ಬ್ರೇಕಿಂಗ್ ನ್ಯೂಸ್
13-03-26 09:44 am HK News Staffer ಕರ್ನಾಟಕ
ಕೊಪ್ಪಳ, ಮಾ 14: ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಸ್ಲೀಪರ್ ಬಸ್ನಿಂದ 90 ಲಕ್ಷ ಮೌಲ್ಯದ ಬಂಗಾರವನ್ನ ನಾಲ್ವರು ಖದೀಮರು ದರೋಡೆ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಬಸ್ ರಾತ್ರಿ ಊಟಕ್ಕೆ ನಿಲ್ಲಿಸಿದ್ದ ಸಂದರ್ಭದಲ್ಲಿ ಬಸ್ಸಿನಲ್ಲೇ ಮಲಗಿದ್ದ ಪ್ರಯಾಣಿಕರಿಂದ ಈ ಕೃತ್ಯ ನಡೆದಿದ್ದು, ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕೊಪ್ಪಳ ಜಿಲ್ಲೆಯ ಹೊರವಲಯದಲ್ಲಿ ನಡೆದ ಬಂಗಾರದ ದರೋಡೆ ಪ್ರಕರಣ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮಂತ್ರಾಲಯದಿಂದ ಮಂಗಳೂರಿಗೆ ಬಸ್ನಲ್ಲಿ ಸಾಗಿಸುತ್ತಿದ್ದ 90 ಲಕ್ಷ ರೂ. ಒಡವೆ ಇರೋ ಬಂಗಾರದ ಚೀಲವನ್ನು ಖದೀಮರು ಕಳ್ಳತನ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನಾಲ್ಕು ಜನರಿಂದ ಈ ದರೋಡೆ ನಡೆದಿದೆ. ಇದೀಗ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಸ್ಲೀಪರ್ ಬಸ್ನಲ್ಲೇ ಬಂದ ಮಾಸ್ಟರ್ ಮೈಂಡ್ ಕಳ್ಳ , ಸಿಂಧನೂರಿನಿಂದ ಬಸ್ನಲ್ಲೇ ಪ್ರಯಾಣಿಸಿ ಕೊಪ್ಪಳಕ್ಕೆ ಬಂದಿದ್ದಾನೆ. ಅದೇ ವೇಳೆ ಇನ್ನೂ ಮೂವರು ಖದೀಮರು ಬೇರೆ ವಾಹನದಲ್ಲಿ ಬಸ್ನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಒಟ್ಟು ನಾಲ್ವರು ಸೇರಿಕೊಂಡು ಈ ದರೋಡೆ ಕೃತ್ಯವನ್ನು ಸಂಚು ರೂಪಿಸಿ ಕಳ್ಳತನ ನಡೆಸಿದ್ದಾರೆ.
ಮಂತ್ರಾಲಯದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಶ್ರೀ ಕುಮಾರ್ ಖಾಸಗಿ ಬಸ್ ಕೊಪ್ಪಳ ಹೊರವಲಯದಲ್ಲಿ ಊಟಕ್ಕಾಗಿ ನಿಲ್ಲಿಸಿತ್ತು. ಆ ವೇಳೆ ಊಟಕ್ಕೆ ಹೋದ ಮಹಮ್ಮದ್ ಮತ್ತು ಇರ್ಷಾದ್ ಎಂಬ ಪ್ರಯಾಣಿಕರ ಬ್ಯಾಗಿನಲ್ಲಿದ್ದ ಬಂಗಾರದ ಚೀಲವನ್ನು ಖದೀಮರು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.
ಹೋಟೆಲ್ ಮುಂಭಾಗದಲ್ಲಿದ್ದ ಸಿಸಿ ಕ್ಯಾಮರದಲ್ಲಿ ಈ ದರೋಡೆ ಕೃತ್ಯದ ಸಂಪೂರ್ಣ ದೃಶ್ಯ ದಾಖಲಾಗಿದ್ದು, ಆರೋಪಿಗಳು ಹೇಗೆ ಬಸ್ ಹತ್ತಿ ಬಂಗಾರದ ಚೀಲವನ್ನು ಕದ್ದುಕೊಂಡು ಹೋಗಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಈ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 12:18 pm
HK News Staffer
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm