ಬ್ರೇಕಿಂಗ್ ನ್ಯೂಸ್
11-03-26 12:57 pm HK News Staffer ಕರ್ನಾಟಕ
ಗದಗ, ಮಾ 11: ಜಿಲ್ಲೆಯಲ್ಲಿ ಪತ್ತೆಯಾದ ಲಕ್ಕುಂಡಿ ಚಿನ್ನದ ನಿಧಿ ಕುರಿತಾಗಿ ಹಲವು ಕುತೂಹಲಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. 2026ರ ಜನವರಿ 10ರಂದು ರಿತ್ತಿ ಕುಟುಂಬದ ಮನೆಯ ಪಾಯ ತೋಡುವಾಗ ಪತ್ತೆಯಾದ ಈ ಆಭರಣಗಳು ಕೇವಲ ಬಂಗಾರದ ಒಡವೆಗಳಷ್ಟೇ ಅಲ್ಲ, ಐತಿಹಾಸಿಕ ಮಹತ್ವ ಹೊಂದಿರುವ ಅಮೂಲ್ಯ ಚಿನ್ನದ ಆಭರಣಗಳು ಎಂದು ಪುರಾತತ್ವ ತಜ್ಞರು ತಿಳಿಸಿದ್ದಾರೆ.
ಜಿಲ್ಲಾಡಳಿತ ಭವನದಲ್ಲಿ ನಡೆದ ಪರಿಶೀಲನೆಯಲ್ಲಿ ತಜ್ಞರ ಸಮಿತಿ ಈ ಆಭರಣಗಳ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ರಿತ್ತಿ ಕುಟುಂಬಸ್ಥರಿಗೆ ಪತ್ತೆಯಾದ ಚಿನ್ನದ ಆಭರಣಗಳು ಸುಮಾರು 500ರಿಂದ 600 ವರ್ಷಗಳಷ್ಟು ಹಳೆಯ ಆಭರಣಗಳಾಗಿದ್ದು, ಕಲ್ಯಾಣ ಚಾಲುಕ್ಯರು ಮತ್ತು ವಿಜಯನಗರ ಸಾಮ್ರಾಜ್ಯ ಕಾಲದ ಕಲೆ ಹಾಗೂ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಒಡವೆಗಳು ಸಾಮಾನ್ಯ ಮಹಿಳೆಯರು ಧರಿಸುವುದಕ್ಕಲ್ಲ; ದೇವಾಲಯಗಳಲ್ಲಿ ಹೆಣ್ಣು ದೇವತೆಗಳಿಗೆ ಅಥವಾ ಉತ್ಸವ ಮೂರ್ತಿಗಳಿಗೆ ಅಲಂಕರಿಸುವ ಅಪರೂಪದ ಆಭರಣಗಳಾಗಿವೆ. ಪರಿಶೀಲನೆಯ ವೇಳೆ ಹೆಣ್ಣು ದೇವರ ಮೂರ್ತಿಯೂ ಪತ್ತೆಯಾಗಿದೆ. ಚಿನ್ನದ ಜೊತೆಗೆ ನೀಲಮಣಿ, ಸ್ಪಟಿಕ ಮತ್ತು ಹವಳ ಸೇರಿದಂತೆ ಅಪರೂಪದ ರತ್ನಗಳನ್ನು ಕೂಡ ಈ ಆಭರಣಗಳಲ್ಲಿ ಬಳಸಿರುವುದು ಕಂಡುಬಂದಿದೆ.
ಒಟ್ಟಾರೆ ಚಿನ್ನದ ತೂಕ ಸುಮಾರು 465 ಗ್ರಾಂ ಆಗಿದ್ದು, ಇಂದಿನ ಮಾರುಕಟ್ಟೆ ದರದಲ್ಲಿ ಅದರ ಮೌಲ್ಯ ಸುಮಾರು 35ರಿಂದ 40 ಲಕ್ಷ ರೂಪಾಯಿವರೆಗೆ ಇರಬಹುದು. ಆದರೆ ಈ ಆಭರಣಗಳ ಪ್ರಾಚೀನ ಹಾಗೂ ಐತಿಹಾಸಿಕ ಮೌಲ್ಯವನ್ನು ಅಂದಾಜಿಸಿದರೆ ಸುಮಾರು 8 ಕೋಟಿ ರೂಪಾಯಿಗೂ ಅಧಿಕವಾಗಬಹುದು ಎಂದು ತಜ್ಞರು ತಿಳಿಸಿದ್ದಾರೆ.
ಸಮಿತಿ ಅಧ್ಯಕ್ಷ ಎಂ.ಎಸ್. ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಕಲಾ ಇತಿಹಾಸಗಾರ ರಾಘವೇಂದ್ರ ಕುಲಕರ್ಣಿ, ಪ್ರೊ. ಚೂಡಾಮಣಿ ನಂದಗೋಪಾಲ, ಶಾಸನ ತಜ್ಞ ಹನುಮಾಪಕ್ಷಿ ಗೋಗಿ, ರತ್ನಶಾಸ್ತ್ರಜ್ಞ ಪ್ರಭು ಕಮ್ಮಾರ ಮತ್ತು ಡಾ. ಶೇಜೇಶ್ವರ ಅವರ ತಂಡ ನಾಲ್ಕು–ಐದು ಗಂಟೆಗಳ ಕಾಲ ಪ್ರತಿಯೊಂದು ಆಭರಣವನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದೆ.
ಈ ಉತ್ಖನನದಿಂದ ಲಕ್ಕುಂಡಿಯ ಟಂಕಸಾಲೆ, ವಾಣಿಜ್ಯ ಚಟುವಟಿಕೆಗಳು ಅಥವಾ ಹೆಚ್ಚಿನ ಪುರಾತನ ಅವಶೇಷಗಳು ಬೆಳಕಿಗೆ ಬರಬಹುದು ಎಂಬ ನಿರೀಕ್ಷೆ ಹೆಚ್ಚಾಗಿದೆ. ಲಕ್ಕುಂಡಿಯು 101 ದೇವಸ್ಥಾನಗಳು ಮತ್ತು 101 ಬಾವಿಗಳಿಗೆ ಹೆಸರಾದ ಐತಿಹಾಸಿಕ ಸ್ಥಳವಾಗಿದೆ. ಕಲ್ಯಾಣ ಚಾಲುಕ್ಯರು, ರಾಷ್ಟ್ರಕೂಟರು ಮತ್ತು ಹೊಯ್ಸಳರ ಕಾಲದ ಶಿಲ್ಪಕಲೆಯ ಕೇಂದ್ರವಾಗಿ ಲಕ್ಕುಂಡಿ ಪ್ರಸಿದ್ಧವಾಗಿದೆ.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm