ಬ್ರೇಕಿಂಗ್ ನ್ಯೂಸ್
12-03-26 02:48 pm HK News Staffer ಕರ್ನಾಟಕ
ತಮಿಳುನಾಡಿನ, ಮಾ.13: ಮಗಳಿಗೆ ಮದುವೆಯಾಗುತ್ತಿಲ್ಲ ಎಂದು ಮನನೊಂದ ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನೈ ನಗರದ ವದಪಾಲನಿ ಪ್ರದೇಶದಲ್ಲಿ ಸಂಭವಿಸಿದೆ. 57 ವರ್ಷದ ಆಟೋ ರಿಕ್ಷಾ ಚಾಲಕ ಕೃಷ್ಣಕುಮಾರ್ ಮೃತ ದುರ್ದೈವಿ.
.
ತಂದೆಯ ಸಾವಿನಿಂದ ಮನನೊಂದ ಮಗಳು ಪಾಕಿಯಾ ಕೂಡ ಕೆಲವೇ ಗಂಟೆಗಳ ಬಳಿಕ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷ್ಣ ಕುಮಾರ್ ಮಾರ್ಚ್ 7ರಂದು ಮನೆಬಿಟ್ಟು ಹೊರ ಹೋಗಿದ್ದವರು ಮರಳಿ ಮನೆಗೆ ಬಂದಿರಲಿಲ್ಲ. ಕುಟುಂಬದವರು ಹಲವು ಕಡೆ ಹುಡುಕಿದರೂ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದರು.
ಆದರೆ ಮಾರ್ಚ್ 8ರ ರಾತ್ರಿ ಅವರ ಮೊಬೈಲ್ ಫೋನ್ ಮನೆಯ ಸಮೀಪದ ಬಾವಿಯ ಬಳಿ ಪತ್ತೆಯಾದ ಬಳಿಕ ಪರಿಶೀಲಿಸಿದಾಗ, ಬಾವಿಯ ಬಳಿ ಅವರ ಶವ ಪತ್ತೆಯಾಗಿದೆ. ತಂದೆಯ ಮೃತದೇಹವನ್ನು ಕಂಡು ಆಘಾತಕ್ಕೊಳಗಾದ ಪಾಕಿಯಾ, ತಾಯಿಯನ್ನು ಕೋಣೆಯಲ್ಲಿ ಲಾಕ್ ಮಾಡಿ ತಾನು ಅಡುಗೆ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ತಾಯಿ ಹಿರಿಯ ಮಗಳು ಬ್ರಿಂಡಾ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಬ್ರಿಂಡಾ ಸ್ಥಳಕ್ಕೆ ಬಂದು ತಾಯಿಯನ್ನು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ದಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬಾವಿಯಿಂದ ಕೃಷ್ಣಕುಮಾರ್ ಅವರ ಶವವನ್ನು ಹೊರತೆಗೆದಿದ್ದಾರೆ. ಪಾಕಿಯಾ ಅವರನ್ನು ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದಾರೆ. ಕೃಷ್ಣಕುಮಾರ್ ಅವರಿಗೆ ಇಬ್ಬರು ಪುತ್ರಿಯರಿದ್ದು ಹಿರಿಯ ಮಗಳು ಬ್ರಿಂಡಾಗೆ ಮದುವೆಯಾಗಿದೆ. ಆದರೆ ಅವರ 30 ವರ್ಷದ ಪಾಕಿಯಾ ಇನ್ನೂ ಮದುವೆಯಾಗದೇ ಇರುವುದರಿಂದ ಕುಟುಂಬದ ಮೇಲೆ ಸಾಮಾಜಿಕ ಒತ್ತಡ ಹೆಚ್ಚಾಗಿದ್ದರಿಂದ ಕೃಷ್ಣಕುಮಾರ್ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎಂದು ತಿಳಿದುಬಂದಿದೆ. ಇದರಿಂದ ಕೃಷ್ಣಕುಮಾರ್ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 12:18 pm
HK News Staffer
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm