ಬ್ರೇಕಿಂಗ್ ನ್ಯೂಸ್
18-03-26 07:13 pm HK News Staffer ಕರ್ನಾಟಕ
ಚಿಕ್ಕಮಗಳೂರು, ಮಾರ್ಚ್ 18: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಹತ್ವದ ಕ್ರಮವಾಗಿ, ಬಿಜೆಪಿ ಹಾಗೂ ವಿವಿಧ ಸಮುದಾಯ ಸಂಘಟನೆಗಳಿಗೆ ಸೇರಿದ ಒಟ್ಟು 15 ಮಂದಿಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ.
ಪೊಲೀಸ್ ಕಾಯ್ದೆ 1963ರ ಕಲಂ 58ರ ಅಡಿಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ. ಈ ಪಟ್ಟಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಹಾಗೂ ಬಜರಂಗದಳ ಹಾಸನ ವಿಭಾಗದ ಸಂಯೋಜಕ ಶ್ಯಾಮ್ ವಿ ಗೌಡ ಸೇರಿದಂತೆ ಹಲವು ಪ್ರಮುಖರ ಹೆಸರುಗಳು ಸೇರಿವೆ.
ಪೊಲೀಸ್ ಇಲಾಖೆಯ ಶಿಫಾರಸ್ಸಿನ ಪ್ರಕಾರ, ಸಂತೋಷ್ ಕೋಟ್ಯಾನ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದಾಗಿ ಪರಿಗಣಿಸಿ ಗಡಿಪಾರು ಕ್ರಮಕ್ಕೆ ಮನವಿ ಮಾಡಲಾಗಿದೆ.
ಒಟ್ಟಾರೆ 15 ಮಂದಿಯಲ್ಲಿ 10 ಮಂದಿ ಮುಸ್ಲಿಂ ಸಮುದಾಯದವರು ಹಾಗೂ 5 ಮಂದಿ ಹಿಂದೂ ಸಮುದಾಯದವರಾಗಿದ್ದು, ನೂರ್ ಅಹಮದ್, ಫಾರೂಕ್, ಇಬ್ರಾಹಿಂ ಅಲಿಯಾಸ್ ಇಬ್ಬು, ಇಮ್ರಾನ್, ಚಾಂದ್ ಪಾಷಾ, ಜೋಹಾರ್ ಅಂಜುಮ್, ಮೊಹಮ್ಮದ್ ಇದ್ರಿಶ್, ಫಾಜಿಲ್ ಅಹಮದ್, ಜಾವೀದ್ ಖುರೇಶಿ, ಮೊಹಮ್ಮದ್ ಫಾಜಿಲ್ ಸೇರಿದಂತೆ ಇತರರ ಹೆಸರುಗಳೂ ಪಟ್ಟಿಯಲ್ಲಿ ಸೇರಿವೆ. ಮೂಡಿಗೆರೆ ಕೌಶಿಕ್ ಗೂ ನೋಟಿಸ್ ಜಾರಿ ಮಾಡಲಾಗಿದೆ.
ಕೋಮು ಸಂಘರ್ಷ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಕೆಲ ಮುಸ್ಲಿಂ ಮುಖಂಡರ ಹೆಸರನ್ನೂ ಶಿಫಾರಸ್ಸು ಪಟ್ಟಿಯಲ್ಲಿ ಸೇರಿಸಲಾಗಿದೆ. ಪೊಲೀಸ್ ಇಲಾಖೆಯ ಶಿಫಾರಸ್ಸನ್ನು ಪರಿಗಣಿಸಿರುವ ಉಪ ವಿಭಾಗಾಧಿಕಾರಿ ಅವರು ಈ ಕುರಿತು ವಿಚಾರಣೆ ನಡೆಸಲಿದ್ದು, ವಿಚಾರಣೆಯಲ್ಲಿ ಆರೋಪಿಗಳು ಅಥವಾ ಅವರ ಪರ ವಕೀಲರಿಗೆ ತಮ್ಮ ವಾದ ಮಂಡಿಸಲು ಅವಕಾಶ ನೀಡಲಾಗುತ್ತದೆ.
ವಿಚಾರಣೆಯ ಬಳಿಕ, ಜಿಲ್ಲೆಯ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಿ, ಅಂತಿಮವಾಗಿ ಗಡಿಪಾರು ಕ್ರಮ ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm