ಬ್ರೇಕಿಂಗ್ ನ್ಯೂಸ್
10-03-26 10:49 am HK News Staffer ಕರ್ನಾಟಕ
ಬೆಂಗಳೂರು, ಮಾ.10: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಮಾನಾಸ್ಪದ ಪಾರ್ಸೆಲ್ವೊಂದು ಬಂದಿದ್ದು, ಅದರೊಳಗಿನ ವಸ್ತುಗಳನ್ನು ಕಂಡು ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಪಾರ್ಸೆಲ್ನಲ್ಲಿ ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ, ಹೂವಿನ ಹಾರ ಸೇರಿದಂತೆ ಹಲವು ವಿಚಿತ್ರ ವಸ್ತುಗಳು ಪತ್ತೆಯಾಗಿದ್ದು, ವಾಮಾಚಾರ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ವಿಮಾನ ನಿಲ್ದಾಣದ ಪೋಸ್ಟ್ ಆಫೀಸ್ಗೆ ಬಂದಿದ್ದ ಈ ಪಾರ್ಸೆಲ್ ಅನ್ನು ಪರಿಶೀಲಿಸಿದಾಗ ಅದರೊಳಗೆ ಮಹಿಳೆ ಮತ್ತು ಪುರುಷನ ಬೆತ್ತಲೆ ಫೋಟೋಗಳನ್ನು ಇಟ್ಟು, ಅದರ ಸುತ್ತ ಕೊಳೆತ ಟೊಮೆಟೋ, ಹೂವಿನ ಹಾರ, ಕಬ್ಬಿಣದ ತುಂಡು ಹಾಗೂ ಟೂತ್ಪೇಸ್ಟ್ ಇಟ್ಟಿರುವುದು ಕಂಡುಬಂದಿದೆ. ಈ ದೃಶ್ಯಗಳನ್ನು ಕಂಡ ಸಿಬ್ಬಂದಿ ಅಚ್ಚರಿಗೊಳಗಾಗಿದ್ದಾರೆ.
ಆ ಎಲ್ಲ ವಸ್ತುಗಳಿಗೆ ಪ್ಯಾಕ್ ಮಾಡಿ ಯಾರೋ ಕಿರಾತಕರು ಪಾರ್ಸೆಲ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಪಾರ್ಸೆಲ್ನಲ್ಲಿದ್ದ ವಸ್ತುಗಳನ್ನು ನೋಡಿ ಅಲ್ಲಿನ ಸಿಬ್ಬಂದಿಯ ಮಾನಸಿಕ ಸ್ಥಿತಿಯ ಮೇಲೂ ಪರಿಣಾಮ ಬೀರಿದ್ದು, ಕರ್ತವ್ಯ ನಿರ್ವಹಣೆಯಲ್ಲಿ ನಿರಾಸಕ್ತಿ ಕಾಣಿಸುತ್ತಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸಿಬ್ಬಂದಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದು, ಈ ಕೃತ್ಯ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಸದ್ಯ ಈ ಪಾರ್ಸೆಲ್ ಯಾರು ಕಳುಹಿಸಿದ್ದಾರೆ ಮತ್ತು ಇದರ ಹಿಂದೆ ಇರುವ ಉದ್ದೇಶ ಏನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm