ಬ್ರೇಕಿಂಗ್ ನ್ಯೂಸ್
10-03-26 10:49 am HK News Staffer ಕರ್ನಾಟಕ
ಬೆಂಗಳೂರು, ಮಾ.10: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಮಾನಾಸ್ಪದ ಪಾರ್ಸೆಲ್ವೊಂದು ಬಂದಿದ್ದು, ಅದರೊಳಗಿನ ವಸ್ತುಗಳನ್ನು ಕಂಡು ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಪಾರ್ಸೆಲ್ನಲ್ಲಿ ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ, ಹೂವಿನ ಹಾರ ಸೇರಿದಂತೆ ಹಲವು ವಿಚಿತ್ರ ವಸ್ತುಗಳು ಪತ್ತೆಯಾಗಿದ್ದು, ವಾಮಾಚಾರ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ವಿಮಾನ ನಿಲ್ದಾಣದ ಪೋಸ್ಟ್ ಆಫೀಸ್ಗೆ ಬಂದಿದ್ದ ಈ ಪಾರ್ಸೆಲ್ ಅನ್ನು ಪರಿಶೀಲಿಸಿದಾಗ ಅದರೊಳಗೆ ಮಹಿಳೆ ಮತ್ತು ಪುರುಷನ ಬೆತ್ತಲೆ ಫೋಟೋಗಳನ್ನು ಇಟ್ಟು, ಅದರ ಸುತ್ತ ಕೊಳೆತ ಟೊಮೆಟೋ, ಹೂವಿನ ಹಾರ, ಕಬ್ಬಿಣದ ತುಂಡು ಹಾಗೂ ಟೂತ್ಪೇಸ್ಟ್ ಇಟ್ಟಿರುವುದು ಕಂಡುಬಂದಿದೆ. ಈ ದೃಶ್ಯಗಳನ್ನು ಕಂಡ ಸಿಬ್ಬಂದಿ ಅಚ್ಚರಿಗೊಳಗಾಗಿದ್ದಾರೆ.
ಆ ಎಲ್ಲ ವಸ್ತುಗಳಿಗೆ ಪ್ಯಾಕ್ ಮಾಡಿ ಯಾರೋ ಕಿರಾತಕರು ಪಾರ್ಸೆಲ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಪಾರ್ಸೆಲ್ನಲ್ಲಿದ್ದ ವಸ್ತುಗಳನ್ನು ನೋಡಿ ಅಲ್ಲಿನ ಸಿಬ್ಬಂದಿಯ ಮಾನಸಿಕ ಸ್ಥಿತಿಯ ಮೇಲೂ ಪರಿಣಾಮ ಬೀರಿದ್ದು, ಕರ್ತವ್ಯ ನಿರ್ವಹಣೆಯಲ್ಲಿ ನಿರಾಸಕ್ತಿ ಕಾಣಿಸುತ್ತಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸಿಬ್ಬಂದಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದು, ಈ ಕೃತ್ಯ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಸದ್ಯ ಈ ಪಾರ್ಸೆಲ್ ಯಾರು ಕಳುಹಿಸಿದ್ದಾರೆ ಮತ್ತು ಇದರ ಹಿಂದೆ ಇರುವ ಉದ್ದೇಶ ಏನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm