ಮಾತನಾಡುವುದಾಗಿ ಮೋದಿ ಹೇಳುತ್ತಾರೆ. ಅಷ್ಟೊಂದು ಸ್ನೇಹ ಇದ್ದರೆ ನಮ್ಮ ದೇಶದ ಮೇಲೆ ಇಷ್ಟೊಂದು ಪ್ರಮಾಣದಲ್ಲಿ ತೆರಿಗೆ ಹೇರುತ್ತಿರುವುದೇಕೆ ? ಯಾವ ದೇಶದೊಂದಿಗೆ ವ್ಯವಹಾರ ಮಾಡಬೇಕು ಎಂದು ಹೇಳುತ್ತಿರುವುದೇಕೆ ? ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಲು ಮೋದಿ ಅವರಿಗೆ ಏಕೆ ಆಗುವುದಿಲ್ಲ' ಎಂದು ಪ್ರಶ್ನಿಸಿದರು.
ಭಾರತದ ಆಹ್ವಾನದ ಮೇರೆಗೆ ವಿಶಾಖಪಟ್ಟಣದಲ್ಲಿ ಆಯೋಜಿಸಿದ್ದ ನೌಕಾಸೇನಾ ತಾಲೀಮಿನಲ್ಲಿ ಭಾಗವಹಿಸಲು ಇರಾನ್ನಿಂದ ಬಂದಿದ್ದ ಯುದ್ಧನೌಕೆಯನ್ನು ಅಮೆರಿಕದ ಜಲಾಂತರ್ಗಾಮಿಯು ಬಾಂಬ್ ದಾಳಿ ನಡೆಸಿ ಮುಳುಗಿಸಿ ಹಲವಾರು ಇರಾನ್ ಸೈನಿಕರ ಸಾವಿಗೆ ಕಾರಣವಾಗಿದೆ. ಅಷ್ಟೊಂದು ಧೈರ್ಯ ಅವರಿಗೆ ಹೇಗೆ ಬಂತು? ಇದನ್ನು ಪ್ರಶ್ನಿಸುವ ಎದೆಗಾರಿಕೆಯೂ ದೇಶದ ಪ್ರಧಾನಿಗೆ ಇಲ್ಲವೇ? ಇಂದಿರಾಗಾಂಧಿ ಅವರು ಪ್ರಧಾನಿಯಾಗಿದ್ದ ವೇಳೆ ಬಾಂಗ್ಲಾ ದೇಶಕ್ಕೆ ಸ್ವಾತಂತ್ರ್ಯ ಕೊಡಿಸುವ ವೇಳೆ ಅಮೆರಿಕದ ಯುದ್ಧನೌಕೆಯನ್ನು ಕಳುಹಿಸಿ ಭಾರತವನ್ನು ಬೆದರಿಸಲು ನೋಡಿತು. ಆದರೆ, ಇಂದಿರಾಗಾಂಧಿ ಅವರು ಅಮೆರಿಕದ ಬೆದರಿಕೆಗೆ ಮಣಿಯಲಿಲ್ಲ. ಆದರೆ, ಮೋದಿ ಏಕೆ ಅಮೆರಿಕದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ' ಎಂದು ಟೀಕಿಸಿದರು.
ನರೇಂದ್ರ ಮೋದಿ ತಮ್ಮ ವಿದೇಶಾಂಗ ನೀತಿಯಿಂದಾಗಿ ದೇಶವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಹಾಳುಮಾಡುತ್ತಿದ್ದಾರೆ. ಜವಾಹರ ಲಾಲ್ ನೆಹರು ಪ್ರಧಾನಿಯಾಗಿದ್ದಾಗ ಆಲಿಪ್ತ ನೀತಿಯನ್ನು ಅನುಸರಿಸಿದ್ದರಿಂದ ವಿಶ್ವಶಾಂತಿಗೆ ಕಾರಣವಾಗಿತ್ತು. ಆದರೆ, ಮೋದಿ ಈಗ ಮಾಡುತ್ತಿರುವುದೇನು? ಮೋದಿ ಇಸ್ರೇಲ್ಗೆ ಹೋಗಿ ಕೊರಳಲ್ಲಿ ಒಂದು ಬಿಲ್ಲೆ ಹಾಕಿಕೊಂಡು ಬಂದ ನಂತರ ಇಸ್ರೇಲ್ ಇರಾನ್ ಮೇಲೆ ಬಾಂಬ್ ಹಾಕಿತು. ದೇಶದ ಮಖ್ಯಸ್ಥ ಖಮೇನಿ ಅವರನ್ನು ಅಮೆರಿಕ-ಇಸ್ರೇಲ್ ಪಡೆಗಳು ಹತ್ಯೆ ಮಾಡಿದವು. ಒಂದು ದೇಶದ ಮುಖ್ಯಸ್ಥನನ್ನು ಹತ್ಯೆ ಮಾಡಿದರೆ ಆ ದೇಶ ಶಾಂತಿಯಿಂದ ಇರುತ್ತದೆಯೇ? ಇದು ವಿಶ್ವ ಶಾಂತಿಯಿಂದ ಇರಲು ಸಾಧ್ಯವಾಗುತ್ತದೆಯಾ? ಎಂದು ಖರ್ಗೆ ಪ್ರಶ್ನಿಸಿದರು.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 08:49 pm
HK News Staffer
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm