ಬ್ರೇಕಿಂಗ್ ನ್ಯೂಸ್
18-03-26 06:10 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 18: ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧ ಸಾಕಷ್ಟು ಆರೋಪಗಳು ಮಾಧ್ಯಮಗಳಲ್ಲಿ ಬರುತ್ತಿವೆ. ಪ್ರಾಥಮಿಕ ಮಾಹಿತಿ ಆಧರಿಸಿ ಹಿರಿಯ ಅಧಿಕಾರಿಗಳು ಸುಮೊಟೋ ಕೇಸು ದಾಖಲಿಸಬೇಕು. ಇಂತಹ ಪ್ರಕರಣಗಳಲ್ಲಿ ಕಠಿಣವಾಗಿ ಕಾನೂನು ಜಾರಿ ಮಾಡಬೇಕು, ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ.
ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಚೌಧರಿ, ಈಗಾಗಲೇ ಘಟನೆ ಬಗ್ಗೆ ಗೃಹ ಸಚಿವರ ಜೊತೆಗೆ ಮಾತನಾಡಿದ್ದೇನೆ, ಈ ಬಗ್ಗೆ ನಾನೇನೂ ಹೇಳಬೇಕಾಗಿಲ್ಲ. ಇಲಾಖೆಯ ಹಿರಿಯ ಅಧಿಕಾರಿಗಳು ಕ್ರಮ ಜರುಗಿಸುತ್ತಾರೆ, ಪ್ರಾಥಮಿಕ ಮಾಹಿತಿ ಮೇಲೆ ಸುಮೋಟೊ ಕೇಸು ದಾಖಲಿಸಿಕೊಳ್ಳಬಹುದು. ಸಂತ್ರಸ್ತೆಯರು ದೂರು ನೀಡಲೇಬೇಕು ಅಂತ ಇಲ್ಲವೆಂದು ಗೃಹ ಸಚಿವರು ಹೇಳಿದ್ದಾರೆ.
ಹಾಗಾಗಿ ನಾವು ಆಯೋಗದಿಂದ ಮಂಗಳೂರು ಪೊಲೀಸ್ ಕಮಿಷನರ್ ಗೆ ಪತ್ರ ಬರೆದಿದ್ದು ಸ್ವಯಂಪ್ರೇರಿತ ಕೇಸು ದಾಖಲಿಸಬೇಕು ಜೊತೆಗೆ ಈ ಬಗ್ಗೆ ಎರಡು ದಿನದಲ್ಲಿ ವರದಿ ಸಲ್ಲಿಸಬೇಕು ಎಂದು ಹೇಳಿದ್ದೇವೆ. ಪೊಲೀಸ್ ಇಲಾಖೆಯಲ್ಲಿ ಇರೋದು ಕಾನೂನು ರಕ್ಷಣೆಗಾಗಿ, ಕಾನೂನು ಭಂಜನೆ ಮಾಡುವುದಕ್ಕಲ್ಲ. ಇಲ್ಲಿ ಮಹಿಳೆಯರಿಗೆ ಅನ್ಯಾಯ, ಕಿರುಕುಳ ಆಗಿದೆಯೆಂಬ ಆರೋಪ ತುಂಬ ಗಂಭೀರವಾದದ್ದು ಮತ್ತು ಸೂಕ್ಷ್ಮ ವಿಚಾರ. ಗಂಡನ ಮೇಲಿನ ಕೇಸಿನಲ್ಲಿ ಪತ್ನಿಯ ಮೇಲೆ ದೌರ್ಜನ್ಯ ಮಾಡುವುದು ತುಂಬ ಅನ್ಯಾಯ ಎಂದು ಹೇಳಿದರು.
ಇಲಾಖೆಯಲ್ಲಿ ಇಂತಹ ತಪ್ಪುಗಳನ್ನು ಸಹಿಸಲು ಸಾಧ್ಯವಿಲ್ಲ. ಅಪರಾಧ ಸಾಬೀತಾದ್ರೆ ಕಠಿಣ ಶಿಕ್ಷೆಯೇ ಆಗಬೇಕು. ಇಂತಹದ್ದನ್ನು ಯಾರೇ ಮಾಡಿದ್ದರೂ ಶಿಕ್ಷೆ ಆಗಬೇಕು. ಇದು ಪೊಲೀಸ್ ಇಲಾಖೆಯಲ್ಲೂ ಒಂದು ಸಂದೇಶ ನೀಡುವಂತಾಗಬೇಕು ಎಂದು ನಾಗಲಕ್ಷ್ಮಿ ಚೌಧರಿ ಹೇಳಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm