ಬ್ರೇಕಿಂಗ್ ನ್ಯೂಸ್
18-03-26 03:41 pm HK News Staffer ಕರ್ನಾಟಕ
ಬೆಂಗಳೂರು, ಮಾ 18: ಪ್ರಾಂಕ್ ವಿಡಿಯೋ ಸೃಷ್ಟಿಸುವ ಸಲುವಾಗಿ ವ್ಯಕ್ತಿಯನ್ನು ಚೀಲಕ್ಕೆ ಹಾಕಿ ಕೊರಿಯರ್ ಶಾಪ್ಗೆ ತಂದ ಘಟನೆ ಮಂಗಳವಾರ ಸಂಜೆ ಬೆಂಗಳೂರಿನ ವೈಯಾಲಿ ಕಾವಲ್ ವ್ಯಾಪ್ತಿಯಲ್ಲಿ ನಡೆದಿದೆ.
ಮಹಿಳೆ ಸೇರಿದಂತೆ ಕೆಲವರು ವ್ಯಕ್ತಿಯೊಬ್ಬರನ್ನು ಮೂಟೆಯಲ್ಲಿ ಹಾಕಿಕೊಂಡು ಬಂದು ಕೊರಿಯರ್ ಮಾಡಬೇಕಿದೆ ಎಂದಿದ್ದಾರೆ. ಆದರೆ, ಚೀಲ ಅಲುಗಾಡುತ್ತಿರುವುದನ್ನು ಗಮನಿಸಿದ ಕೊರಿಯರ್ ಸಿಬ್ಬಂದಿ ಪರಿಶೀಲಿಸಿದಾಗ ಅದರೊಳಗೆ ವ್ಯಕ್ತಿಯೊಬ್ಬರು ಇರುವುದು ಪತ್ತೆಯಾಗಿದೆ. ಕೂಡಲೇ ಅವರು ವೈಯಾಲಿಕಾವಲ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಷ್ಟರಲ್ಲಾಗಲೇ ಆರೋಪಿಗಳು ಕಾಲ್ಕಿತ್ತಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಾಂಕ್ಗಾಗಿ ಈ ವಿಲಕ್ಷಣವಾದ ಕೃತ್ಯವೆಸಗಿದ ಮಹಿಳೆ ಸೇರಿದಂತೆ ಐವರನ್ನು ಪತ್ತೆ ಹಚ್ಚಿದ್ದಾರೆ.
ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಬಸ್ ದರಗಳು ಹೆಚ್ಚಾಗಿರುವುದರಿಂದ ಟಿಕೆಟ್ಗಳು ಸಿಗುತ್ತಿಲ್ಲ. ಆದ್ದರಿಂದ ಸಂದೇಶ ರವಾನಿಸಲು ಹೀಗೆ ಮಾಡಲಾಗಿದೆ. ಈ ರೀತಿ ಮಾಡುವುದು ತಪ್ಪು ಅಂತಾ ಗೊತ್ತಾಗಿದೆ. ಯಾರೂ ಕೂಡ ಈ ರೀತಿ ಮಾಡದಂತೆ ತಪ್ಪಿಗೆ ಕ್ಷಮೆಯಾಚಿಸಿದ್ದಾರೆ. ಸದ್ಯ ಅವರಿಗೆ ಎಚ್ಚರಿಕೆ ನೀಡಿ ಬಿಟ್ಟು ಕಳಿಸಲಾಗಿದೆ. ಯಾವುದೇ ಉದ್ದೇಶಕ್ಕಾಗಿ ಈ ರೀತಿ ಪ್ರಾಂಕ್ ಮಾಡುವುದು ಸರಿಯಲ್ಲ ಎಂದು ವೈಯಾಲಿ ಕಾವಲ್ ಠಾಣೆ ಪೊಲೀಸರು ತಿಳಿಸಿದ್ದಾರೆ.
ಈ ಫ್ಯಾಮಿಲಿ `ಮಾಂಕ್ ಪ್ರಾಂಕ್’ ಎಂಬ ಅಕೌಂಟ್ನ್ನು ಹೊಂದಿದ್ದು, ಗಂಡ, ಹೆಂಡತಿ, ಅತ್ತೆ, ಮಾವ ಮತ್ತು ಮೈದುನ ಸೇರಿಕೊಂಡು ರೀಲ್ಸ್, ಪ್ರ್ಯಾಂಕ್ ಮಾಡುತ್ತಿರುತ್ತಾರೆ. ನಾವು ಬಸ್ ರಶ್ ವಿಚಾರದಲ್ಲಿ ಪ್ರ್ಯಾಂಕ್ ಮಾಡಲು ಹೋಗಿದ್ವಿ, ಅದು ಈ ರೀತಿ ತಪ್ಪಾಗುತ್ತೆ ಅಂತಾ ಗೊತ್ತಿರಲಿಲ್ಲ. ನಾವು ತಪ್ಪು ಮಾಡಿದ್ದೇವೆ, ಅದರಿಂದ ಹೀಗೆ ಕಷ್ಟ ಆಗುತ್ತೆ ಅಂತಾ ಗೊತ್ತಿರಲಿಲ್ಲ. ಪೊಲೀಸರು ಕರೆಸಿ ಬುದ್ಧಿ ಹೇಳಿದ್ರು, ಇನ್ಮುಂದೆ ಈ ರೀತಿ ನಾವು ಮಾಡಲ್ಲ. ಯಾರು ರೀತಿ ನೀವು ಮಾಡಬೇಡಿ ಎಂದು ಕೇಳಿಕೊಂಡಿದ್ದಾರೆ.
Alleged ‘Human Parcel’ Protest Stunt Triggers Panic in Bengaluru; Family Warned After Elderly Man Struggled to Breathe
— Yasir Mushtaq (@path2shah) March 17, 2026
Bengaluru
An alleged attempt to make a protest "go viral" nearly turned tragic in central #Bengaluru’s Vyalikaval area.
A family sparked a major security… pic.twitter.com/O3KICSCQdG
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am