ಬ್ರೇಕಿಂಗ್ ನ್ಯೂಸ್
15-03-26 04:27 pm HK News Staffer ಕರ್ನಾಟಕ
ಚಿತ್ರದುರ್ಗ, ಮಾರ್ಚ್ 15: ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ 7 ಗಂಟೆಗೆ ಅಫಘಾತ ಸಂಭವಿಸಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಸ್ನೇಹಿತನ ಮದುವೆಗೆ ಪ್ರಯಾಣಿಸುತ್ತಿದ್ದ ಐದು ಸಬ್ ಇನ್ಸ್ಪೆಕ್ಟರ್ಗಳ ಕಾರು, ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು ಸುಮಾರು 300 ಮೀಟರ್ಗಳಷ್ಟು ಮುಂದಕ್ಕೆ ಎಳೆದೊಯ್ಯಲ್ಪಟ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಮರೇಶ್, ಮಂಜುನಾಥ್ ಮತ್ತು ಸಚಿನ್ ಎಂಬ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಲಕ್ಷ್ಮಣ್ ಮತ್ತು ಈಶ್ವರ್ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣೆಗೆರೆ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ.
ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಹಿರಿಯೂರು ಡಿವೈಎಸ್ಪಿ ಶಿವಕುಮಾರ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಅಪಘಾತದ ನಂತರ ಸ್ಥಳಕ್ಕೆ ಭೇಟಿ ನೀಡಿದರು.ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಘಟನೆಯ ನಂತರ 2 ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಅಪಘಾತ ಸ್ಥಳ ಹಿರಿಯೂರು ತಾಲ್ಲೂಕು ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದ್ದು ಇಲ್ಲಿಯೇ ಪ್ರಕರಣ ದಾಖಲಾಗಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm