ಬ್ರೇಕಿಂಗ್ ನ್ಯೂಸ್
13-03-26 12:09 pm HK News Staffer ಕರ್ನಾಟಕ
ಶಿವಮೊಗ್ಗ, ಮಾರ್ಚ್ 13: ಶಿವಮೊಗ್ಗದಿಂದ ಬೆಂಗಳೂರು, ಹುಬ್ಬಳ್ಳಿ ಅಲ್ಲದೇ ದೇಶಾದ್ಯಂತ 131 ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಇಂಡಿಗೋ ವಿಮಾನ ಸೇವೆಯು ಏಪ್ರಿಲ್ ಅಂತ್ಯಕ್ಕೆ ಕೊನೆಯಾಗುತ್ತಿದೆ. ಇಂಡಿಗೊ ವಿಮಾನ ಸೇವೆಯು ಮೇ 1ರಿಂದ ಶಿವಮೊಗ್ಗದಿಂದ ಇರುವುದಿಲ್ಲ ಎನ್ನುವ ಸೂಚನೆ ಲಭಿಸಿದೆ.
ಪ್ರಸ್ತುತ ಏಪ್ರಿಲ್ 30ರ ವರೆಗಷ್ಟೇ ಇಂಡಿಗೋ ದೇಶೀಯ ವಿಮಾನಗಳಲ್ಲಿ ಆಸನಗಳನ್ನು ಕಾಯ್ದಿರಿಸಲು ಅವಕಾಶ ನೀಡಲಾಗಿದೆ. ಮೇ 1ರಿಂದ ವಿಮಾನದ ಬುಕಿಂಗ್ ಲಭ್ಯವಿಲ್ಲದಿರುವುದು ಜನರನ್ನು ಗೊಂದಲಕ್ಕೀಡು ಮಾಡಿದೆ. ಪ್ರಯಾಣಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ಇದ್ದರೂ ತಾಂತ್ರಿಕ ಕಾರಣಗಳಿಂದಾಗಿ ಈ ಮಾರ್ಗದ ಸೇವೆಯನ್ನು ಸಂಸ್ಥೆ ಸ್ಥಗಿತಗೊಳಿಸುತ್ತಿದೆ. ಇಂಡಿಗೊ ಸಂಸ್ಥೆಯು ಮುಂಬಯಿ, ಚೆನ್ನೈ, ಹೊಸದಿಲ್ಲಿ, ಅಹಮದಾಬಾದ್, ಹೈದರಾಬಾದ್, ಪಂಜಾಬ್, ಗೋವಾ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ ದೇಶದ 131 ಮಾರ್ಗಗಳಲ್ಲಿ ಸಂಪರ್ಕ ವಿಮಾನ ಸೇವೆಯನ್ನು ಹೊಂದಿದೆ. ಇದು ಬೇರೆ ಸಂಸ್ಥೆಗಳಲ್ಲಿ ಲಭ್ಯವಿಲ್ಲ.
ಹೀಗಾಗಿ, ಜನರ ಬೇಸಿಗೆ ಪ್ರಯಾಣದ ಕನಸಿಗೆ ತಣ್ಣೀರು ಎರಚಿದಂತಾಗಿದೆ. ಲಭ್ಯ ಮಾಹಿತಿ ಪ್ರಕಾರ, ಇತ್ತೀಚೆಗೆ ಅಹಮದಾಬಾದ್ ವಿಮಾನ ದುರಂತದ ಬಳಿಕ ಸೇವೆಯನ್ನು ದೇಶದಲ್ಲಿ ಡಿಜಿಸಿಎ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಅದಕ್ಕೆ ಪೂರಕವಾಗಿ ವಿಮಾನಯಾನ ಸಂಸ್ಥೆಗಳಿಗೆ ಈಗ ಇರುವ ಮಾರ್ಗಗಳಿಗೆ ಮತ್ತಷ್ಟು ವಿಮಾನಗಳು ಮತ್ತು ಪೈಲಟ್ಗಳ ಅಗತ್ಯವಿದೆ. ಕೆಲವು ವಿಮಾನ ಸಂಸ್ಥೆಗಳು ಕಡಿಮೆ ವಿಮಾನಗಳು ಮತ್ತು ಫೈಲಟ್ಗಳನ್ನು ಬಳಸಿಕೊಂಡು ಹೆಚ್ಚಿನ ಅವಧಿಗೆ ನಿರ್ವಹಣೆ ಮಾಡಿಸಿಕೊಳ್ಳುತ್ತಿವೆ. ವಿಮಾನ ದುರಂತ ಹಿನ್ನೆಲೆಯಲ್ಲಿ ಡಿಜಿಸಿಎ ಇದಕ್ಕೆ ಕಡಿವಾಣ ಹಾಕಲು ನಿಯಮಗಳನ್ನು ಕಠಿಣಗೊಳಿಸಿದೆ. ಇದರಿಂದಾಗಿ ಇಂಡಿಗೋ ಸಂಸ್ಥೆಯು ಸಂಚಾರ ಸೇವೆಗಳನ್ನು ಕಡಿತಗೊಳಿಸುತ್ತಿದೆ.
ಡಿಜಿಸಿಎ ವಿಮಾನಯಾನ ಸೇವಾ ನಿಯಮಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದಿದೆ. ಅದರಿಂದಾಗಿ ಇಂಡಿಗೊ ಸಂಸ್ಥೆಗೆ ವಿಮಾನಗಳು ಮತ್ತು ಪೈಲಟ್ ಗಳ ಕೊರತೆ ಎದುರಾಗಿದೆ. ಹೀಗಾಗಿ, ಸಣ್ಣ ಪುಟ್ಟ ಎಟಿಆರ್ ಗಳಲ್ಲಿ ನೀಡುತ್ತಿದ್ದ ಸೇವೆಯನ್ನು ಸ್ಥಗಿತಗೊಳಿಸಲಾಗುತ್ತಿದೆ. ಅದರ ಬಗ್ಗೆ ದಿಲ್ಲಿಯಲ್ಲಿರುವ ಇಂಡಿಗೊ ಸಂಸ್ಥೆಯ ವ್ಯವಸ್ಥಾಪಕರ ಜತೆ ಈಗಾಗಲೇ ಒಂದು ಹಂತದ ಮಾತುಕತೆ ನಡೆಸಿದ್ದೇನೆ. ಯಾವುದೇ ಕಾರಣಕ್ಕೂ ಶಿವಮೊಗ್ಗ- ಬೆಂಗಳೂರು ನಡುವಿನ ಇಂಡಿಗೊ ಸೇವೆ ಸ್ಥಗಿತಗೊಳಿಸದಂತೆ ಕ್ರಮ ವಹಿಸಲಾಗುವುದು ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm