ಬ್ರೇಕಿಂಗ್ ನ್ಯೂಸ್
18-03-26 03:41 pm HK News Staffer ಕರ್ನಾಟಕ
ಬೆಂಗಳೂರು, ಮಾ 18: ಪ್ರಾಂಕ್ ವಿಡಿಯೋ ಸೃಷ್ಟಿಸುವ ಸಲುವಾಗಿ ವ್ಯಕ್ತಿಯನ್ನು ಚೀಲಕ್ಕೆ ಹಾಕಿ ಕೊರಿಯರ್ ಶಾಪ್ಗೆ ತಂದ ಘಟನೆ ಮಂಗಳವಾರ ಸಂಜೆ ಬೆಂಗಳೂರಿನ ವೈಯಾಲಿ ಕಾವಲ್ ವ್ಯಾಪ್ತಿಯಲ್ಲಿ ನಡೆದಿದೆ.
ಮಹಿಳೆ ಸೇರಿದಂತೆ ಕೆಲವರು ವ್ಯಕ್ತಿಯೊಬ್ಬರನ್ನು ಮೂಟೆಯಲ್ಲಿ ಹಾಕಿಕೊಂಡು ಬಂದು ಕೊರಿಯರ್ ಮಾಡಬೇಕಿದೆ ಎಂದಿದ್ದಾರೆ. ಆದರೆ, ಚೀಲ ಅಲುಗಾಡುತ್ತಿರುವುದನ್ನು ಗಮನಿಸಿದ ಕೊರಿಯರ್ ಸಿಬ್ಬಂದಿ ಪರಿಶೀಲಿಸಿದಾಗ ಅದರೊಳಗೆ ವ್ಯಕ್ತಿಯೊಬ್ಬರು ಇರುವುದು ಪತ್ತೆಯಾಗಿದೆ. ಕೂಡಲೇ ಅವರು ವೈಯಾಲಿಕಾವಲ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಷ್ಟರಲ್ಲಾಗಲೇ ಆರೋಪಿಗಳು ಕಾಲ್ಕಿತ್ತಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಾಂಕ್ಗಾಗಿ ಈ ವಿಲಕ್ಷಣವಾದ ಕೃತ್ಯವೆಸಗಿದ ಮಹಿಳೆ ಸೇರಿದಂತೆ ಐವರನ್ನು ಪತ್ತೆ ಹಚ್ಚಿದ್ದಾರೆ.
ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಬಸ್ ದರಗಳು ಹೆಚ್ಚಾಗಿರುವುದರಿಂದ ಟಿಕೆಟ್ಗಳು ಸಿಗುತ್ತಿಲ್ಲ. ಆದ್ದರಿಂದ ಸಂದೇಶ ರವಾನಿಸಲು ಹೀಗೆ ಮಾಡಲಾಗಿದೆ. ಈ ರೀತಿ ಮಾಡುವುದು ತಪ್ಪು ಅಂತಾ ಗೊತ್ತಾಗಿದೆ. ಯಾರೂ ಕೂಡ ಈ ರೀತಿ ಮಾಡದಂತೆ ತಪ್ಪಿಗೆ ಕ್ಷಮೆಯಾಚಿಸಿದ್ದಾರೆ. ಸದ್ಯ ಅವರಿಗೆ ಎಚ್ಚರಿಕೆ ನೀಡಿ ಬಿಟ್ಟು ಕಳಿಸಲಾಗಿದೆ. ಯಾವುದೇ ಉದ್ದೇಶಕ್ಕಾಗಿ ಈ ರೀತಿ ಪ್ರಾಂಕ್ ಮಾಡುವುದು ಸರಿಯಲ್ಲ ಎಂದು ವೈಯಾಲಿ ಕಾವಲ್ ಠಾಣೆ ಪೊಲೀಸರು ತಿಳಿಸಿದ್ದಾರೆ.
ಈ ಫ್ಯಾಮಿಲಿ `ಮಾಂಕ್ ಪ್ರಾಂಕ್’ ಎಂಬ ಅಕೌಂಟ್ನ್ನು ಹೊಂದಿದ್ದು, ಗಂಡ, ಹೆಂಡತಿ, ಅತ್ತೆ, ಮಾವ ಮತ್ತು ಮೈದುನ ಸೇರಿಕೊಂಡು ರೀಲ್ಸ್, ಪ್ರ್ಯಾಂಕ್ ಮಾಡುತ್ತಿರುತ್ತಾರೆ. ನಾವು ಬಸ್ ರಶ್ ವಿಚಾರದಲ್ಲಿ ಪ್ರ್ಯಾಂಕ್ ಮಾಡಲು ಹೋಗಿದ್ವಿ, ಅದು ಈ ರೀತಿ ತಪ್ಪಾಗುತ್ತೆ ಅಂತಾ ಗೊತ್ತಿರಲಿಲ್ಲ. ನಾವು ತಪ್ಪು ಮಾಡಿದ್ದೇವೆ, ಅದರಿಂದ ಹೀಗೆ ಕಷ್ಟ ಆಗುತ್ತೆ ಅಂತಾ ಗೊತ್ತಿರಲಿಲ್ಲ. ಪೊಲೀಸರು ಕರೆಸಿ ಬುದ್ಧಿ ಹೇಳಿದ್ರು, ಇನ್ಮುಂದೆ ಈ ರೀತಿ ನಾವು ಮಾಡಲ್ಲ. ಯಾರು ರೀತಿ ನೀವು ಮಾಡಬೇಡಿ ಎಂದು ಕೇಳಿಕೊಂಡಿದ್ದಾರೆ.
Alleged ‘Human Parcel’ Protest Stunt Triggers Panic in Bengaluru; Family Warned After Elderly Man Struggled to Breathe
— Yasir Mushtaq (@path2shah) March 17, 2026
Bengaluru
An alleged attempt to make a protest "go viral" nearly turned tragic in central #Bengaluru’s Vyalikaval area.
A family sparked a major security… pic.twitter.com/O3KICSCQdG
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm