ಬ್ರೇಕಿಂಗ್ ನ್ಯೂಸ್
09-03-26 05:44 pm HK News Staffer ಕರ್ನಾಟಕ
ಮಂಡ್ಯ, ಮಾ.9 : ತಮ್ಮ ಮಗುವನ್ನು ಕೊಲ್ಲಲು ಯತ್ನಿಸಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಹೊಸಕೋಟೆ ಗ್ರಾಮದ ದರ್ಶನ್ (29) ಮತ್ತು ಪತ್ನಿ ದಿವ್ಯಶ್ರೀ (25) ಸಾವನ್ನಪ್ಪಿದವರು.
ಆತ್ಮಹತ್ಯೆಗೂ ಮುನ್ನ ತಮ್ಮ ಎರಡು ವರ್ಷದ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟ ದಂಪತಿ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಎರಡು ವರ್ಷದ ಮಗುವಿತ್ತು. ಕೆ.ಆರ್. ಪೇಟೆಯ ಜಯನಗರ ಬಡಾವಣೆ ಮನೆಯೊಂದರಲ್ಲಿ ಬಾಡಿಗೆಗೆ ಇದ್ದರು. ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತಮ್ಮ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾರೆ. ಆದರೆ, ಅಸ್ವಸ್ಥಗೊಂಡ ಮಗು ಬದುಕುಳಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ದರ್ಶನ್ ಕಾರು ಚಾಲಕನಾಗಿದ್ದರೆ, ದಿವ್ಯ ಪ್ಯಾರಾ ಮೆಡಿಕಲ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಕಾರು ಚಾಲಕನಾಗಿದ್ದ ದರ್ಶನ್ ಡ್ರೈವಿಂಗ್ ಜೊತೆಗೆ ಕೃಷಿ ಮಾಡುತ್ತಿದ್ದ. ಕೆಆರ್ ಪೇಟೆಯಲ್ಲಿ ವಾಸವಾಗಿದ್ದ ದಂಪತಿ ನಡುವೆ ಇಂದು ಬೆಳಗ್ಗೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ ಎನ್ನಲಾಗ್ತಿದೆ. ಗಲಾಟೆ ಬಳಿಕ ಮೊದಲು ನೇಣು ಬಿಗಿದುಕೊಂಡು ದಿವ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಪತ್ನಿ ಆತ್ಮಹತ್ಯೆ ಬಳಿಕ ಪತಿ ದರ್ಶನ್, ದಿವ್ಯಾ ಕುಟುಂಬಕ್ಕೆ ವಿಡಿಯೋ ಕಾಲ್ ಮಾಡಿ ತಾನು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಕ್ಷುಲ್ಲಕ ಕಾರಣದ ಜಗಳಕ್ಕೆ ಸುಂದರ ಸಂಸಾರ ನುಚ್ಚು ನೂರಾಗಿದೆ. ಪತ್ನಿ ಸಾವಿನ ಬಳಿಕ ಮಗಳನ್ನ ಕೂಡ ಕೊಲೆ ಮಾಡಲು ದರ್ಶನ್ ಮುಂದಾಗಿದ್ದ. ಕತ್ತು ಹಿಸುಕಿದ ವೇಳೆ ಮಗು ಪ್ರಜ್ಞೆ ತಪ್ಪಿದ್ದು, ಸತ್ತಿದೆ ಎಂದು ಬಿಟ್ಟು ಹೋಗಿದ್ದ. ಆದರೆ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಮಗು ಸತ್ತು ಹೋಯ್ತು ಎಂದು ತಿಳಿದು ದರ್ಶನ್ ನೇಣಿಗೆ ಶರಣಾಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 12:18 pm
HK News Staffer
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm