ಬ್ರೇಕಿಂಗ್ ನ್ಯೂಸ್
13-03-26 12:09 pm HK News Staffer ಕರ್ನಾಟಕ
ಶಿವಮೊಗ್ಗ, ಮಾರ್ಚ್ 13: ಶಿವಮೊಗ್ಗದಿಂದ ಬೆಂಗಳೂರು, ಹುಬ್ಬಳ್ಳಿ ಅಲ್ಲದೇ ದೇಶಾದ್ಯಂತ 131 ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಇಂಡಿಗೋ ವಿಮಾನ ಸೇವೆಯು ಏಪ್ರಿಲ್ ಅಂತ್ಯಕ್ಕೆ ಕೊನೆಯಾಗುತ್ತಿದೆ. ಇಂಡಿಗೊ ವಿಮಾನ ಸೇವೆಯು ಮೇ 1ರಿಂದ ಶಿವಮೊಗ್ಗದಿಂದ ಇರುವುದಿಲ್ಲ ಎನ್ನುವ ಸೂಚನೆ ಲಭಿಸಿದೆ.
ಪ್ರಸ್ತುತ ಏಪ್ರಿಲ್ 30ರ ವರೆಗಷ್ಟೇ ಇಂಡಿಗೋ ದೇಶೀಯ ವಿಮಾನಗಳಲ್ಲಿ ಆಸನಗಳನ್ನು ಕಾಯ್ದಿರಿಸಲು ಅವಕಾಶ ನೀಡಲಾಗಿದೆ. ಮೇ 1ರಿಂದ ವಿಮಾನದ ಬುಕಿಂಗ್ ಲಭ್ಯವಿಲ್ಲದಿರುವುದು ಜನರನ್ನು ಗೊಂದಲಕ್ಕೀಡು ಮಾಡಿದೆ. ಪ್ರಯಾಣಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ಇದ್ದರೂ ತಾಂತ್ರಿಕ ಕಾರಣಗಳಿಂದಾಗಿ ಈ ಮಾರ್ಗದ ಸೇವೆಯನ್ನು ಸಂಸ್ಥೆ ಸ್ಥಗಿತಗೊಳಿಸುತ್ತಿದೆ. ಇಂಡಿಗೊ ಸಂಸ್ಥೆಯು ಮುಂಬಯಿ, ಚೆನ್ನೈ, ಹೊಸದಿಲ್ಲಿ, ಅಹಮದಾಬಾದ್, ಹೈದರಾಬಾದ್, ಪಂಜಾಬ್, ಗೋವಾ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ ದೇಶದ 131 ಮಾರ್ಗಗಳಲ್ಲಿ ಸಂಪರ್ಕ ವಿಮಾನ ಸೇವೆಯನ್ನು ಹೊಂದಿದೆ. ಇದು ಬೇರೆ ಸಂಸ್ಥೆಗಳಲ್ಲಿ ಲಭ್ಯವಿಲ್ಲ.
ಹೀಗಾಗಿ, ಜನರ ಬೇಸಿಗೆ ಪ್ರಯಾಣದ ಕನಸಿಗೆ ತಣ್ಣೀರು ಎರಚಿದಂತಾಗಿದೆ. ಲಭ್ಯ ಮಾಹಿತಿ ಪ್ರಕಾರ, ಇತ್ತೀಚೆಗೆ ಅಹಮದಾಬಾದ್ ವಿಮಾನ ದುರಂತದ ಬಳಿಕ ಸೇವೆಯನ್ನು ದೇಶದಲ್ಲಿ ಡಿಜಿಸಿಎ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಅದಕ್ಕೆ ಪೂರಕವಾಗಿ ವಿಮಾನಯಾನ ಸಂಸ್ಥೆಗಳಿಗೆ ಈಗ ಇರುವ ಮಾರ್ಗಗಳಿಗೆ ಮತ್ತಷ್ಟು ವಿಮಾನಗಳು ಮತ್ತು ಪೈಲಟ್ಗಳ ಅಗತ್ಯವಿದೆ. ಕೆಲವು ವಿಮಾನ ಸಂಸ್ಥೆಗಳು ಕಡಿಮೆ ವಿಮಾನಗಳು ಮತ್ತು ಫೈಲಟ್ಗಳನ್ನು ಬಳಸಿಕೊಂಡು ಹೆಚ್ಚಿನ ಅವಧಿಗೆ ನಿರ್ವಹಣೆ ಮಾಡಿಸಿಕೊಳ್ಳುತ್ತಿವೆ. ವಿಮಾನ ದುರಂತ ಹಿನ್ನೆಲೆಯಲ್ಲಿ ಡಿಜಿಸಿಎ ಇದಕ್ಕೆ ಕಡಿವಾಣ ಹಾಕಲು ನಿಯಮಗಳನ್ನು ಕಠಿಣಗೊಳಿಸಿದೆ. ಇದರಿಂದಾಗಿ ಇಂಡಿಗೋ ಸಂಸ್ಥೆಯು ಸಂಚಾರ ಸೇವೆಗಳನ್ನು ಕಡಿತಗೊಳಿಸುತ್ತಿದೆ.
ಡಿಜಿಸಿಎ ವಿಮಾನಯಾನ ಸೇವಾ ನಿಯಮಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದಿದೆ. ಅದರಿಂದಾಗಿ ಇಂಡಿಗೊ ಸಂಸ್ಥೆಗೆ ವಿಮಾನಗಳು ಮತ್ತು ಪೈಲಟ್ ಗಳ ಕೊರತೆ ಎದುರಾಗಿದೆ. ಹೀಗಾಗಿ, ಸಣ್ಣ ಪುಟ್ಟ ಎಟಿಆರ್ ಗಳಲ್ಲಿ ನೀಡುತ್ತಿದ್ದ ಸೇವೆಯನ್ನು ಸ್ಥಗಿತಗೊಳಿಸಲಾಗುತ್ತಿದೆ. ಅದರ ಬಗ್ಗೆ ದಿಲ್ಲಿಯಲ್ಲಿರುವ ಇಂಡಿಗೊ ಸಂಸ್ಥೆಯ ವ್ಯವಸ್ಥಾಪಕರ ಜತೆ ಈಗಾಗಲೇ ಒಂದು ಹಂತದ ಮಾತುಕತೆ ನಡೆಸಿದ್ದೇನೆ. ಯಾವುದೇ ಕಾರಣಕ್ಕೂ ಶಿವಮೊಗ್ಗ- ಬೆಂಗಳೂರು ನಡುವಿನ ಇಂಡಿಗೊ ಸೇವೆ ಸ್ಥಗಿತಗೊಳಿಸದಂತೆ ಕ್ರಮ ವಹಿಸಲಾಗುವುದು ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm