ಬ್ರೇಕಿಂಗ್ ನ್ಯೂಸ್
09-03-26 09:51 pm HK News Staffer ಕರ್ನಾಟಕ
ಕಲಬುರಗಿ, ಮಾರ್ಚ್ 09: ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ನಡೆದ ಶರಣಬಸವೇಶ್ವರ ಜಾತ್ರೆಯ ರಥೋತ್ಸವ ವೇಳೆ ಭೀಕರ ದುರ್ಘಟನೆ ಸಂಭವಿಸಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಥದ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮ ಮಹಿಳೆಯ ಎರಡೂ ಕಾಲುಗಳು ಕಟ್ ಆಗಿದ್ದು ಸದ್ಯ ಮಹಿಳೆ ಆಸ್ಪತ್ರೆಯ ತುರ್ತು ನಿಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಾಯಗೊಂಡ ಮಹಿಳೆಯನ್ನು ಅರಳಗುಂಡಗಿ ಗ್ರಾಮದ ನಿವಾಸಿ ನಾಗಮ್ಮ ಎಂದು ಗುರುತಿಸಲಾಗಿದೆ. ಅರಳಗುಂಡಗಿ ಗ್ರಾಮವು ಶರಣಬಸವೇಶ್ವರರ ಜನ್ಮಸ್ಥಳವಾಗಿರುವುದರಿಂದ ಪ್ರತಿವರ್ಷವೂ ಇಲ್ಲಿ ಜಾತ್ರೆಯನ್ನು ಭಕ್ತಿಭಾವದಿಂದ ಆಚರಿಸಲಾಗುತ್ತದೆ. ಜಾತ್ರೆಯ ಅಂಗವಾಗಿ ಶನಿವಾರ ಸಂಜೆ ಸುಮಾರು 6 ಗಂಟೆ ಸುಮಾರಿಗೆ ರಥೋತ್ಸವ ಆರಂಭವಾಗಿತ್ತು.
ರಥೋತ್ಸವ ಸಂದರ್ಭದಲ್ಲಿ ಭಕ್ತರು ಹಾಗೂ ಗ್ರಾಮಸ್ಥರು ಉತ್ಸಾಹದಿಂದ ರಥವನ್ನು ಎಳೆಯಲು ಮುಂದಾಗಿದ್ದರು. ಆದರೆ ಸ್ಥಳದಲ್ಲಿ ಜನಸಮೂಹ ಹೆಚ್ಚಾಗಿದ್ದ ಕಾರಣ ರಥವು ಏಕಾಏಕಿ ನಿಯಂತ್ರಣ ತಪ್ಪಿ ಜನರು ನಿಂತಿದ್ದ ದಿಕ್ಕಿನತ್ತ ಚಲಿಸಲು ಆರಂಭಿಸಿದೆ.
ಈ ವೇಳೆ ರಥದ ಸಮೀಪದಲ್ಲಿದ್ದ ನಾಗಮ್ಮ ಅವರು ತಪ್ಪಿಸಿಕೊಳ್ಳಲು ಸಾಧ್ಯವಾಗದೆ ರಥದ ಚಕ್ರಕ್ಕೆ ಸಿಲುಕಿಕೊಂಡಿದ್ದಾರೆ. ಪರಿಣಾಮವಾಗಿ ರಥದ ಚಕ್ರವು ಅವರ ಕಾಲಿನ ಮೇಲೆ ಹರಿದು ಗಂಭೀರ ಗಾಯಗಳಾಗಿವೆ. ಘಟನೆಯ ನಂತರ ಸ್ಥಳದಲ್ಲಿದ್ದ ಜನರು ತಕ್ಷಣವೇ ಮಹಿಳೆಯನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ನಾಗಮ್ಮ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 12:18 pm
HK News Staffer
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm