ಬ್ರೇಕಿಂಗ್ ನ್ಯೂಸ್
09-03-26 05:44 pm HK News Staffer ಕರ್ನಾಟಕ
ಮಂಡ್ಯ, ಮಾ.9 : ತಮ್ಮ ಮಗುವನ್ನು ಕೊಲ್ಲಲು ಯತ್ನಿಸಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಹೊಸಕೋಟೆ ಗ್ರಾಮದ ದರ್ಶನ್ (29) ಮತ್ತು ಪತ್ನಿ ದಿವ್ಯಶ್ರೀ (25) ಸಾವನ್ನಪ್ಪಿದವರು.
ಆತ್ಮಹತ್ಯೆಗೂ ಮುನ್ನ ತಮ್ಮ ಎರಡು ವರ್ಷದ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟ ದಂಪತಿ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಎರಡು ವರ್ಷದ ಮಗುವಿತ್ತು. ಕೆ.ಆರ್. ಪೇಟೆಯ ಜಯನಗರ ಬಡಾವಣೆ ಮನೆಯೊಂದರಲ್ಲಿ ಬಾಡಿಗೆಗೆ ಇದ್ದರು. ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತಮ್ಮ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾರೆ. ಆದರೆ, ಅಸ್ವಸ್ಥಗೊಂಡ ಮಗು ಬದುಕುಳಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ದರ್ಶನ್ ಕಾರು ಚಾಲಕನಾಗಿದ್ದರೆ, ದಿವ್ಯ ಪ್ಯಾರಾ ಮೆಡಿಕಲ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಕಾರು ಚಾಲಕನಾಗಿದ್ದ ದರ್ಶನ್ ಡ್ರೈವಿಂಗ್ ಜೊತೆಗೆ ಕೃಷಿ ಮಾಡುತ್ತಿದ್ದ. ಕೆಆರ್ ಪೇಟೆಯಲ್ಲಿ ವಾಸವಾಗಿದ್ದ ದಂಪತಿ ನಡುವೆ ಇಂದು ಬೆಳಗ್ಗೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ ಎನ್ನಲಾಗ್ತಿದೆ. ಗಲಾಟೆ ಬಳಿಕ ಮೊದಲು ನೇಣು ಬಿಗಿದುಕೊಂಡು ದಿವ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಪತ್ನಿ ಆತ್ಮಹತ್ಯೆ ಬಳಿಕ ಪತಿ ದರ್ಶನ್, ದಿವ್ಯಾ ಕುಟುಂಬಕ್ಕೆ ವಿಡಿಯೋ ಕಾಲ್ ಮಾಡಿ ತಾನು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಕ್ಷುಲ್ಲಕ ಕಾರಣದ ಜಗಳಕ್ಕೆ ಸುಂದರ ಸಂಸಾರ ನುಚ್ಚು ನೂರಾಗಿದೆ. ಪತ್ನಿ ಸಾವಿನ ಬಳಿಕ ಮಗಳನ್ನ ಕೂಡ ಕೊಲೆ ಮಾಡಲು ದರ್ಶನ್ ಮುಂದಾಗಿದ್ದ. ಕತ್ತು ಹಿಸುಕಿದ ವೇಳೆ ಮಗು ಪ್ರಜ್ಞೆ ತಪ್ಪಿದ್ದು, ಸತ್ತಿದೆ ಎಂದು ಬಿಟ್ಟು ಹೋಗಿದ್ದ. ಆದರೆ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಮಗು ಸತ್ತು ಹೋಯ್ತು ಎಂದು ತಿಳಿದು ದರ್ಶನ್ ನೇಣಿಗೆ ಶರಣಾಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm