ಬ್ರೇಕಿಂಗ್ ನ್ಯೂಸ್
14-03-26 10:14 pm HK News Staffer ಕರ್ನಾಟಕ
ದಾವಣಗೆರೆ, ಮಾರ್ಚ್ 14 : ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆಗೆ ಪುತ್ರಿಯೇ ತನ್ನ ಲಿವರ್ ದಾನ ಮಾಡಿರುವ ಅಪರೂಪದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ನಡೆದಿದೆ. ಕಂದಾಯ ಇಲಾಖೆಯ ಆಹಾರ ಶಾಖೆ ಶಿರಸ್ತೇದಾರ ಆಗಿರುವ ಅಜ್ಜಪ್ಪ ಪತ್ರಿ ಎಂಬವರಿಗೆ ಅವರ ಮಗಳು ಚಂದನಾ ತನ್ನ ಲಿವರ್ ಕೊಟ್ಟು ಅಪ್ಪನ ಜೀವ ಉಳಿಸಿದ್ದಾಳೆ.
ತಂದೆ ಅಜ್ಜಪ್ಪನ ವಿರೋಧದ ನಡುವೆಯೂ ಪುತ್ರಿ ಚಂದನಾ ತನ್ನ ಪ್ರೀತಿ ತೋರಿದ್ದಾಳೆ. ಇದೇ ವೇಳೆ, ಆಸ್ಪತ್ರೆಯ ಬಿಲ್ ಪಾವತಿಸಲಾಗದೆ ನಮ್ಮ ಕುಟುಂಬ ಸಂಕಷ್ಟಕ್ಕೆ ಸಿಲುಕಿದ್ದು, ಇದ್ದ ಮೂರು ಎಕರೆ ಜಮೀನು ಮಾರಾಟ ಮಾಡಿ ಆಸ್ಪತ್ರೆ ಶುಲ್ಕ ಪಾವತಿಸಿದ್ದೇವೆ. ಆದರೂ, ಇನ್ನೂ ಪಾವತಿಸಬೇಕಾದ ಮೊತ್ತ ಬಾಕಿ ಇದೆ ಎಂದು ಅಜ್ಜಪ್ಪನ ಕುಟುಂಬಸ್ಥರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.
ಅಜ್ಜಪ್ಪ ಅವರು ಜಗಳೂರು ಪಟ್ಟಣದ ತಾಲೂಕು ಕಚೇರಿಯಲ್ಲಿ ರಾಜಸ್ವ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಆಹಾರ ಶಾಖೆಯಲ್ಲಿ ಶಿರಸ್ತೇದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಅಜ್ಜಪ್ಪ ತಮ್ಮ ಅನಾರೋಗ್ಯದ ಹಿನ್ನೆಲೆಯಲ್ಲಿ ಇತ್ತೀಚೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಅಜ್ಜಪ್ಪನನ್ನು ತಪಾಸಣೆ ನಡೆಸಿದ ಆಸ್ಪತ್ರೆಯ ವೈದ್ಯರು, ಅವರಿಗೆ ಆಲ್ಕೋಹಾಲ್ ರಹಿತ ಲಿವರ್ ಸಿರೋಸಿಸ್ (ನಾನ್ ಆಲ್ಕೋಹಾಲ್ ಡಿಸೀಜ್) ಇರುವುದಾಗಿ ದೃಢಪಡಿಸಿದ್ದರು. ಬಳಿಕ ಲಿವರ್ ಟ್ರಾನ್ಸ್ಪ್ಲಾಂಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆ ಪುತ್ರಿ ಚಂದನಾ ತನ್ನ ಲಿವರ್ (ಯಕೃತ್) ನ ಒಂದು ಭಾಗವನ್ನು ದಾನ ಮಾಡುವ ಮೂಲಕ ತಂದೆಯ ಜೀವವನ್ನು ಉಳಿಸಿದ್ದಾರೆ.
ಲಿವರ್ ಟ್ರಾನ್ಸ್ಪ್ಲಾಂಟ್ ಯಶಸ್ವಿ ಆಯಿತು. ಆದರೆ, ಆಸ್ಪತ್ರೆಯ ಚಿಕಿತ್ಸಾ ವೆಚ್ಚವು ಲಕ್ಷಾಂತರ ರೂಪಾಯಿ ಆಯಿತು. ಅದನ್ನು ಭರಿಸಲು ನನ್ನ ತಂದೆ ಇಲಾಖೆಯಲ್ಲಿ ಸೇವೆಗೈದ 29 ವರ್ಷದ ಸರ್ಕಾರಿ ಸಂಬಳ ಕೂಡಿಸಿ ಕಳೆದರೂ ಆಸ್ಪತ್ರೆ ವೆಚ್ಚಕ್ಕೆ ಸಾಲುತ್ತಿಲ್ಲ. ತಾನು ಕೂಡ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸಾಧ್ಯವಾದಷ್ಟು ಕಟ್ಟಿದ್ದೇವೆ ಎಂದು ಚಂದನಾ ಹೇಳಿದ್ದಾರೆ. ತನ್ನ ಲಿವರ್ ದಾನ ಮಾಡಿ ತಂದೆಯ ಪ್ರಾಣ ಉಳಿಸಿದ್ದಕ್ಕಾಗಿ ಸಾರ್ವಜನಿಕ ವಲಯದಲ್ಲಿ ಚಂದನಾ ಬಗ್ಗೆ ಪ್ರಶಂಸೆ ವ್ಯಕ್ತವಾಗುತ್ತಿದೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am