ಬ್ರೇಕಿಂಗ್ ನ್ಯೂಸ್
10-03-26 01:47 pm HK News Staffer ಕರ್ನಾಟಕ
ಬೆಂಗಳೂರು, ಮಾ.10: ಮಧ್ಯಪ್ರಾಚ್ಯ ರಾಷ್ಟ್ರಗಳ ಯುದ್ಧದ ಪರಿಣಾಮ ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದ್ದು, ಬೆಂಗಳೂರು ನಗರದ ಹಲವಾರು ಹೋಟೆಲ್ಗಳು ಮಂಗಳವಾರದಿಂದ ಬಂದ್ ಆಗುವ ಸಾಧ್ಯತೆ ಎದುರಾಗಿದೆ. ಈ ಬೆಳವಣಿಗೆಯಿಂದ ಆಹಾರ ಸರಬರಾಜಿನಲ್ಲಿ ತೀವ್ರ ಸಮಸ್ಯೆ ಉಂಟಾಗುವ ಆತಂಕ ವ್ಯಕ್ತವಾಗಿದೆ.
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯಕ್ಕೆ ವಿರೋಧವಾಗಿ ಬೆಂಗಳೂರು ಹೋಟೆಲ್ಗಳ ಸಂಘವು ನಗರಾದ್ಯಂತ ಹೋಟೆಲ್ಗಳನ್ನು ಬಂದ್ ಮಾಡಲು ತೀರ್ಮಾನಿಸಿದೆ. ಸಂಘದ ಗೌರವಾಧ್ಯಕ್ಷ ಪಿ.ಸಿ. ರಾವ್ ಮಾತನಾಡಿ, “ಕಳೆದ ಕೆಲವು ದಿನಗಳಿಂದ ನಗರದಲ್ಲಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ಗಳ ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ತೈಲ ಕಂಪನಿಗಳು 70 ದಿನಗಳ ಕಾಲ ನಿರಂತರ ಪೂರೈಕೆಯ ಭರವಸೆ ನೀಡಿದ್ದರೂ, ಏಕಾಏಕಿ ಪೂರೈಕೆ ನಿಲ್ಲಿಸಿರುವುದು ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ನೀಡಿದೆ. ಗ್ಯಾಸ್ ಇಲ್ಲದೆ ಅಡುಗೆ ಮಾಡುವುದು ಅಸಾಧ್ಯವಾಗಿರುವುದರಿಂದ ಹೋಟೆಲ್ಗಳನ್ನು ಮುಚ್ಚುವುದು ಅನಿವಾರ್ಯವಾಗಿದೆ” ಎಂದು ಹೇಳಿದರು.
ಬೆಂಗಳೂರು ನಗರದಲ್ಲಿ ಲಕ್ಷಾಂತರ ಐಟಿ ಉದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ದಿನಗೂಲಿ ಕಾರ್ಮಿಕರು ತಮ್ಮ ದಿನನಿತ್ಯದ ಊಟಕ್ಕಾಗಿ ಹೋಟೆಲ್ಗಳನ್ನೇ ಅವಲಂಬಿಸುತ್ತಿದ್ದಾರೆ. ಹೋಟೆಲ್ಗಳು ಬಂದ್ ಆದರೆ ಸಾರ್ವಜನಿಕರಿಗೆ ದೊಡ್ಡ ಸಮಸ್ಯೆ ಎದುರಾಗಬಹುದು ಎಂದು ಅವರು ಎಚ್ಚರಿಸಿದರು. ಕೇಂದ್ರ ಸರ್ಕಾರ ಹಾಗೂ ಸಂಬಂಧಿತ ಸಚಿವರು ತಕ್ಷಣ ಮಧ್ಯಪ್ರವೇಶಿಸಿ ಗ್ಯಾಸ್ ಪೂರೈಕೆಯನ್ನು ಸರಿಪಡಿಸಬೇಕು ಎಂದು ಸಂಘ ಆಗ್ರಹಿಸಿದೆ.
ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಹೊಳ್ಳ ಮಾತನಾಡಿ, “ಸದ್ಯ ಮಾರುಕಟ್ಟೆಯಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ದರ ಸುಮಾರು ₹1800 ಇದೆ. ಆದರೆ ಪೂರೈಕೆ ಕೊರತೆಯಿಂದ ಕಾಳಸಂತೆ ಮಾರುಕಟ್ಟೆಯಲ್ಲಿ ಇದರ ಬೆಲೆ ₹2500ರಿಂದ ₹2800ರವರೆಗೆ ಏರಿಕೆಯಾಗಿದೆ” ಎಂದು ತಿಳಿಸಿದ್ದಾರೆ. ನಗರಕ್ಕೆ ಸಾಮಾನ್ಯವಾಗಿ ಪ್ರತಿದಿನ ಸುಮಾರು 22 ಸಾವಿರ ಕಮರ್ಷಿಯಲ್ ಸಿಲಿಂಡರ್ಗಳು ಪೂರೈಕೆಯಾಗುತ್ತವೆ. ಪ್ರತಿ ಸಿಲಿಂಡರ್ 19 ಕೆ.ಜಿ ತೂಕವಿದ್ದು, ದಿನಕ್ಕೆ ಸುಮಾರು 4.18 ಲಕ್ಷ ಕೆ.ಜಿ ಗ್ಯಾಸ್ ಬಳಕೆಯಾಗುತ್ತದೆ. ಆದರೆ ಪ್ರಸ್ತುತ ಪೂರೈಕೆ ಕಡಿಮೆಯಾಗಿದ್ದು, ದಿನಕ್ಕೆ ಸುಮಾರು 11 ಸಾವಿರ ಸಿಲಿಂಡರ್ಗಳು ಮಾತ್ರ ಲಭ್ಯವಾಗುತ್ತಿವೆ ಎಂದು ತಿಳಿದುಬಂದಿದೆ.
ಈ ನಡುವೆ ಗ್ಯಾಸ್ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯೂ ಇದೆ. ಪ್ರಸ್ತುತ ₹1850 ಇರುವ ಕಮರ್ಷಿಯಲ್ ಸಿಲಿಂಡರ್ ಬೆಲೆ ₹2200ರವರೆಗೆ ಏರಬಹುದು ಎಂಬ ಚರ್ಚೆ ನಡೆಯುತ್ತಿದೆ. ಈ ಕುರಿತು ಪೆಟ್ರೋಲಿಯಂ ಇಲಾಖೆಯ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇನ್ನೊಂದೆಡೆ, ಎಲ್ಪಿಜಿ ಸಿಲಿಂಡರ್ಗಳ ಕೃತಕ ಅಭಾವ ಮತ್ತು ಕಾಳಸಂತೆ ತಡೆಯಲು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಅದರಂತೆ ಸಿಲಿಂಡರ್ ಬುಕ್ಕಿಂಗ್ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ. ಗೃಹ ಬಳಕೆ ಗ್ರಾಹಕರಿಗೆ ಮೊದಲ ಆದ್ಯತೆ ನೀಡಲು ಸರ್ಕಾರ ತೀರ್ಮಾನಿಸಿದ್ದು, ದೇಶೀಯ ಉತ್ಪಾದನೆ ಹೆಚ್ಚಿಸುವ ಜೊತೆಗೆ ಹೊಸ ರಾಷ್ಟ್ರಗಳಿಂದ ಎಲ್ಪಿಜಿ ಆಮದು ಮಾಡುವ ಕ್ರಮ ಕೈಗೊಳ್ಳಲಾಗುತ್ತಿದೆ.
16-04-26 10:30 pm
HK News Staffer
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
16-04-26 01:09 pm
HK News Staffer
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm