ಬ್ರೇಕಿಂಗ್ ನ್ಯೂಸ್
13-03-26 09:44 am HK News Staffer ಕರ್ನಾಟಕ
ಕೊಪ್ಪಳ, ಮಾ 14: ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಸ್ಲೀಪರ್ ಬಸ್ನಿಂದ 90 ಲಕ್ಷ ಮೌಲ್ಯದ ಬಂಗಾರವನ್ನ ನಾಲ್ವರು ಖದೀಮರು ದರೋಡೆ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಬಸ್ ರಾತ್ರಿ ಊಟಕ್ಕೆ ನಿಲ್ಲಿಸಿದ್ದ ಸಂದರ್ಭದಲ್ಲಿ ಬಸ್ಸಿನಲ್ಲೇ ಮಲಗಿದ್ದ ಪ್ರಯಾಣಿಕರಿಂದ ಈ ಕೃತ್ಯ ನಡೆದಿದ್ದು, ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕೊಪ್ಪಳ ಜಿಲ್ಲೆಯ ಹೊರವಲಯದಲ್ಲಿ ನಡೆದ ಬಂಗಾರದ ದರೋಡೆ ಪ್ರಕರಣ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮಂತ್ರಾಲಯದಿಂದ ಮಂಗಳೂರಿಗೆ ಬಸ್ನಲ್ಲಿ ಸಾಗಿಸುತ್ತಿದ್ದ 90 ಲಕ್ಷ ರೂ. ಒಡವೆ ಇರೋ ಬಂಗಾರದ ಚೀಲವನ್ನು ಖದೀಮರು ಕಳ್ಳತನ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನಾಲ್ಕು ಜನರಿಂದ ಈ ದರೋಡೆ ನಡೆದಿದೆ. ಇದೀಗ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಸ್ಲೀಪರ್ ಬಸ್ನಲ್ಲೇ ಬಂದ ಮಾಸ್ಟರ್ ಮೈಂಡ್ ಕಳ್ಳ , ಸಿಂಧನೂರಿನಿಂದ ಬಸ್ನಲ್ಲೇ ಪ್ರಯಾಣಿಸಿ ಕೊಪ್ಪಳಕ್ಕೆ ಬಂದಿದ್ದಾನೆ. ಅದೇ ವೇಳೆ ಇನ್ನೂ ಮೂವರು ಖದೀಮರು ಬೇರೆ ವಾಹನದಲ್ಲಿ ಬಸ್ನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಒಟ್ಟು ನಾಲ್ವರು ಸೇರಿಕೊಂಡು ಈ ದರೋಡೆ ಕೃತ್ಯವನ್ನು ಸಂಚು ರೂಪಿಸಿ ಕಳ್ಳತನ ನಡೆಸಿದ್ದಾರೆ.
ಮಂತ್ರಾಲಯದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಶ್ರೀ ಕುಮಾರ್ ಖಾಸಗಿ ಬಸ್ ಕೊಪ್ಪಳ ಹೊರವಲಯದಲ್ಲಿ ಊಟಕ್ಕಾಗಿ ನಿಲ್ಲಿಸಿತ್ತು. ಆ ವೇಳೆ ಊಟಕ್ಕೆ ಹೋದ ಮಹಮ್ಮದ್ ಮತ್ತು ಇರ್ಷಾದ್ ಎಂಬ ಪ್ರಯಾಣಿಕರ ಬ್ಯಾಗಿನಲ್ಲಿದ್ದ ಬಂಗಾರದ ಚೀಲವನ್ನು ಖದೀಮರು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.
ಹೋಟೆಲ್ ಮುಂಭಾಗದಲ್ಲಿದ್ದ ಸಿಸಿ ಕ್ಯಾಮರದಲ್ಲಿ ಈ ದರೋಡೆ ಕೃತ್ಯದ ಸಂಪೂರ್ಣ ದೃಶ್ಯ ದಾಖಲಾಗಿದ್ದು, ಆರೋಪಿಗಳು ಹೇಗೆ ಬಸ್ ಹತ್ತಿ ಬಂಗಾರದ ಚೀಲವನ್ನು ಕದ್ದುಕೊಂಡು ಹೋಗಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಈ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm