ಬ್ರೇಕಿಂಗ್ ನ್ಯೂಸ್
09-03-26 04:17 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 9: ಹೈಕಮಾಂಡ್ ಅವಕಾಶ ಕೊಟ್ಟರೆ ಮುಂದಿನ ಎರಡು ವರ್ಷವೂ ನಾನೇ ಆಯವ್ಯಯ ಮಂಡಿಸುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಯ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿವಿ ನೆಟ್ಟಗಾಗಿಸಿದ್ದು ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಿ ಕುತೂಹಲ ಮೂಡಿಸಿದ್ದಾರೆ.
ಭಾನುವಾರ ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅಲ್ಲಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ವಿಮಾನದಲ್ಲಿ ದೆಹಲಿ ತೆರಳಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ದಿಲ್ಲಿಗೆ ತೆರಳುತ್ತಿರುವುದಾಗಿ ಡಿ.ಕೆ.ಶಿವಕುಮಾರ್ ಕಚೇರಿ ಮಾಹಿತಿ ನೀಡಿದೆ. ಆದರೆ ವಿಧಾನ ಮಂಡಲ ಬಜೆಟ್ ಅಧಿವೇಶನದ ಸಂದರ್ಭದಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆ ಸಂಬಂಧ ಚರ್ಚೆಗಳು ಬಿರುಸುಗೊಂಡಿವೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ರಾಜಕೀಯ ಚರ್ಚೆಗಳನ್ನು ಹುಟ್ಟು ಹಾಕಿದೆ.
ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪ ಚುನಾವಣೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) 5 ಮಹಾನಗರ ಪಾಲಿಕೆಗಳು, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳು ನಡೆಯಬೇಕಿದೆ. ಈ ಸಂದರ್ಭದಲ್ಲಿ ಪಕ್ಷವನ್ನು ಗೆಲ್ಲಿಸಿಕೊಂಡು ಬರಬೇಕಾದರೆ ‘ಸಮರ್ಥ ನಾಯಕತ್ವ ಬೇಕು’ ಎಂಬ ಬೇಡಿಕೆಯನ್ನು ಡಿ.ಕೆ.ಶಿವಕುಮಾರ್ ಮುಂದಿಟ್ಟಿದ್ದಾರೆ ಎನ್ನಲಾಗಿದೆ.
ಶಿವಕುಮಾರ್ ಅವರಿಗೆ ನಿಷ್ಠರಾಗಿರುವ ಕೆಲವು ಶಾಸಕರು, ವಿಧಾನಸಭೆಯ ಬಜೆಟ್ ಅಧಿವೇಶನದ ನಂತರ ತಮ್ಮ ನಾಯಕನನ್ನು ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಪಕ್ಷದ ಹೈಕಮಾಂಡ್ ಅನ್ನು ಒತ್ತಾಯಿಸಲು ದೆಹಲಿಗೆ ಪ್ರಯಾಣಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಬಜೆಟ್ ಅಧಿವೇಶನವು ಮಾರ್ಚ್ 27 ರಂದು ಮುಕ್ತಾಯಗೊಳ್ಳಲಿದೆ.
ಏತನ್ಮಧ್ಯೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಆರು ವರ್ಷಗಳನ್ನು ಪೂರೈಸಿದ ನೆನಪಿಗಾಗಿ ಶಿವಕುಮಾರ್ ಅವರು ಮಾರ್ಚ್ 10 ರಂದು ಎಲ್ಲಾ ಸಚಿವರು, ಕಾಂಗ್ರೆಸ್ ಶಾಸಕರು ಮತ್ತು ಎಂಎಲ್ಸಿಗಳಿಗೆ ಭೋಜನ ಕೂಟವನ್ನು ಆಯೋಜಿಸಿದ್ದಾರೆ. ಭೋಜನ ಕೂಟವನ್ನು ಎಲ್ಲ ಶಾಸಕರ ವಿಶ್ವಾಸ ಗಳಿಸುವುದಕ್ಕಾಗಿ ಏರ್ಪಡಿಸಿದ್ದಾರೆಂದು ಹೇಳಲಾಗುತ್ತಿದ್ದರೂ ಅದೇ ಸಮಯದಲ್ಲಿ ಡಿಕೆ ದೆಹಲಿಗೆ ದೌಡಾಯಿಸಿ ಅಚ್ಚರಿ ಮೂಡಿಸಿದ್ದಾರೆ.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm