ಬ್ರೇಕಿಂಗ್ ನ್ಯೂಸ್
08-03-26 10:17 pm HK News Staffer ಕರ್ನಾಟಕ
ಬೆಳಗಾವಿ, ಮಾರ್ಚ್ 8: ಚಿಕ್ಕೋಡಿ ತಾಲ್ಲೂಕಿನ ಹತ್ತರವಾಟ ಗ್ರಾಮದ ಕಿರಣ್ ಸಣ್ಣಪ್ಪ ಕಮತೆ (29) ಅವರು ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 53ನೇ ರ್ಯಾಂಕ್ ಹಾಗೂ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆಯುವ ಮೂಲಕ ಮಹತ್ವದ ಸಾಧನೆ ಮೆರೆದಿದ್ದಾರೆ.
ಬೆಳಗಾವಿಯ ಗೋಗಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ಸಿವಿಲ್ ಪದವಿ ಪಡೆದಿರುವ ಕಿರಣ್ ಕಮತೆ ಅವರು, ಸದ್ಯ ಬೆಂಗಳೂರಿನ ಲೋಕೋಪಯೋಗಿ ಇಲಾಖೆಯ ಮುಖ್ಯ ಕಚೇರಿಯಲ್ಲಿ ಸಹಾಯಕ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕಿರಣ್ ಅವರ ತಂದೆ ಡಾ.ಸಣ್ಣಪ್ಪ ಕಮತೆ ಅವರು ನಿಡಸೋಸಿಯ ಹೀರಾ ಶುಗರ್ಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕೆಲಸ ಮಾಡುತ್ತಿದ್ದು, ತಾಯಿ ರುಕ್ಮಿಣಿ ಗೃಹಿಣಿಯಾಗಿದ್ದಾರೆ. ಕಿರಣ್ ಅವರ ವಿದ್ಯಾಭ್ಯಾಸದ ಹಾದಿ ವೈವಿಧ್ಯಮಯವಾಗಿದೆ. ಅವರು 1 ಮತ್ತು 2ನೇ ತರಗತಿಯನ್ನು ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಅಂಬೆಜೋಗಾಯಿಯ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿದ್ದಾರೆ. ಬಳಿಕ 3ರಿಂದ 8ನೇ ತರಗತಿ ವರೆಗೆ ಹುಬ್ಬಳ್ಳಿಯ ಎಂ.ಆರ್. ಸಾಖರೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದರು. 9 ಮತ್ತು 10ನೇ ತರಗತಿಯನ್ನು ಗದಗದ ಕೆಎಲ್ಇ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ಣಗೊಳಿಸಿ, ನಿಪ್ಪಾಣಿಯ ಜಿ.ಐ. ಬಾಗೇವಾಡಿ ಕಾಲೇಜಿನಲ್ಲಿ ಪಿಯುಸಿ ಸೈನ್ಸ್ ಓದಿದರು. ನಂತರ ಗೋಗಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ಸಿವಿಲ್ ಪದವಿ ಪಡೆದರು. 2023ರಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಆಗಿ ನೇಮಕಗೊಂಡಿದ್ದರು.
ಯುಪಿಎಸ್ಸಿ ಸಾಧನೆ ಕುರಿತು ಮಾತನಾಡಿದ ಕಿರಣ್ ಕಮತೆ, “ಇದು ನನ್ನ ಕೊನೆಯ ಅವಕಾಶವಾಗಿತ್ತು. ಕೆಲಸ ಮಾಡುತ್ತಲೇ ದಿನಕ್ಕೆ ಐದರಿಂದ ಆರು ಗಂಟೆಗಳ ಕಾಲ ಓದುತ್ತಿದ್ದೆ. ಏನಾದರೂ ಆಗಲಿ ಈ ಬಾರಿ ಪಾಸ್ ಆಗಲೇಬೇಕು ಎಂಬ ಸಂಕಲ್ಪದಿಂದ ಪರೀಕ್ಷೆ ಬರೆದಿದ್ದೆ. 250 ರ್ಯಾಂಕ್ ಒಳಗೆ ಬರುವ ನಿರೀಕ್ಷೆ ಇತ್ತು. ಆದರೆ 53ನೇ ರ್ಯಾಂಕ್ ಬಂದಿರುವುದು ಹಾಗೂ ರಾಜ್ಯಕ್ಕೆ ಪ್ರಥಮ ಸ್ಥಾನ ಸಿಕ್ಕಿರುವುದು ತುಂಬಾ ಸಂತೋಷ ತಂದಿದೆ” ಎಂದು ಹೇಳಿದರು.
“ಬಾಲ್ಯದಲ್ಲೇ ತಂದೆಯವರು ಯುಪಿಎಸ್ಸಿ ಕನಸು ಬಿತ್ತಿದ್ದರು. ಕಳೆದ ಆರು ವರ್ಷಗಳಿಂದ ಸತತ ಪ್ರಯತ್ನ ಮಾಡುತ್ತಿದ್ದೆ. ಈ ಸಾಧನೆಯನ್ನು ತಂದೆ-ತಾಯಿಗೆ ಅರ್ಪಿಸುತ್ತೇನೆ. ಪತ್ನಿ ಲೋಚನಾ ಅವರ ಸಹಕಾರವೂ ಮಹತ್ವದ್ದಾಗಿತ್ತು. ಸಹೋದರಿ, ಸಂಬಂಧಿಕರು, ಸ್ನೇಹಿತರು ಹಾಗೂ ಸಹೋದ್ಯೋಗಿಗಳು ಎಲ್ಲರೂ ಪ್ರೋತ್ಸಾಹ ನೀಡಿದರು. ಅವರಿಗೆಲ್ಲ ಧನ್ಯವಾದಗಳು” ಎಂದು ಕಿರಣ್ ಭಾವುಕರಾಗಿ ಹೇಳಿದರು.
ಕಿರಣ್ ಅವರ ತಂದೆ ಡಾ. ಸಣ್ಣಪ್ಪ ಕಮತೆ ಮಾತನಾಡಿ, “ಶಿಕ್ಷಕರ ಮಕ್ಕಳು ಹಾಗೂ ಸಾಮಾನ್ಯ ಕುಟುಂಬದಿಂದ ಬಂದ ಮಕ್ಕಳು ಸಾಧನೆ ಮಾಡುವುದು ಅತ್ಯಂತ ಹೆಮ್ಮೆಯ ಸಂಗತಿ. ಇದು ಇತರರಿಗೆ ಪ್ರೇರಣೆಯಾಗುತ್ತದೆ. ನಮ್ಮ ಮಗನ ಕಠಿಣ ಪರಿಶ್ರಮಕ್ಕೆ ಇಂದು ಫಲ ಸಿಕ್ಕಿದೆ. ಬಹಳ ಸಂತೋಷವಾಗುತ್ತಿದೆ” ಎಂದು ಹರ್ಷ ವ್ಯಕ್ತಪಡಿಸಿದರು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm