ಬ್ರೇಕಿಂಗ್ ನ್ಯೂಸ್
10-03-26 10:49 am HK News Staffer ಕರ್ನಾಟಕ
ಬೆಂಗಳೂರು, ಮಾ.10: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಮಾನಾಸ್ಪದ ಪಾರ್ಸೆಲ್ವೊಂದು ಬಂದಿದ್ದು, ಅದರೊಳಗಿನ ವಸ್ತುಗಳನ್ನು ಕಂಡು ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಪಾರ್ಸೆಲ್ನಲ್ಲಿ ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ, ಹೂವಿನ ಹಾರ ಸೇರಿದಂತೆ ಹಲವು ವಿಚಿತ್ರ ವಸ್ತುಗಳು ಪತ್ತೆಯಾಗಿದ್ದು, ವಾಮಾಚಾರ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ವಿಮಾನ ನಿಲ್ದಾಣದ ಪೋಸ್ಟ್ ಆಫೀಸ್ಗೆ ಬಂದಿದ್ದ ಈ ಪಾರ್ಸೆಲ್ ಅನ್ನು ಪರಿಶೀಲಿಸಿದಾಗ ಅದರೊಳಗೆ ಮಹಿಳೆ ಮತ್ತು ಪುರುಷನ ಬೆತ್ತಲೆ ಫೋಟೋಗಳನ್ನು ಇಟ್ಟು, ಅದರ ಸುತ್ತ ಕೊಳೆತ ಟೊಮೆಟೋ, ಹೂವಿನ ಹಾರ, ಕಬ್ಬಿಣದ ತುಂಡು ಹಾಗೂ ಟೂತ್ಪೇಸ್ಟ್ ಇಟ್ಟಿರುವುದು ಕಂಡುಬಂದಿದೆ. ಈ ದೃಶ್ಯಗಳನ್ನು ಕಂಡ ಸಿಬ್ಬಂದಿ ಅಚ್ಚರಿಗೊಳಗಾಗಿದ್ದಾರೆ.
ಆ ಎಲ್ಲ ವಸ್ತುಗಳಿಗೆ ಪ್ಯಾಕ್ ಮಾಡಿ ಯಾರೋ ಕಿರಾತಕರು ಪಾರ್ಸೆಲ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಪಾರ್ಸೆಲ್ನಲ್ಲಿದ್ದ ವಸ್ತುಗಳನ್ನು ನೋಡಿ ಅಲ್ಲಿನ ಸಿಬ್ಬಂದಿಯ ಮಾನಸಿಕ ಸ್ಥಿತಿಯ ಮೇಲೂ ಪರಿಣಾಮ ಬೀರಿದ್ದು, ಕರ್ತವ್ಯ ನಿರ್ವಹಣೆಯಲ್ಲಿ ನಿರಾಸಕ್ತಿ ಕಾಣಿಸುತ್ತಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸಿಬ್ಬಂದಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದು, ಈ ಕೃತ್ಯ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಸದ್ಯ ಈ ಪಾರ್ಸೆಲ್ ಯಾರು ಕಳುಹಿಸಿದ್ದಾರೆ ಮತ್ತು ಇದರ ಹಿಂದೆ ಇರುವ ಉದ್ದೇಶ ಏನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 12:18 pm
HK News Staffer
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm