ಬ್ರೇಕಿಂಗ್ ನ್ಯೂಸ್
18-03-26 11:38 am HK News Staffer ಕರ್ನಾಟಕ
ಬೆಳಗಾವಿ, ಮಾರ್ಚ್ 18: ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣುಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಉಕ್ಕಡ ಗ್ರಾಮದಲ್ಲಿ ನಡೆದಿದೆ. ಮಗು ಪ್ರಿಯಾಂಕಾ ಸಾವಿನ ಹಿಂದೆ ತಂದೆಯೇ ವಿಷಪ್ರಾಶನ ಮಾಡಿರುವ ಸಾಧ್ಯತೆ ಇದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣ ಮತ್ತಷ್ಟು ತೀವ್ರ ಸ್ವರೂಪ ಪಡೆದಿದೆ.
ಹೆರಿಗೆ ಹಿನ್ನೆಲೆಯಲ್ಲಿ ತಾಯಿ ಶೀಲಾ ತವರು ಮನೆಯಲ್ಲಿ ವಾಸವಾಗಿದ್ದರು. ಮಾರ್ಚ್ 17ರಂದು ಮಧ್ಯಾಹ್ನ ಮಗು ಮತ್ತು ಪತ್ನಿಯನ್ನು ಭೇಟಿ ಮಾಡಲು ತಂದೆ ಭೀಮರಾಯ ಬಂದಿದ್ದಾನೆ. ಸ್ವಲ್ಪ ಸಮಯ ಪತ್ನಿ ಹಾಗೂ ಮಗುವಿನೊಂದಿಗೆ ಸಮಯ ಕಳೆದು ಬಳಿಕ ತನ್ನ ಊರಿಗೆ ಮರಳಿದ್ದಾನೆ. ಆದರೆ ಆತ ಹೋದ ಕೆಲವೇ ಹೊತ್ತಿನಲ್ಲಿ ಮಗು ಏಕಾಏಕಿ ಸಾವನ್ನಪ್ಪಿರುವುದು ಕುಟುಂಬವನ್ನು ಬೆಚ್ಚಿಬೀಳಿಸಿದೆ.
ಮಗು ಆರೋಗ್ಯವಾಗಿದ್ದರೂ, ದಿಢೀರ್ ಸಾವಿಗೆ ಕಾರಣ ಏನು ಎಂಬ ಪ್ರಶ್ನೆ ಉದ್ಭವಿಸಿದ ಬೆನ್ನಲ್ಲೇ ತಂದೆಯ ವರ್ತನೆ ಅನುಮಾನಕ್ಕೆ ಕಾರಣವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಭೀಮರಾಯ ಸಣ್ಣ ಮಾತ್ರೆ ತಂದು ಅದರಿಂದ ಮಗುವಿಗೆ ಏನೋ ಕುಡಿಸಿದ್ದಾನೆ ಎಂಬ ಆರೋಪವನ್ನು ಪತ್ನಿ ಶೀಲಾ ಹಾಗೂ ಆಕೆಯ ಕುಟುಂಬಸ್ಥರು ಮಾಡಿದ್ದಾರೆ.
ಘಟನೆಯ ನಂತರ ಭೀಮರಾಯ ನಾಪತ್ತೆಯಾಗಿರುವುದು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ. ಮೃತ ಮಗುವಿನ ಶವವನ್ನು ಬಿಮ್ಸ್ ಆಸ್ಪತ್ರೆ ಮುಂದೆ ಇಟ್ಟು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಸ್ಥಳಕ್ಕೆ ಡಿಸಿಪಿ ನಾರಾಯಣ್ ಬರಮನಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಮರಣೋತ್ತರ ಪರೀಕ್ಷೆ ವರದಿ ಬಳಿಕ ನಿಜಾಂಶ ಬಹಿರಂಗವಾಗಲಿದೆ ಎಂದು ತಿಳಿಸಿದ್ದಾರೆ. ಸದ್ಯ ಆರೋಪಿ ಭೀಮರಾಯ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರಿದಿದೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm