ಬ್ರೇಕಿಂಗ್ ನ್ಯೂಸ್
02-01-21 07:19 pm Prabhakar, Shivamogga ಕರ್ನಾಟಕ
ಶಿವಮೊಗ್ಗ, ಜ.02: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ಇವರು ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ. ಗ್ರಾ.ಪಂ. ಚುನಾವಣೆಯ ಸೋಲು ಕಾಂಗ್ರೆಸ್ ನಾಯಕರನ್ನು ಹತಾಶೆಗೆ ತಳ್ಳಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಟೀಕಿಸಿದ್ದಾರೆ.
ರಾಜ್ಯ ಬಿಜೆಪಿ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರನ್ನು ಸಕ್ರೆಬೈಲು ಆನೆ ಬಿಡಾರದ ಬಳಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲು, ಶಿವಮೊಗ್ಗ ಜಿಲ್ಲೆ ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯಾಗಿದೆ. ಇದು ಹೋರಾಟಗಳ ನಾಡಾಗಿದ್ದು, ಇಲ್ಲಿ ಸಂಘಟನೆಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಸಂಘಟನೆಗೆ ಒಂದು ರೀತಿಯ ಪ್ರಯೋಗ ಶಾಲೆ ಇದ್ದಂತೆ. ಇಲ್ಲಿ ಬಿಜೆಪಿ ವಿಶೇಷ ಸಭೆ ನಡೆಯುತ್ತಿರುವುದು ಸ್ವಾಗತ ಎಂದರು.
ಬಿಜೆಪಿಯ ಕಾರ್ಯಕಾರಿಣಿಯ ಸಭೆಯಲ್ಲಿ ಲವ್ ಜಿಹಾದ್, ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ ಚರ್ಚಿಸಲಾಗುವುದು ಮತ್ತು ಕಾರ್ಯಕಾರಿಣಿ ಸಭೆಯಲ್ಲಿ ಬರಬಹುದಾದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.
ಈ ಬಾರಿಯ ಗ್ರಾ.ಪಂ. ಚುನಾವಣೆಯಲ್ಲಿ ನಾವು ಅಭೂತಪೂರ್ವ ಯಶಸ್ಸು ಪಡೆದಿದ್ದೇವೆ. ಸುಮಾರು 62 ಸಾವಿರ ಬಿಜೆಪಿ ಕಾರ್ಯಕರ್ತರು ಸ್ವತಂತ್ರ ಅಭ್ಯರ್ಥಿಗಳಾಗಿ ವಿಜಯಶಾಲಿಗಳಾಗಿದ್ದಾರೆ. ಇದು ನಮ್ಮ ಸಂಘಟನೆಗೆ ಮತ್ತಷ್ಟು ಬಲ ತಂದಿದೆ ಎಂದರು.
ಈ ಸಂದರ್ಭದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ವಿಧಾನಪರಿಷತ್ ಸದಸ್ಯ ಎಸ್.ರುದ್ರೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವರಿದ್ದರು.
The Defeat of Congress in Gram Panchayat Elections 2020 has made them embarrassed slams Naleen Kumar Kateel in Shivamogga.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 07:33 pm
Mangalore Correspondent
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm