ಬ್ರೇಕಿಂಗ್ ನ್ಯೂಸ್
18-03-26 07:13 pm HK News Staffer ಕರ್ನಾಟಕ
ಚಿಕ್ಕಮಗಳೂರು, ಮಾರ್ಚ್ 18: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಹತ್ವದ ಕ್ರಮವಾಗಿ, ಬಿಜೆಪಿ ಹಾಗೂ ವಿವಿಧ ಸಮುದಾಯ ಸಂಘಟನೆಗಳಿಗೆ ಸೇರಿದ ಒಟ್ಟು 15 ಮಂದಿಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ.
ಪೊಲೀಸ್ ಕಾಯ್ದೆ 1963ರ ಕಲಂ 58ರ ಅಡಿಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ. ಈ ಪಟ್ಟಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಹಾಗೂ ಬಜರಂಗದಳ ಹಾಸನ ವಿಭಾಗದ ಸಂಯೋಜಕ ಶ್ಯಾಮ್ ವಿ ಗೌಡ ಸೇರಿದಂತೆ ಹಲವು ಪ್ರಮುಖರ ಹೆಸರುಗಳು ಸೇರಿವೆ.
ಪೊಲೀಸ್ ಇಲಾಖೆಯ ಶಿಫಾರಸ್ಸಿನ ಪ್ರಕಾರ, ಸಂತೋಷ್ ಕೋಟ್ಯಾನ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದಾಗಿ ಪರಿಗಣಿಸಿ ಗಡಿಪಾರು ಕ್ರಮಕ್ಕೆ ಮನವಿ ಮಾಡಲಾಗಿದೆ.
ಒಟ್ಟಾರೆ 15 ಮಂದಿಯಲ್ಲಿ 10 ಮಂದಿ ಮುಸ್ಲಿಂ ಸಮುದಾಯದವರು ಹಾಗೂ 5 ಮಂದಿ ಹಿಂದೂ ಸಮುದಾಯದವರಾಗಿದ್ದು, ನೂರ್ ಅಹಮದ್, ಫಾರೂಕ್, ಇಬ್ರಾಹಿಂ ಅಲಿಯಾಸ್ ಇಬ್ಬು, ಇಮ್ರಾನ್, ಚಾಂದ್ ಪಾಷಾ, ಜೋಹಾರ್ ಅಂಜುಮ್, ಮೊಹಮ್ಮದ್ ಇದ್ರಿಶ್, ಫಾಜಿಲ್ ಅಹಮದ್, ಜಾವೀದ್ ಖುರೇಶಿ, ಮೊಹಮ್ಮದ್ ಫಾಜಿಲ್ ಸೇರಿದಂತೆ ಇತರರ ಹೆಸರುಗಳೂ ಪಟ್ಟಿಯಲ್ಲಿ ಸೇರಿವೆ. ಮೂಡಿಗೆರೆ ಕೌಶಿಕ್ ಗೂ ನೋಟಿಸ್ ಜಾರಿ ಮಾಡಲಾಗಿದೆ.
ಕೋಮು ಸಂಘರ್ಷ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಕೆಲ ಮುಸ್ಲಿಂ ಮುಖಂಡರ ಹೆಸರನ್ನೂ ಶಿಫಾರಸ್ಸು ಪಟ್ಟಿಯಲ್ಲಿ ಸೇರಿಸಲಾಗಿದೆ. ಪೊಲೀಸ್ ಇಲಾಖೆಯ ಶಿಫಾರಸ್ಸನ್ನು ಪರಿಗಣಿಸಿರುವ ಉಪ ವಿಭಾಗಾಧಿಕಾರಿ ಅವರು ಈ ಕುರಿತು ವಿಚಾರಣೆ ನಡೆಸಲಿದ್ದು, ವಿಚಾರಣೆಯಲ್ಲಿ ಆರೋಪಿಗಳು ಅಥವಾ ಅವರ ಪರ ವಕೀಲರಿಗೆ ತಮ್ಮ ವಾದ ಮಂಡಿಸಲು ಅವಕಾಶ ನೀಡಲಾಗುತ್ತದೆ.
ವಿಚಾರಣೆಯ ಬಳಿಕ, ಜಿಲ್ಲೆಯ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಿ, ಅಂತಿಮವಾಗಿ ಗಡಿಪಾರು ಕ್ರಮ ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm