ಬ್ರೇಕಿಂಗ್ ನ್ಯೂಸ್
02-01-21 07:19 pm Prabhakar, Shivamogga ಕರ್ನಾಟಕ
ಶಿವಮೊಗ್ಗ, ಜ.02: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ಇವರು ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ. ಗ್ರಾ.ಪಂ. ಚುನಾವಣೆಯ ಸೋಲು ಕಾಂಗ್ರೆಸ್ ನಾಯಕರನ್ನು ಹತಾಶೆಗೆ ತಳ್ಳಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಟೀಕಿಸಿದ್ದಾರೆ.
ರಾಜ್ಯ ಬಿಜೆಪಿ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರನ್ನು ಸಕ್ರೆಬೈಲು ಆನೆ ಬಿಡಾರದ ಬಳಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲು, ಶಿವಮೊಗ್ಗ ಜಿಲ್ಲೆ ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯಾಗಿದೆ. ಇದು ಹೋರಾಟಗಳ ನಾಡಾಗಿದ್ದು, ಇಲ್ಲಿ ಸಂಘಟನೆಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಸಂಘಟನೆಗೆ ಒಂದು ರೀತಿಯ ಪ್ರಯೋಗ ಶಾಲೆ ಇದ್ದಂತೆ. ಇಲ್ಲಿ ಬಿಜೆಪಿ ವಿಶೇಷ ಸಭೆ ನಡೆಯುತ್ತಿರುವುದು ಸ್ವಾಗತ ಎಂದರು.
ಬಿಜೆಪಿಯ ಕಾರ್ಯಕಾರಿಣಿಯ ಸಭೆಯಲ್ಲಿ ಲವ್ ಜಿಹಾದ್, ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ ಚರ್ಚಿಸಲಾಗುವುದು ಮತ್ತು ಕಾರ್ಯಕಾರಿಣಿ ಸಭೆಯಲ್ಲಿ ಬರಬಹುದಾದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.
ಈ ಬಾರಿಯ ಗ್ರಾ.ಪಂ. ಚುನಾವಣೆಯಲ್ಲಿ ನಾವು ಅಭೂತಪೂರ್ವ ಯಶಸ್ಸು ಪಡೆದಿದ್ದೇವೆ. ಸುಮಾರು 62 ಸಾವಿರ ಬಿಜೆಪಿ ಕಾರ್ಯಕರ್ತರು ಸ್ವತಂತ್ರ ಅಭ್ಯರ್ಥಿಗಳಾಗಿ ವಿಜಯಶಾಲಿಗಳಾಗಿದ್ದಾರೆ. ಇದು ನಮ್ಮ ಸಂಘಟನೆಗೆ ಮತ್ತಷ್ಟು ಬಲ ತಂದಿದೆ ಎಂದರು.
ಈ ಸಂದರ್ಭದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ವಿಧಾನಪರಿಷತ್ ಸದಸ್ಯ ಎಸ್.ರುದ್ರೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವರಿದ್ದರು.
The Defeat of Congress in Gram Panchayat Elections 2020 has made them embarrassed slams Naleen Kumar Kateel in Shivamogga.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm