ಬ್ರೇಕಿಂಗ್ ನ್ಯೂಸ್
13-03-26 12:09 pm HK News Staffer ಕರ್ನಾಟಕ
ಶಿವಮೊಗ್ಗ, ಮಾರ್ಚ್ 13: ಶಿವಮೊಗ್ಗದಿಂದ ಬೆಂಗಳೂರು, ಹುಬ್ಬಳ್ಳಿ ಅಲ್ಲದೇ ದೇಶಾದ್ಯಂತ 131 ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಇಂಡಿಗೋ ವಿಮಾನ ಸೇವೆಯು ಏಪ್ರಿಲ್ ಅಂತ್ಯಕ್ಕೆ ಕೊನೆಯಾಗುತ್ತಿದೆ. ಇಂಡಿಗೊ ವಿಮಾನ ಸೇವೆಯು ಮೇ 1ರಿಂದ ಶಿವಮೊಗ್ಗದಿಂದ ಇರುವುದಿಲ್ಲ ಎನ್ನುವ ಸೂಚನೆ ಲಭಿಸಿದೆ.
ಪ್ರಸ್ತುತ ಏಪ್ರಿಲ್ 30ರ ವರೆಗಷ್ಟೇ ಇಂಡಿಗೋ ದೇಶೀಯ ವಿಮಾನಗಳಲ್ಲಿ ಆಸನಗಳನ್ನು ಕಾಯ್ದಿರಿಸಲು ಅವಕಾಶ ನೀಡಲಾಗಿದೆ. ಮೇ 1ರಿಂದ ವಿಮಾನದ ಬುಕಿಂಗ್ ಲಭ್ಯವಿಲ್ಲದಿರುವುದು ಜನರನ್ನು ಗೊಂದಲಕ್ಕೀಡು ಮಾಡಿದೆ. ಪ್ರಯಾಣಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ಇದ್ದರೂ ತಾಂತ್ರಿಕ ಕಾರಣಗಳಿಂದಾಗಿ ಈ ಮಾರ್ಗದ ಸೇವೆಯನ್ನು ಸಂಸ್ಥೆ ಸ್ಥಗಿತಗೊಳಿಸುತ್ತಿದೆ. ಇಂಡಿಗೊ ಸಂಸ್ಥೆಯು ಮುಂಬಯಿ, ಚೆನ್ನೈ, ಹೊಸದಿಲ್ಲಿ, ಅಹಮದಾಬಾದ್, ಹೈದರಾಬಾದ್, ಪಂಜಾಬ್, ಗೋವಾ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ ದೇಶದ 131 ಮಾರ್ಗಗಳಲ್ಲಿ ಸಂಪರ್ಕ ವಿಮಾನ ಸೇವೆಯನ್ನು ಹೊಂದಿದೆ. ಇದು ಬೇರೆ ಸಂಸ್ಥೆಗಳಲ್ಲಿ ಲಭ್ಯವಿಲ್ಲ.
ಹೀಗಾಗಿ, ಜನರ ಬೇಸಿಗೆ ಪ್ರಯಾಣದ ಕನಸಿಗೆ ತಣ್ಣೀರು ಎರಚಿದಂತಾಗಿದೆ. ಲಭ್ಯ ಮಾಹಿತಿ ಪ್ರಕಾರ, ಇತ್ತೀಚೆಗೆ ಅಹಮದಾಬಾದ್ ವಿಮಾನ ದುರಂತದ ಬಳಿಕ ಸೇವೆಯನ್ನು ದೇಶದಲ್ಲಿ ಡಿಜಿಸಿಎ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಅದಕ್ಕೆ ಪೂರಕವಾಗಿ ವಿಮಾನಯಾನ ಸಂಸ್ಥೆಗಳಿಗೆ ಈಗ ಇರುವ ಮಾರ್ಗಗಳಿಗೆ ಮತ್ತಷ್ಟು ವಿಮಾನಗಳು ಮತ್ತು ಪೈಲಟ್ಗಳ ಅಗತ್ಯವಿದೆ. ಕೆಲವು ವಿಮಾನ ಸಂಸ್ಥೆಗಳು ಕಡಿಮೆ ವಿಮಾನಗಳು ಮತ್ತು ಫೈಲಟ್ಗಳನ್ನು ಬಳಸಿಕೊಂಡು ಹೆಚ್ಚಿನ ಅವಧಿಗೆ ನಿರ್ವಹಣೆ ಮಾಡಿಸಿಕೊಳ್ಳುತ್ತಿವೆ. ವಿಮಾನ ದುರಂತ ಹಿನ್ನೆಲೆಯಲ್ಲಿ ಡಿಜಿಸಿಎ ಇದಕ್ಕೆ ಕಡಿವಾಣ ಹಾಕಲು ನಿಯಮಗಳನ್ನು ಕಠಿಣಗೊಳಿಸಿದೆ. ಇದರಿಂದಾಗಿ ಇಂಡಿಗೋ ಸಂಸ್ಥೆಯು ಸಂಚಾರ ಸೇವೆಗಳನ್ನು ಕಡಿತಗೊಳಿಸುತ್ತಿದೆ.
ಡಿಜಿಸಿಎ ವಿಮಾನಯಾನ ಸೇವಾ ನಿಯಮಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದಿದೆ. ಅದರಿಂದಾಗಿ ಇಂಡಿಗೊ ಸಂಸ್ಥೆಗೆ ವಿಮಾನಗಳು ಮತ್ತು ಪೈಲಟ್ ಗಳ ಕೊರತೆ ಎದುರಾಗಿದೆ. ಹೀಗಾಗಿ, ಸಣ್ಣ ಪುಟ್ಟ ಎಟಿಆರ್ ಗಳಲ್ಲಿ ನೀಡುತ್ತಿದ್ದ ಸೇವೆಯನ್ನು ಸ್ಥಗಿತಗೊಳಿಸಲಾಗುತ್ತಿದೆ. ಅದರ ಬಗ್ಗೆ ದಿಲ್ಲಿಯಲ್ಲಿರುವ ಇಂಡಿಗೊ ಸಂಸ್ಥೆಯ ವ್ಯವಸ್ಥಾಪಕರ ಜತೆ ಈಗಾಗಲೇ ಒಂದು ಹಂತದ ಮಾತುಕತೆ ನಡೆಸಿದ್ದೇನೆ. ಯಾವುದೇ ಕಾರಣಕ್ಕೂ ಶಿವಮೊಗ್ಗ- ಬೆಂಗಳೂರು ನಡುವಿನ ಇಂಡಿಗೊ ಸೇವೆ ಸ್ಥಗಿತಗೊಳಿಸದಂತೆ ಕ್ರಮ ವಹಿಸಲಾಗುವುದು ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am