ಬ್ರೇಕಿಂಗ್ ನ್ಯೂಸ್
09-03-26 04:17 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 9: ಹೈಕಮಾಂಡ್ ಅವಕಾಶ ಕೊಟ್ಟರೆ ಮುಂದಿನ ಎರಡು ವರ್ಷವೂ ನಾನೇ ಆಯವ್ಯಯ ಮಂಡಿಸುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಯ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿವಿ ನೆಟ್ಟಗಾಗಿಸಿದ್ದು ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಿ ಕುತೂಹಲ ಮೂಡಿಸಿದ್ದಾರೆ.
ಭಾನುವಾರ ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅಲ್ಲಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ವಿಮಾನದಲ್ಲಿ ದೆಹಲಿ ತೆರಳಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ದಿಲ್ಲಿಗೆ ತೆರಳುತ್ತಿರುವುದಾಗಿ ಡಿ.ಕೆ.ಶಿವಕುಮಾರ್ ಕಚೇರಿ ಮಾಹಿತಿ ನೀಡಿದೆ. ಆದರೆ ವಿಧಾನ ಮಂಡಲ ಬಜೆಟ್ ಅಧಿವೇಶನದ ಸಂದರ್ಭದಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆ ಸಂಬಂಧ ಚರ್ಚೆಗಳು ಬಿರುಸುಗೊಂಡಿವೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ರಾಜಕೀಯ ಚರ್ಚೆಗಳನ್ನು ಹುಟ್ಟು ಹಾಕಿದೆ.
ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪ ಚುನಾವಣೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) 5 ಮಹಾನಗರ ಪಾಲಿಕೆಗಳು, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳು ನಡೆಯಬೇಕಿದೆ. ಈ ಸಂದರ್ಭದಲ್ಲಿ ಪಕ್ಷವನ್ನು ಗೆಲ್ಲಿಸಿಕೊಂಡು ಬರಬೇಕಾದರೆ ‘ಸಮರ್ಥ ನಾಯಕತ್ವ ಬೇಕು’ ಎಂಬ ಬೇಡಿಕೆಯನ್ನು ಡಿ.ಕೆ.ಶಿವಕುಮಾರ್ ಮುಂದಿಟ್ಟಿದ್ದಾರೆ ಎನ್ನಲಾಗಿದೆ.
ಶಿವಕುಮಾರ್ ಅವರಿಗೆ ನಿಷ್ಠರಾಗಿರುವ ಕೆಲವು ಶಾಸಕರು, ವಿಧಾನಸಭೆಯ ಬಜೆಟ್ ಅಧಿವೇಶನದ ನಂತರ ತಮ್ಮ ನಾಯಕನನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಪಕ್ಷದ ಹೈಕಮಾಂಡ್ ಅನ್ನು ಒತ್ತಾಯಿಸಲು ದೆಹಲಿಗೆ ಪ್ರಯಾಣಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಬಜೆಟ್ ಅಧಿವೇಶನವು ಮಾರ್ಚ್ 27 ರಂದು ಮುಕ್ತಾಯಗೊಳ್ಳಲಿದೆ.
ಏತನ್ಮಧ್ಯೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಆರು ವರ್ಷಗಳನ್ನು ಪೂರೈಸಿದ ನೆನಪಿಗಾಗಿ ಶಿವಕುಮಾರ್ ಅವರು ಮಾರ್ಚ್ 10 ರಂದು ಎಲ್ಲಾ ಸಚಿವರು, ಕಾಂಗ್ರೆಸ್ ಶಾಸಕರು ಮತ್ತು ಎಂಎಲ್ಸಿಗಳಿಗೆ ಭೋಜನ ಕೂಟವನ್ನು ಆಯೋಜಿಸಿದ್ದಾರೆ. ಭೋಜನ ಕೂಟವನ್ನು ಎಲ್ಲ ಶಾಸಕರ ವಿಶ್ವಾಸ ಗಳಿಸುವುದಕ್ಕಾಗಿ ಏರ್ಪಡಿಸಿದ್ದಾರೆಂದು ಹೇಳಲಾಗುತ್ತಿದ್ದರೂ ಅದೇ ಸಮಯದಲ್ಲಿ ಡಿಕೆ ದೆಹಲಿಗೆ ದೌಡಾಯಿಸಿ ಅಚ್ಚರಿ ಮೂಡಿಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 12:18 pm
HK News Staffer
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm