ಬ್ರೇಕಿಂಗ್ ನ್ಯೂಸ್
13-03-26 12:09 pm HK News Staffer ಕರ್ನಾಟಕ
ಶಿವಮೊಗ್ಗ, ಮಾರ್ಚ್ 13: ಶಿವಮೊಗ್ಗದಿಂದ ಬೆಂಗಳೂರು, ಹುಬ್ಬಳ್ಳಿ ಅಲ್ಲದೇ ದೇಶಾದ್ಯಂತ 131 ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಇಂಡಿಗೋ ವಿಮಾನ ಸೇವೆಯು ಏಪ್ರಿಲ್ ಅಂತ್ಯಕ್ಕೆ ಕೊನೆಯಾಗುತ್ತಿದೆ. ಇಂಡಿಗೊ ವಿಮಾನ ಸೇವೆಯು ಮೇ 1ರಿಂದ ಶಿವಮೊಗ್ಗದಿಂದ ಇರುವುದಿಲ್ಲ ಎನ್ನುವ ಸೂಚನೆ ಲಭಿಸಿದೆ.
ಪ್ರಸ್ತುತ ಏಪ್ರಿಲ್ 30ರ ವರೆಗಷ್ಟೇ ಇಂಡಿಗೋ ದೇಶೀಯ ವಿಮಾನಗಳಲ್ಲಿ ಆಸನಗಳನ್ನು ಕಾಯ್ದಿರಿಸಲು ಅವಕಾಶ ನೀಡಲಾಗಿದೆ. ಮೇ 1ರಿಂದ ವಿಮಾನದ ಬುಕಿಂಗ್ ಲಭ್ಯವಿಲ್ಲದಿರುವುದು ಜನರನ್ನು ಗೊಂದಲಕ್ಕೀಡು ಮಾಡಿದೆ. ಪ್ರಯಾಣಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ಇದ್ದರೂ ತಾಂತ್ರಿಕ ಕಾರಣಗಳಿಂದಾಗಿ ಈ ಮಾರ್ಗದ ಸೇವೆಯನ್ನು ಸಂಸ್ಥೆ ಸ್ಥಗಿತಗೊಳಿಸುತ್ತಿದೆ. ಇಂಡಿಗೊ ಸಂಸ್ಥೆಯು ಮುಂಬಯಿ, ಚೆನ್ನೈ, ಹೊಸದಿಲ್ಲಿ, ಅಹಮದಾಬಾದ್, ಹೈದರಾಬಾದ್, ಪಂಜಾಬ್, ಗೋವಾ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ ದೇಶದ 131 ಮಾರ್ಗಗಳಲ್ಲಿ ಸಂಪರ್ಕ ವಿಮಾನ ಸೇವೆಯನ್ನು ಹೊಂದಿದೆ. ಇದು ಬೇರೆ ಸಂಸ್ಥೆಗಳಲ್ಲಿ ಲಭ್ಯವಿಲ್ಲ.
ಹೀಗಾಗಿ, ಜನರ ಬೇಸಿಗೆ ಪ್ರಯಾಣದ ಕನಸಿಗೆ ತಣ್ಣೀರು ಎರಚಿದಂತಾಗಿದೆ. ಲಭ್ಯ ಮಾಹಿತಿ ಪ್ರಕಾರ, ಇತ್ತೀಚೆಗೆ ಅಹಮದಾಬಾದ್ ವಿಮಾನ ದುರಂತದ ಬಳಿಕ ಸೇವೆಯನ್ನು ದೇಶದಲ್ಲಿ ಡಿಜಿಸಿಎ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಅದಕ್ಕೆ ಪೂರಕವಾಗಿ ವಿಮಾನಯಾನ ಸಂಸ್ಥೆಗಳಿಗೆ ಈಗ ಇರುವ ಮಾರ್ಗಗಳಿಗೆ ಮತ್ತಷ್ಟು ವಿಮಾನಗಳು ಮತ್ತು ಪೈಲಟ್ಗಳ ಅಗತ್ಯವಿದೆ. ಕೆಲವು ವಿಮಾನ ಸಂಸ್ಥೆಗಳು ಕಡಿಮೆ ವಿಮಾನಗಳು ಮತ್ತು ಫೈಲಟ್ಗಳನ್ನು ಬಳಸಿಕೊಂಡು ಹೆಚ್ಚಿನ ಅವಧಿಗೆ ನಿರ್ವಹಣೆ ಮಾಡಿಸಿಕೊಳ್ಳುತ್ತಿವೆ. ವಿಮಾನ ದುರಂತ ಹಿನ್ನೆಲೆಯಲ್ಲಿ ಡಿಜಿಸಿಎ ಇದಕ್ಕೆ ಕಡಿವಾಣ ಹಾಕಲು ನಿಯಮಗಳನ್ನು ಕಠಿಣಗೊಳಿಸಿದೆ. ಇದರಿಂದಾಗಿ ಇಂಡಿಗೋ ಸಂಸ್ಥೆಯು ಸಂಚಾರ ಸೇವೆಗಳನ್ನು ಕಡಿತಗೊಳಿಸುತ್ತಿದೆ.
ಡಿಜಿಸಿಎ ವಿಮಾನಯಾನ ಸೇವಾ ನಿಯಮಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದಿದೆ. ಅದರಿಂದಾಗಿ ಇಂಡಿಗೊ ಸಂಸ್ಥೆಗೆ ವಿಮಾನಗಳು ಮತ್ತು ಪೈಲಟ್ ಗಳ ಕೊರತೆ ಎದುರಾಗಿದೆ. ಹೀಗಾಗಿ, ಸಣ್ಣ ಪುಟ್ಟ ಎಟಿಆರ್ ಗಳಲ್ಲಿ ನೀಡುತ್ತಿದ್ದ ಸೇವೆಯನ್ನು ಸ್ಥಗಿತಗೊಳಿಸಲಾಗುತ್ತಿದೆ. ಅದರ ಬಗ್ಗೆ ದಿಲ್ಲಿಯಲ್ಲಿರುವ ಇಂಡಿಗೊ ಸಂಸ್ಥೆಯ ವ್ಯವಸ್ಥಾಪಕರ ಜತೆ ಈಗಾಗಲೇ ಒಂದು ಹಂತದ ಮಾತುಕತೆ ನಡೆಸಿದ್ದೇನೆ. ಯಾವುದೇ ಕಾರಣಕ್ಕೂ ಶಿವಮೊಗ್ಗ- ಬೆಂಗಳೂರು ನಡುವಿನ ಇಂಡಿಗೊ ಸೇವೆ ಸ್ಥಗಿತಗೊಳಿಸದಂತೆ ಕ್ರಮ ವಹಿಸಲಾಗುವುದು ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am