ಬ್ರೇಕಿಂಗ್ ನ್ಯೂಸ್
18-03-26 09:44 am HK News Staffer ಕರ್ನಾಟಕ
ಬೆಂಗಳೂರು, ಮಾ 18: ನಗರದ ಆರ್ಎಂವಿ ಎಕ್ಸ್ಟೆನ್ಶನ್ ಪ್ರದೇಶದ ವೈದ್ಯೆಯೊಬ್ಬರು ತಮ್ಮ ಬ್ಯಾಂಕ್ ಲಾಕರ್ನಿಂದ 24 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಾಣೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
57 ವರ್ಷದ ವೈದ್ಯೆ ನೀಡಿದ ದೂರಿನ ಪ್ರಕಾರ, ರಾಷ್ಟ್ರೀಯಕೃತ ಬ್ಯಾಂಕ್ ಶಾಖೆಯಲ್ಲಿ ಸೇವಿಂಗ್ಸ್ ಖಾತೆ ಮತ್ತು ಲಾಕರ್ ಹೊಂದಿದ್ದಾರೆ. ಮಗನ ಮದುವೆ ಹಿನ್ನೆಲೆ ಫೆಬ್ರವರಿ 27ರಂದು ಲಾಕರ್ನಿಂದ ಚಿನ್ನಾಭರಣವನ್ನು ತೆಗೆದಿದ್ದರು.
ಮದುವೆ ಕಾರ್ಯ ಮುಗಿದ ಮಾರ್ಚ್ 3ರಂದು ಬೆಳಿಗ್ಗೆ 11.15ರ ಸುಮಾರಿಗೆ ಮತ್ತೆ ಬ್ಯಾಂಕ್ಗೆ ತೆರಳಿ ಸುಮಾರು 150–160 ಗ್ರಾಂ ತೂಕದ ಚಿನ್ನಾಭರಣ, ಹಾರ, ಚೈನ್, ಜುಂಕಿ ಹಾಗೂ ಎರಡು ಬಳೆಗಳು ಸೇರಿದಂತೆ ಒಟ್ಟು ₹24 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಟ್ರಾನ್ಸರೆಂಟ್ ಪ್ಲಾಸ್ಟಿಕ್ ಡಬ್ಬಿಯಲ್ಲಿ ಇಟ್ಟು ಲಾಕರ್ನಲ್ಲಿ ಭದ್ರಪಡಿಸಿದ್ದರು.
ಆದರೆ ಮಾರ್ಚ್ 12ರಂದು ಉಳಿದ ಆಭರಣಗಳನ್ನು ಇಡಲು ಮತ್ತೆ ಲಾಕರ್ ತೆರೆದಾಗ ಆ ಪ್ಲಾಸ್ಟಿಕ್ ಡಬ್ಬಿಯೇ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಬ್ಯಾಂಕ್ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ, ಸಿಸಿಟಿವಿ ದೃಶ್ಯಾಗಳನ್ನ ಪರಿಶೀಲನೆ ನಡೆಸಲಾಗಿದೆ. ಅದರಲ್ಲಿ ವೈದ್ಯೆ ಲಾಕರ್ ರೂಮ್ಗೆ ಜ್ಯುವೆಲ್ಲರಿ ಬಾಕ್ಸ್ ಹಾಗೂ ಬ್ರೌನ್ ಬ್ಯಾಗ್ ಹಿಡಿದು ಪ್ರವೇಶಿಸಿ, ಹೊರಬರುವಾಗ ಕೇವಲ ಬ್ಯಾಗ್ ಮಾತ್ರ ಹೊಂದಿರುವುದು ಗಮನಕ್ಕೆ ಬಂದಿದೆ.
ಬ್ಯಾಂಕ್ ಸಿಬ್ಬಂದಿಯಿಂದ ಸಮರ್ಪಕ ಉತ್ತರ ಸಿಗದ ಹಿನ್ನೆಲೆ, ವೈದ್ಯೆ ಸದಾಶಿವನಗರ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm