ಬ್ರೇಕಿಂಗ್ ನ್ಯೂಸ್
18-03-26 06:10 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 18: ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧ ಸಾಕಷ್ಟು ಆರೋಪಗಳು ಮಾಧ್ಯಮಗಳಲ್ಲಿ ಬರುತ್ತಿವೆ. ಪ್ರಾಥಮಿಕ ಮಾಹಿತಿ ಆಧರಿಸಿ ಹಿರಿಯ ಅಧಿಕಾರಿಗಳು ಸುಮೊಟೋ ಕೇಸು ದಾಖಲಿಸಬೇಕು. ಇಂತಹ ಪ್ರಕರಣಗಳಲ್ಲಿ ಕಠಿಣವಾಗಿ ಕಾನೂನು ಜಾರಿ ಮಾಡಬೇಕು, ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ.
ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಚೌಧರಿ, ಈಗಾಗಲೇ ಘಟನೆ ಬಗ್ಗೆ ಗೃಹ ಸಚಿವರ ಜೊತೆಗೆ ಮಾತನಾಡಿದ್ದೇನೆ, ಈ ಬಗ್ಗೆ ನಾನೇನೂ ಹೇಳಬೇಕಾಗಿಲ್ಲ. ಇಲಾಖೆಯ ಹಿರಿಯ ಅಧಿಕಾರಿಗಳು ಕ್ರಮ ಜರುಗಿಸುತ್ತಾರೆ, ಪ್ರಾಥಮಿಕ ಮಾಹಿತಿ ಮೇಲೆ ಸುಮೋಟೊ ಕೇಸು ದಾಖಲಿಸಿಕೊಳ್ಳಬಹುದು. ಸಂತ್ರಸ್ತೆಯರು ದೂರು ನೀಡಲೇಬೇಕು ಅಂತ ಇಲ್ಲವೆಂದು ಗೃಹ ಸಚಿವರು ಹೇಳಿದ್ದಾರೆ.
ಹಾಗಾಗಿ ನಾವು ಆಯೋಗದಿಂದ ಮಂಗಳೂರು ಪೊಲೀಸ್ ಕಮಿಷನರ್ ಗೆ ಪತ್ರ ಬರೆದಿದ್ದು ಸ್ವಯಂಪ್ರೇರಿತ ಕೇಸು ದಾಖಲಿಸಬೇಕು ಜೊತೆಗೆ ಈ ಬಗ್ಗೆ ಎರಡು ದಿನದಲ್ಲಿ ವರದಿ ಸಲ್ಲಿಸಬೇಕು ಎಂದು ಹೇಳಿದ್ದೇವೆ. ಪೊಲೀಸ್ ಇಲಾಖೆಯಲ್ಲಿ ಇರೋದು ಕಾನೂನು ರಕ್ಷಣೆಗಾಗಿ, ಕಾನೂನು ಭಂಜನೆ ಮಾಡುವುದಕ್ಕಲ್ಲ. ಇಲ್ಲಿ ಮಹಿಳೆಯರಿಗೆ ಅನ್ಯಾಯ, ಕಿರುಕುಳ ಆಗಿದೆಯೆಂಬ ಆರೋಪ ತುಂಬ ಗಂಭೀರವಾದದ್ದು ಮತ್ತು ಸೂಕ್ಷ್ಮ ವಿಚಾರ. ಗಂಡನ ಮೇಲಿನ ಕೇಸಿನಲ್ಲಿ ಪತ್ನಿಯ ಮೇಲೆ ದೌರ್ಜನ್ಯ ಮಾಡುವುದು ತುಂಬ ಅನ್ಯಾಯ ಎಂದು ಹೇಳಿದರು.
ಇಲಾಖೆಯಲ್ಲಿ ಇಂತಹ ತಪ್ಪುಗಳನ್ನು ಸಹಿಸಲು ಸಾಧ್ಯವಿಲ್ಲ. ಅಪರಾಧ ಸಾಬೀತಾದ್ರೆ ಕಠಿಣ ಶಿಕ್ಷೆಯೇ ಆಗಬೇಕು. ಇಂತಹದ್ದನ್ನು ಯಾರೇ ಮಾಡಿದ್ದರೂ ಶಿಕ್ಷೆ ಆಗಬೇಕು. ಇದು ಪೊಲೀಸ್ ಇಲಾಖೆಯಲ್ಲೂ ಒಂದು ಸಂದೇಶ ನೀಡುವಂತಾಗಬೇಕು ಎಂದು ನಾಗಲಕ್ಷ್ಮಿ ಚೌಧರಿ ಹೇಳಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm