ಬ್ರೇಕಿಂಗ್ ನ್ಯೂಸ್
13-03-26 09:44 am HK News Staffer ಕರ್ನಾಟಕ
ಕೊಪ್ಪಳ, ಮಾ 14: ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಸ್ಲೀಪರ್ ಬಸ್ನಿಂದ 90 ಲಕ್ಷ ಮೌಲ್ಯದ ಬಂಗಾರವನ್ನ ನಾಲ್ವರು ಖದೀಮರು ದರೋಡೆ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಬಸ್ ರಾತ್ರಿ ಊಟಕ್ಕೆ ನಿಲ್ಲಿಸಿದ್ದ ಸಂದರ್ಭದಲ್ಲಿ ಬಸ್ಸಿನಲ್ಲೇ ಮಲಗಿದ್ದ ಪ್ರಯಾಣಿಕರಿಂದ ಈ ಕೃತ್ಯ ನಡೆದಿದ್ದು, ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕೊಪ್ಪಳ ಜಿಲ್ಲೆಯ ಹೊರವಲಯದಲ್ಲಿ ನಡೆದ ಬಂಗಾರದ ದರೋಡೆ ಪ್ರಕರಣ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮಂತ್ರಾಲಯದಿಂದ ಮಂಗಳೂರಿಗೆ ಬಸ್ನಲ್ಲಿ ಸಾಗಿಸುತ್ತಿದ್ದ 90 ಲಕ್ಷ ರೂ. ಒಡವೆ ಇರೋ ಬಂಗಾರದ ಚೀಲವನ್ನು ಖದೀಮರು ಕಳ್ಳತನ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನಾಲ್ಕು ಜನರಿಂದ ಈ ದರೋಡೆ ನಡೆದಿದೆ. ಇದೀಗ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಸ್ಲೀಪರ್ ಬಸ್ನಲ್ಲೇ ಬಂದ ಮಾಸ್ಟರ್ ಮೈಂಡ್ ಕಳ್ಳ , ಸಿಂಧನೂರಿನಿಂದ ಬಸ್ನಲ್ಲೇ ಪ್ರಯಾಣಿಸಿ ಕೊಪ್ಪಳಕ್ಕೆ ಬಂದಿದ್ದಾನೆ. ಅದೇ ವೇಳೆ ಇನ್ನೂ ಮೂವರು ಖದೀಮರು ಬೇರೆ ವಾಹನದಲ್ಲಿ ಬಸ್ನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಒಟ್ಟು ನಾಲ್ವರು ಸೇರಿಕೊಂಡು ಈ ದರೋಡೆ ಕೃತ್ಯವನ್ನು ಸಂಚು ರೂಪಿಸಿ ಕಳ್ಳತನ ನಡೆಸಿದ್ದಾರೆ.
ಮಂತ್ರಾಲಯದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಶ್ರೀ ಕುಮಾರ್ ಖಾಸಗಿ ಬಸ್ ಕೊಪ್ಪಳ ಹೊರವಲಯದಲ್ಲಿ ಊಟಕ್ಕಾಗಿ ನಿಲ್ಲಿಸಿತ್ತು. ಆ ವೇಳೆ ಊಟಕ್ಕೆ ಹೋದ ಮಹಮ್ಮದ್ ಮತ್ತು ಇರ್ಷಾದ್ ಎಂಬ ಪ್ರಯಾಣಿಕರ ಬ್ಯಾಗಿನಲ್ಲಿದ್ದ ಬಂಗಾರದ ಚೀಲವನ್ನು ಖದೀಮರು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.
ಹೋಟೆಲ್ ಮುಂಭಾಗದಲ್ಲಿದ್ದ ಸಿಸಿ ಕ್ಯಾಮರದಲ್ಲಿ ಈ ದರೋಡೆ ಕೃತ್ಯದ ಸಂಪೂರ್ಣ ದೃಶ್ಯ ದಾಖಲಾಗಿದ್ದು, ಆರೋಪಿಗಳು ಹೇಗೆ ಬಸ್ ಹತ್ತಿ ಬಂಗಾರದ ಚೀಲವನ್ನು ಕದ್ದುಕೊಂಡು ಹೋಗಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಈ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm