ಬ್ರೇಕಿಂಗ್ ನ್ಯೂಸ್
18-03-26 06:10 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 18: ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧ ಸಾಕಷ್ಟು ಆರೋಪಗಳು ಮಾಧ್ಯಮಗಳಲ್ಲಿ ಬರುತ್ತಿವೆ. ಪ್ರಾಥಮಿಕ ಮಾಹಿತಿ ಆಧರಿಸಿ ಹಿರಿಯ ಅಧಿಕಾರಿಗಳು ಸುಮೊಟೋ ಕೇಸು ದಾಖಲಿಸಬೇಕು. ಇಂತಹ ಪ್ರಕರಣಗಳಲ್ಲಿ ಕಠಿಣವಾಗಿ ಕಾನೂನು ಜಾರಿ ಮಾಡಬೇಕು, ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ.
ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಚೌಧರಿ, ಈಗಾಗಲೇ ಘಟನೆ ಬಗ್ಗೆ ಗೃಹ ಸಚಿವರ ಜೊತೆಗೆ ಮಾತನಾಡಿದ್ದೇನೆ, ಈ ಬಗ್ಗೆ ನಾನೇನೂ ಹೇಳಬೇಕಾಗಿಲ್ಲ. ಇಲಾಖೆಯ ಹಿರಿಯ ಅಧಿಕಾರಿಗಳು ಕ್ರಮ ಜರುಗಿಸುತ್ತಾರೆ, ಪ್ರಾಥಮಿಕ ಮಾಹಿತಿ ಮೇಲೆ ಸುಮೋಟೊ ಕೇಸು ದಾಖಲಿಸಿಕೊಳ್ಳಬಹುದು. ಸಂತ್ರಸ್ತೆಯರು ದೂರು ನೀಡಲೇಬೇಕು ಅಂತ ಇಲ್ಲವೆಂದು ಗೃಹ ಸಚಿವರು ಹೇಳಿದ್ದಾರೆ.
ಹಾಗಾಗಿ ನಾವು ಆಯೋಗದಿಂದ ಮಂಗಳೂರು ಪೊಲೀಸ್ ಕಮಿಷನರ್ ಗೆ ಪತ್ರ ಬರೆದಿದ್ದು ಸ್ವಯಂಪ್ರೇರಿತ ಕೇಸು ದಾಖಲಿಸಬೇಕು ಜೊತೆಗೆ ಈ ಬಗ್ಗೆ ಎರಡು ದಿನದಲ್ಲಿ ವರದಿ ಸಲ್ಲಿಸಬೇಕು ಎಂದು ಹೇಳಿದ್ದೇವೆ. ಪೊಲೀಸ್ ಇಲಾಖೆಯಲ್ಲಿ ಇರೋದು ಕಾನೂನು ರಕ್ಷಣೆಗಾಗಿ, ಕಾನೂನು ಭಂಜನೆ ಮಾಡುವುದಕ್ಕಲ್ಲ. ಇಲ್ಲಿ ಮಹಿಳೆಯರಿಗೆ ಅನ್ಯಾಯ, ಕಿರುಕುಳ ಆಗಿದೆಯೆಂಬ ಆರೋಪ ತುಂಬ ಗಂಭೀರವಾದದ್ದು ಮತ್ತು ಸೂಕ್ಷ್ಮ ವಿಚಾರ. ಗಂಡನ ಮೇಲಿನ ಕೇಸಿನಲ್ಲಿ ಪತ್ನಿಯ ಮೇಲೆ ದೌರ್ಜನ್ಯ ಮಾಡುವುದು ತುಂಬ ಅನ್ಯಾಯ ಎಂದು ಹೇಳಿದರು.
ಇಲಾಖೆಯಲ್ಲಿ ಇಂತಹ ತಪ್ಪುಗಳನ್ನು ಸಹಿಸಲು ಸಾಧ್ಯವಿಲ್ಲ. ಅಪರಾಧ ಸಾಬೀತಾದ್ರೆ ಕಠಿಣ ಶಿಕ್ಷೆಯೇ ಆಗಬೇಕು. ಇಂತಹದ್ದನ್ನು ಯಾರೇ ಮಾಡಿದ್ದರೂ ಶಿಕ್ಷೆ ಆಗಬೇಕು. ಇದು ಪೊಲೀಸ್ ಇಲಾಖೆಯಲ್ಲೂ ಒಂದು ಸಂದೇಶ ನೀಡುವಂತಾಗಬೇಕು ಎಂದು ನಾಗಲಕ್ಷ್ಮಿ ಚೌಧರಿ ಹೇಳಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm