ಬ್ರೇಕಿಂಗ್ ನ್ಯೂಸ್
17-03-26 08:45 pm HK News Staffer ಕರ್ನಾಟಕ
ಹೈದರಾಬಾದ್, ಮಾರ್ಚ್ 17: ಹೈದರಾಬಾದ್ ಹೊರವಲಯದ ಮೊಯಿನಾಬಾದ್ ಪ್ರದೇಶದಲ್ಲಿರುವ ಮಾಜಿ ಬಿಆರ್ಎಸ್ ಶಾಸಕ ಪೈಲಟ್ ರೋಹಿತ್ ರೆಡ್ಡಿ ಅವರ ಫಾರ್ಮ್ಹೌಸ್ನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣ ತೀವ್ರ ಸಂಚಲನ ಮೂಡಿಸಿದೆ. ತೆಲಂಗಾಣ ಪೊಲೀಸರ ಎಲೈಟ್ ಆಕ್ಷನ್ ಗ್ರೂಪ್ ಫಾರ್ ಡ್ರಗ್ ಲಾ ಎನ್ಫೋರ್ಸ್ಮೆಂಟ್ ತಂಡ ಶನಿವಾರ ರಾತ್ರಿ ದಾಳಿ ನಡೆಸಿದ್ದು, ಪಾರ್ಟಿಯಲ್ಲಿ ಮಾಜಿ ಬಿಆರ್ಎಸ್ ಶಾಸಕ ಪೈಲಟ್ ರೋಹಿತ್ ರೆಡ್ಡಿ ಡ್ರಗ್ಸ್ ನಶೆಯಲ್ಲಿ ಸಿಕ್ಕಿಬಿದ್ದಿದ್ದಾರೆ.
ಪೊಲೀಸರು ಸ್ಥಳಕ್ಕೆ ತಲುಪುತ್ತಿದ್ದಂತೆ ದೆಹಲಿ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ನಮಿತ್ ಶರ್ಮಾ ಗುಂಡು ಹಾರಿಸಿದ್ದಾನೆ. ಈ ಗುಂಡು ರಿತೇಶ್ ರೆಡ್ಡಿ ಅವರ ಪರವಾನಗಿ ಹೊಂದಿದ ಬಂದೂಕಿನಿಂದ ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಒಟ್ಟು 10 ಮಂದಿ ಇದ್ದು, ಅವರಲ್ಲಿ 9 ಮಂದಿ ಪುರುಷರು ಮತ್ತು ಒಬ್ಬ ಮಹಿಳೆ ಇದ್ದರು. ಸಾರ್ವಜನಿಕ ಪ್ರತಿನಿಧಿಗಳು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಗಳು ಸೇರಿದಂತೆ ಹಲವರು ಪಾರ್ಟಿಯಲ್ಲಿ ಭಾಗವಹಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸರು ಸ್ಥಳದಲ್ಲಿ ಸುಮಾರು 2 ಗ್ರಾಂ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಪಾರ್ಟಿಯಲ್ಲಿ ಭಾಗವಹಿಸಿದ್ದವರಲ್ಲಿ ರೋಹಿತ್ ರೆಡ್ಡಿ ಜೊತೆಗೆ ಪುಟ್ಟ ಮಹೇಶ್ ಕುಮಾರ್ ಯಾದವ್ ಸೇರಿದಂತೆ ಹಲವರು ಇದ್ದರು. ಡ್ರಗ್ ಪರೀಕ್ಷೆಯಲ್ಲಿ ಐವರು ಪಾಸಿಟಿವ್ ಬಂದಿದ್ದು, ಇವರಲ್ಲಿ ರೋಹಿತ್ ರೆಡ್ಡಿ, ನಮಿತ್ ಮಿಶ್ರಾ, ರಿತೇಶ್ ರೆಡ್ಡಿ, ಕೌಶಿಕ್ ರವಿ ಮತ್ತು ಅರ್ಜುನ್ ರೆಡ್ಡಿ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂದಿನ ತನಿಖೆಗಾಗಿ ಎಲ್ಲರನ್ನು ಹೆಚ್ಚುವರಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಂಪೂರ್ಣ ವರದಿ ಬಂದ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಪಿ ಯೋಗೇಶ್ ಗೌತಮ್ ಹೇಳಿದ್ದಾರೆ.
ಇದರ ನಡುವೆ, ಪ್ರಕರಣದ ತೀವ್ರತೆ ಹೆಚ್ಚಾಗುತ್ತಿದ್ದಂತೆ ಭಾರತ ರಾಷ್ಟ್ರ ಸಮಿತಿ (BRS) ಪಕ್ಷವು ರೋಹಿತ್ ರೆಡ್ಡಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಸೋಮ ಭರತ್ ಕುಮಾರ್ ನೀಡಿದ ನೋಟಿಸ್ನಲ್ಲಿ, ಈ ಘಟನೆ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವರದಿಯಾಗಿದ್ದು, ಸಾರ್ವಜನಿಕರಲ್ಲಿ ಕಳವಳ ಮೂಡಿಸಿದೆ ಹಾಗೂ ಪಕ್ಷದ ಇಮೇಜ್ಗೆ ಧಕ್ಕೆಯಾಗಿದೆ ಎಂದು ಉಲ್ಲೇಖಿಸಲಾಗಿದೆ.
ಪಕ್ಷವು 7 ದಿನಗಳೊಳಗೆ ಲಿಖಿತವಾಗಿ ಸ್ಪಷ್ಟನೆ ನೀಡುವಂತೆ ಸೂಚಿಸಿದ್ದು, ಅದುವರೆಗೆ ಪಕ್ಷದ ಚಟುವಟಿಕೆಗಳು ಹಾಗೂ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm