ಬ್ರೇಕಿಂಗ್ ನ್ಯೂಸ್
16-03-26 03:36 pm HK News Staffer ಕರ್ನಾಟಕ
ಲಕ್ನೋ, ಮಾರ್ಚ್ 10: ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ತನ್ನನ್ನು ಐಎಎಸ್ ಅಧಿಕಾರಿ ಎಂದು ಪೋಸು ಕೊಟ್ಟು ಜನಸಾಮಾನ್ಯರಿಗೆ ಕರೆ ಮಾಡುತ್ತಿದ್ದ ರಾಹುಲ್ ಕೌಶಿಕ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಪ್ರಕರಣವು ಈಗ ಚರ್ಚೆಗೆ ಗ್ರಾಸವಾಗಿದೆ.
ಮೀರತ್ ಜಿಲ್ಲೆಯ ನೌಚಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಹುಲ್ ಕೌಶಿಕ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನನ್ನು ತಾನು ಐಎಎಸ್ ಅಧಿಕಾರಿ ಎಂದು ಗುರುತಿಸಿಕೊಂಡು ಜನರನ್ನು ಬೆದರಿಸುತ್ತಿದ್ದ ಮತ್ತು ಅಧಿಕಾರಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದ ಎಂಬುದು ಈತನ ಮೇಲಿರುವ ಆರೋಪ.
ರಾಹುಲ್ ಬಂಧನದ ನಂತರ ಆತನ ಕುಟುಂಬಸ್ಥರು ಪೊಲೀಸರಿಗೆ ಐಎಎಸ್ ಪಾಸ್ ಆಗಿರುವ ಬಗ್ಗೆ ದಾಖಲೆಗಳನ್ನು ಸಲ್ಲಿಸಿದ್ದಾರೆ. ಇವರು ನೀಡಿರುವ ಮಾಹಿತಿಯ ಪ್ರಕಾರ, ರಾಹುಲ್ 2008ರಲ್ಲಿ ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದು, ಭಾರತೀಯ ಅಂಚೆ ಸೇವೆಗೆ ಆಯ್ಕೆಯಾಗಿದ್ದ ಎನ್ನಲಾಗಿದೆ. ಇದಕ್ಕೆ ಪೂರಕವಾಗಿ ತರಬೇತಿಯ ಫೋಟೋಗಳು, ಪ್ರಮಾಣಪತ್ರಗಳು ಮತ್ತು ಹಳೆಯ ಪತ್ರಿಕಾ ವರದಿಗಳನ್ನು ಕುಟುಂಬವು ಪ್ರಸ್ತುತಪಡಿಸಿದೆ.
ಕುಟುಂಬದವರು ನೀಡಿದ ದಾಖಲೆಗಳನ್ನು ಪರಿಶೀಲಿಸಿದ ನಂತರ ಪೊಲೀಸರು ರಾಹುಲ್ಗೆ ಸ್ಟೇಷನ್ ಜಾಮೀನು ನೀಡಿ ಬಿಡುಗಡೆ ಮಾಡಿದ್ದಾರೆ. ಆದರೆ, ಆ ದಾಖಲೆಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಶೀಲನೆ ವೇಳೆ ರಾಹುಲ್ ಕೌಶಿಕ್ ಪ್ರಸ್ತುತ ಯಾವುದೇ ಸರ್ಕಾರಿ ಹುದ್ದೆಯಲ್ಲಿ ಇಲ್ಲ ಎಂಬುದು ದೃಢಪಟ್ಟಿದೆ. ಪೊಲೀಸರ ಪ್ರಕಾರ, ಯಾರಾದರೂ ಹಿಂದೆ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದರೂ ಸಹ, ಅವರು ಈಗ ಸೇವೆಯಲ್ಲಿ ಇಲ್ಲದಿದ್ದಾಗ ತಮ್ಮನ್ನು ಐಎಎಸ್ ಅಧಿಕಾರಿ ಎಂದು ಹೇಳಿಕೊಳ್ಳುವುದು ಕಾನೂನುಬಾಹಿರವಾಗುತ್ತದೆ.
ರಾಹುಲ್ ಕೌಶಿಕ್ ತನ್ನ ಮೇಲಿನ ಕ್ರಮವನ್ನು ಪ್ರಶ್ನಿಸಿದ್ದು, ಪೊಲೀಸರು ವಿನಾಕಾರಣ ನನ್ನನ್ನು ಬಂಧಿಸಿದ್ದಾರೆ ಮತ್ತು ಅಕ್ರಮವಾಗಿ ಮೊಬೈಲ್ ವಶಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 12:18 pm
HK News Staffer
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm