ಬ್ರೇಕಿಂಗ್ ನ್ಯೂಸ್
11-03-26 07:16 pm HK News Staffer ಕರ್ನಾಟಕ
ಗಾಜಿಯಾಬಾದ್, ಮಾರ್ಚ್ 11: 13 ವರ್ಷಗಳ ಹಿಂದೆ ನಾಲ್ಕು ಮಹಡಿಯ ಮೇಲಿಂದ ಬಿದ್ದು ಮೆದುಳಿಗೆ ಗಾಯಗೊಂಡು ಸುದೀರ್ಘ ಕಾಲದಿಂದ ಕೋಮಾದಲ್ಲಿಯೇ ಇದ್ದ 32 ವರ್ಷದ ಹರೀಶ್ ರಾಣಾ ಎಂಬ ಯುವಕನಿಗೆ ಸುಪ್ರೀಂ ಕೋರ್ಟ್ ದಯಾಮರಣಕ್ಕೆ ಅವಕಾಶ ನೀಡಿದೆ.
ಸುಪ್ರೀಂ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು ಈ ತೀರ್ಪು ನೀಡಿದೆ. ರೋಗಿಯನ್ನು ಪರೀಕ್ಷಿಸುವ ವೈದ್ಯಕೀಯ ಮಂಡಳಿಗಳು ಚೇತರಿಕೆಯ ನಿರೀಕ್ಷೆ ಅರ್ಥಪೂರ್ಣವಲ್ಲ ಎಂದು ತೀರ್ಮಾನಿಸಿದರೆ ಹಾಗೂ ಶಿಫಾರಸು ಮಾಡಿದರೆ ಮಾತ್ರ ಅಂತಹ ಸಂದರ್ಭದಲ್ಲಿ ಮೆಡಿಕಲ್ ಸಪೋರ್ಟ್ ಹಿಂಪಡೆಯಬಹುದು ಎಂದು ಕೋರ್ಟ್ ಹೇಳಿದೆ.
ರಾಣಾ ಒಂದು ಕಾಲದಲ್ಲಿ "ಸಮರ್ಥ ಯುವಕ"ನಾಗಿದ್ದ. ಆದರೆ ಮಹಡಿ ಮೇಲಿನಿಂದ ಬಿದ್ದು ಉಂಟಾದ ಮಿದುಳಿನ ಗಾಯಗಳು ಅವನನ್ನು ನಿಷ್ಕ್ರಿಯಗೊಳಿಸಿತ್ತು. ನ್ಯಾಯಾಲಯದ ಮುಂದೆ ಸಲ್ಲಿಸಲಾದ ವೈದ್ಯಕೀಯ ವರದಿಗಳು ಕಳೆದ 13 ವರ್ಷಗಳಿಂದ ಅವನ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ತೋರಿಸಿಲ್ಲ ಮತ್ತು ಕೇವಲ ವೆಂಟಿಲೇಟರ್ ನಿಂದ ಜೀವ ಉಳಿದಿದೆ ಎಂಬುದನ್ನು ಕೋರ್ಟ್ ಗಮನಿಸಿ ದಯಾಮರಣಕ್ಕೆ ಅವಕಾಶ ನೀಡಿದೆ.
ಜೀವರಕ್ಷಕ ಕ್ರಮಗಳನ್ನು ಹಿಂತೆಗೆದುಕೊಳ್ಳುವ ನಿಷ್ಕ್ರಿಯ ದಯಾಮರಣವನ್ನು ಮೊದಲು ಸುಪ್ರೀಂ ಕೋರ್ಟ್ 2011ರ ಅರುಣಾ ಶಾನುಬಾಗ್ ಪ್ರಕರಣದಲ್ಲಿ ನೀಡಿತ್ತು. 2018 ರಲ್ಲಿ ಕಾಮನ್ ಕಾಸ್ vs ಯೂನಿಯನ್ ಆಫ್ ಇಂಡಿಯಾ ತೀರ್ಪಿನಲ್ಲಿ ಇದನ್ನು ಕಾನೂನುಬದ್ಧ ಮಾಡಲಾಗಿತ್ತು, ಇದು ಘನತೆಯಿಂದ ಸಾಯುವ ಹಕ್ಕನ್ನು ಬದುಕುವ ಹಕ್ಕಿನ ಭಾಗವೆಂದು ಗುರುತಿಸಿತ್ತು. ಔಷಧಗಳು ಅಥವಾ ಇಂಜೆಕ್ಷನ್ ಮೂಲಕ ನೇರವಾಗಿ ಸಾವಿಗೆ ಕಾರಣವಾಗುವ ಸಕ್ರಿಯ ದಯಾಮರಣ ಭಾರತದಲ್ಲಿ ಕಾನೂನುಬಾಹಿರವಾಗಿದೆ.
ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆಯುತ್ತಿದ್ದ ರಾಣಾ, ಆಗಸ್ಟ್ 20, 2013 ರಂದು ತಮ್ಮ ಪಿಜಿ ವಸತಿಗೃಹದ ನಾಲ್ಕನೇ ಮಹಡಿಯ ಬಾಲ್ಕನಿಯಿಂದ ಬಿದ್ದು ತಲೆಗೆ ತೀವ್ರ ಗಾಯಗಳಾಗಿ ಸಂಪೂರ್ಣ ಅಂಗವೈಕಲ್ಯಕ್ಕೆ ಒಳಗಾಗಿದ್ದರು. ಅಂದಿನಿಂದ, ಅವರು ಉಸಿರಾಟಕ್ಕಾಗಿ ಟ್ರಾಕಿಯೊಸ್ಟೊಮಿ ಟ್ಯೂಬ್ ಮತ್ತು ಪೋಷಣೆಗಾಗಿ ಗ್ಯಾಸ್ಟ್ರೋಸ್ಟೊಮಿ ಟ್ಯೂಬ್ ಅನ್ನು ಅವಲಂಬಿಸಿದ್ದಾರೆ. ಹರೀಶ್ ಅವರ ಪೋಷಕರು, ಇತರ ಇಬ್ಬರು ಮಕ್ಕಳನ್ನು ಸಹ ನೋಡಿಕೊಳ್ಳುತ್ತಿದ್ದಾರೆ. ದೆಹಲಿಯಲ್ಲಿರುವ ತಮ್ಮ ಮನೆಯನ್ನು ಮಾರಿ, ಏಮ್ಸ್ನಲ್ಲಿ ಅವರ ಹಾಸಿಗೆಯ ಪಕ್ಕದಲ್ಲಿಯೇ ಇರಲು ಗಾಜಿಯಾಬಾದ್ಗೆ ಸ್ಥಳಾಂತರಗೊಂಡಿದ್ದರು. ಇತ್ತೀಚೆಗೆ ಮಗನ ದೀರ್ಘಕಾಲದ ನೋವನ್ನು ಕೊನೆಗೊಳಿಸಲು ಅವರು ನಿಷ್ಕ್ರಿಯ ದಯಾಮರಣಕ್ಕೆ ಕಾನೂನು ಅನುಮತಿ ಕೋರಿದ್ದರು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm