ಬ್ರೇಕಿಂಗ್ ನ್ಯೂಸ್
13-03-26 12:09 pm HK News Staffer ಕರ್ನಾಟಕ
ಶಿವಮೊಗ್ಗ, ಮಾರ್ಚ್ 13: ಶಿವಮೊಗ್ಗದಿಂದ ಬೆಂಗಳೂರು, ಹುಬ್ಬಳ್ಳಿ ಅಲ್ಲದೇ ದೇಶಾದ್ಯಂತ 131 ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಇಂಡಿಗೋ ವಿಮಾನ ಸೇವೆಯು ಏಪ್ರಿಲ್ ಅಂತ್ಯಕ್ಕೆ ಕೊನೆಯಾಗುತ್ತಿದೆ. ಇಂಡಿಗೊ ವಿಮಾನ ಸೇವೆಯು ಮೇ 1ರಿಂದ ಶಿವಮೊಗ್ಗದಿಂದ ಇರುವುದಿಲ್ಲ ಎನ್ನುವ ಸೂಚನೆ ಲಭಿಸಿದೆ.
ಪ್ರಸ್ತುತ ಏಪ್ರಿಲ್ 30ರ ವರೆಗಷ್ಟೇ ಇಂಡಿಗೋ ದೇಶೀಯ ವಿಮಾನಗಳಲ್ಲಿ ಆಸನಗಳನ್ನು ಕಾಯ್ದಿರಿಸಲು ಅವಕಾಶ ನೀಡಲಾಗಿದೆ. ಮೇ 1ರಿಂದ ವಿಮಾನದ ಬುಕಿಂಗ್ ಲಭ್ಯವಿಲ್ಲದಿರುವುದು ಜನರನ್ನು ಗೊಂದಲಕ್ಕೀಡು ಮಾಡಿದೆ. ಪ್ರಯಾಣಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ಇದ್ದರೂ ತಾಂತ್ರಿಕ ಕಾರಣಗಳಿಂದಾಗಿ ಈ ಮಾರ್ಗದ ಸೇವೆಯನ್ನು ಸಂಸ್ಥೆ ಸ್ಥಗಿತಗೊಳಿಸುತ್ತಿದೆ. ಇಂಡಿಗೊ ಸಂಸ್ಥೆಯು ಮುಂಬಯಿ, ಚೆನ್ನೈ, ಹೊಸದಿಲ್ಲಿ, ಅಹಮದಾಬಾದ್, ಹೈದರಾಬಾದ್, ಪಂಜಾಬ್, ಗೋವಾ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ ದೇಶದ 131 ಮಾರ್ಗಗಳಲ್ಲಿ ಸಂಪರ್ಕ ವಿಮಾನ ಸೇವೆಯನ್ನು ಹೊಂದಿದೆ. ಇದು ಬೇರೆ ಸಂಸ್ಥೆಗಳಲ್ಲಿ ಲಭ್ಯವಿಲ್ಲ.
ಹೀಗಾಗಿ, ಜನರ ಬೇಸಿಗೆ ಪ್ರಯಾಣದ ಕನಸಿಗೆ ತಣ್ಣೀರು ಎರಚಿದಂತಾಗಿದೆ. ಲಭ್ಯ ಮಾಹಿತಿ ಪ್ರಕಾರ, ಇತ್ತೀಚೆಗೆ ಅಹಮದಾಬಾದ್ ವಿಮಾನ ದುರಂತದ ಬಳಿಕ ಸೇವೆಯನ್ನು ದೇಶದಲ್ಲಿ ಡಿಜಿಸಿಎ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಅದಕ್ಕೆ ಪೂರಕವಾಗಿ ವಿಮಾನಯಾನ ಸಂಸ್ಥೆಗಳಿಗೆ ಈಗ ಇರುವ ಮಾರ್ಗಗಳಿಗೆ ಮತ್ತಷ್ಟು ವಿಮಾನಗಳು ಮತ್ತು ಪೈಲಟ್ಗಳ ಅಗತ್ಯವಿದೆ. ಕೆಲವು ವಿಮಾನ ಸಂಸ್ಥೆಗಳು ಕಡಿಮೆ ವಿಮಾನಗಳು ಮತ್ತು ಫೈಲಟ್ಗಳನ್ನು ಬಳಸಿಕೊಂಡು ಹೆಚ್ಚಿನ ಅವಧಿಗೆ ನಿರ್ವಹಣೆ ಮಾಡಿಸಿಕೊಳ್ಳುತ್ತಿವೆ. ವಿಮಾನ ದುರಂತ ಹಿನ್ನೆಲೆಯಲ್ಲಿ ಡಿಜಿಸಿಎ ಇದಕ್ಕೆ ಕಡಿವಾಣ ಹಾಕಲು ನಿಯಮಗಳನ್ನು ಕಠಿಣಗೊಳಿಸಿದೆ. ಇದರಿಂದಾಗಿ ಇಂಡಿಗೋ ಸಂಸ್ಥೆಯು ಸಂಚಾರ ಸೇವೆಗಳನ್ನು ಕಡಿತಗೊಳಿಸುತ್ತಿದೆ.
ಡಿಜಿಸಿಎ ವಿಮಾನಯಾನ ಸೇವಾ ನಿಯಮಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದಿದೆ. ಅದರಿಂದಾಗಿ ಇಂಡಿಗೊ ಸಂಸ್ಥೆಗೆ ವಿಮಾನಗಳು ಮತ್ತು ಪೈಲಟ್ ಗಳ ಕೊರತೆ ಎದುರಾಗಿದೆ. ಹೀಗಾಗಿ, ಸಣ್ಣ ಪುಟ್ಟ ಎಟಿಆರ್ ಗಳಲ್ಲಿ ನೀಡುತ್ತಿದ್ದ ಸೇವೆಯನ್ನು ಸ್ಥಗಿತಗೊಳಿಸಲಾಗುತ್ತಿದೆ. ಅದರ ಬಗ್ಗೆ ದಿಲ್ಲಿಯಲ್ಲಿರುವ ಇಂಡಿಗೊ ಸಂಸ್ಥೆಯ ವ್ಯವಸ್ಥಾಪಕರ ಜತೆ ಈಗಾಗಲೇ ಒಂದು ಹಂತದ ಮಾತುಕತೆ ನಡೆಸಿದ್ದೇನೆ. ಯಾವುದೇ ಕಾರಣಕ್ಕೂ ಶಿವಮೊಗ್ಗ- ಬೆಂಗಳೂರು ನಡುವಿನ ಇಂಡಿಗೊ ಸೇವೆ ಸ್ಥಗಿತಗೊಳಿಸದಂತೆ ಕ್ರಮ ವಹಿಸಲಾಗುವುದು ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 12:18 pm
HK News Staffer
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm