ಬ್ರೇಕಿಂಗ್ ನ್ಯೂಸ್
18-03-26 03:41 pm HK News Staffer ಕರ್ನಾಟಕ
ಬೆಂಗಳೂರು, ಮಾ 18: ಪ್ರಾಂಕ್ ವಿಡಿಯೋ ಸೃಷ್ಟಿಸುವ ಸಲುವಾಗಿ ವ್ಯಕ್ತಿಯನ್ನು ಚೀಲಕ್ಕೆ ಹಾಕಿ ಕೊರಿಯರ್ ಶಾಪ್ಗೆ ತಂದ ಘಟನೆ ಮಂಗಳವಾರ ಸಂಜೆ ಬೆಂಗಳೂರಿನ ವೈಯಾಲಿ ಕಾವಲ್ ವ್ಯಾಪ್ತಿಯಲ್ಲಿ ನಡೆದಿದೆ.
ಮಹಿಳೆ ಸೇರಿದಂತೆ ಕೆಲವರು ವ್ಯಕ್ತಿಯೊಬ್ಬರನ್ನು ಮೂಟೆಯಲ್ಲಿ ಹಾಕಿಕೊಂಡು ಬಂದು ಕೊರಿಯರ್ ಮಾಡಬೇಕಿದೆ ಎಂದಿದ್ದಾರೆ. ಆದರೆ, ಚೀಲ ಅಲುಗಾಡುತ್ತಿರುವುದನ್ನು ಗಮನಿಸಿದ ಕೊರಿಯರ್ ಸಿಬ್ಬಂದಿ ಪರಿಶೀಲಿಸಿದಾಗ ಅದರೊಳಗೆ ವ್ಯಕ್ತಿಯೊಬ್ಬರು ಇರುವುದು ಪತ್ತೆಯಾಗಿದೆ. ಕೂಡಲೇ ಅವರು ವೈಯಾಲಿಕಾವಲ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಷ್ಟರಲ್ಲಾಗಲೇ ಆರೋಪಿಗಳು ಕಾಲ್ಕಿತ್ತಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಾಂಕ್ಗಾಗಿ ಈ ವಿಲಕ್ಷಣವಾದ ಕೃತ್ಯವೆಸಗಿದ ಮಹಿಳೆ ಸೇರಿದಂತೆ ಐವರನ್ನು ಪತ್ತೆ ಹಚ್ಚಿದ್ದಾರೆ.
ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಬಸ್ ದರಗಳು ಹೆಚ್ಚಾಗಿರುವುದರಿಂದ ಟಿಕೆಟ್ಗಳು ಸಿಗುತ್ತಿಲ್ಲ. ಆದ್ದರಿಂದ ಸಂದೇಶ ರವಾನಿಸಲು ಹೀಗೆ ಮಾಡಲಾಗಿದೆ. ಈ ರೀತಿ ಮಾಡುವುದು ತಪ್ಪು ಅಂತಾ ಗೊತ್ತಾಗಿದೆ. ಯಾರೂ ಕೂಡ ಈ ರೀತಿ ಮಾಡದಂತೆ ತಪ್ಪಿಗೆ ಕ್ಷಮೆಯಾಚಿಸಿದ್ದಾರೆ. ಸದ್ಯ ಅವರಿಗೆ ಎಚ್ಚರಿಕೆ ನೀಡಿ ಬಿಟ್ಟು ಕಳಿಸಲಾಗಿದೆ. ಯಾವುದೇ ಉದ್ದೇಶಕ್ಕಾಗಿ ಈ ರೀತಿ ಪ್ರಾಂಕ್ ಮಾಡುವುದು ಸರಿಯಲ್ಲ ಎಂದು ವೈಯಾಲಿ ಕಾವಲ್ ಠಾಣೆ ಪೊಲೀಸರು ತಿಳಿಸಿದ್ದಾರೆ.
ಈ ಫ್ಯಾಮಿಲಿ `ಮಾಂಕ್ ಪ್ರಾಂಕ್’ ಎಂಬ ಅಕೌಂಟ್ನ್ನು ಹೊಂದಿದ್ದು, ಗಂಡ, ಹೆಂಡತಿ, ಅತ್ತೆ, ಮಾವ ಮತ್ತು ಮೈದುನ ಸೇರಿಕೊಂಡು ರೀಲ್ಸ್, ಪ್ರ್ಯಾಂಕ್ ಮಾಡುತ್ತಿರುತ್ತಾರೆ. ನಾವು ಬಸ್ ರಶ್ ವಿಚಾರದಲ್ಲಿ ಪ್ರ್ಯಾಂಕ್ ಮಾಡಲು ಹೋಗಿದ್ವಿ, ಅದು ಈ ರೀತಿ ತಪ್ಪಾಗುತ್ತೆ ಅಂತಾ ಗೊತ್ತಿರಲಿಲ್ಲ. ನಾವು ತಪ್ಪು ಮಾಡಿದ್ದೇವೆ, ಅದರಿಂದ ಹೀಗೆ ಕಷ್ಟ ಆಗುತ್ತೆ ಅಂತಾ ಗೊತ್ತಿರಲಿಲ್ಲ. ಪೊಲೀಸರು ಕರೆಸಿ ಬುದ್ಧಿ ಹೇಳಿದ್ರು, ಇನ್ಮುಂದೆ ಈ ರೀತಿ ನಾವು ಮಾಡಲ್ಲ. ಯಾರು ರೀತಿ ನೀವು ಮಾಡಬೇಡಿ ಎಂದು ಕೇಳಿಕೊಂಡಿದ್ದಾರೆ.
Alleged ‘Human Parcel’ Protest Stunt Triggers Panic in Bengaluru; Family Warned After Elderly Man Struggled to Breathe
— Yasir Mushtaq (@path2shah) March 17, 2026
Bengaluru
An alleged attempt to make a protest "go viral" nearly turned tragic in central #Bengaluru’s Vyalikaval area.
A family sparked a major security… pic.twitter.com/O3KICSCQdG
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm