ಬ್ರೇಕಿಂಗ್ ನ್ಯೂಸ್
18-03-26 07:13 pm HK News Staffer ಕರ್ನಾಟಕ
ಚಿಕ್ಕಮಗಳೂರು, ಮಾರ್ಚ್ 18: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಹತ್ವದ ಕ್ರಮವಾಗಿ, ಬಿಜೆಪಿ ಹಾಗೂ ವಿವಿಧ ಸಮುದಾಯ ಸಂಘಟನೆಗಳಿಗೆ ಸೇರಿದ ಒಟ್ಟು 15 ಮಂದಿಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ.
ಪೊಲೀಸ್ ಕಾಯ್ದೆ 1963ರ ಕಲಂ 58ರ ಅಡಿಯಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ. ಈ ಪಟ್ಟಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಹಾಗೂ ಬಜರಂಗದಳ ಹಾಸನ ವಿಭಾಗದ ಸಂಯೋಜಕ ಶ್ಯಾಮ್ ವಿ ಗೌಡ ಸೇರಿದಂತೆ ಹಲವು ಪ್ರಮುಖರ ಹೆಸರುಗಳು ಸೇರಿವೆ.
ಪೊಲೀಸ್ ಇಲಾಖೆಯ ಶಿಫಾರಸ್ಸಿನ ಪ್ರಕಾರ, ಸಂತೋಷ್ ಕೋಟ್ಯಾನ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದಾಗಿ ಪರಿಗಣಿಸಿ ಗಡಿಪಾರು ಕ್ರಮಕ್ಕೆ ಮನವಿ ಮಾಡಲಾಗಿದೆ.
ಒಟ್ಟಾರೆ 15 ಮಂದಿಯಲ್ಲಿ 10 ಮಂದಿ ಮುಸ್ಲಿಂ ಸಮುದಾಯದವರು ಹಾಗೂ 5 ಮಂದಿ ಹಿಂದೂ ಸಮುದಾಯದವರಾಗಿದ್ದು, ನೂರ್ ಅಹಮದ್, ಫಾರೂಕ್, ಇಬ್ರಾಹಿಂ ಅಲಿಯಾಸ್ ಇಬ್ಬು, ಇಮ್ರಾನ್, ಚಾಂದ್ ಪಾಷಾ, ಜೋಹಾರ್ ಅಂಜುಮ್, ಮೊಹಮ್ಮದ್ ಇದ್ರಿಶ್, ಫಾಜಿಲ್ ಅಹಮದ್, ಜಾವೀದ್ ಖುರೇಶಿ, ಮೊಹಮ್ಮದ್ ಫಾಜಿಲ್ ಸೇರಿದಂತೆ ಇತರರ ಹೆಸರುಗಳೂ ಪಟ್ಟಿಯಲ್ಲಿ ಸೇರಿವೆ. ಮೂಡಿಗೆರೆ ಕೌಶಿಕ್ ಗೂ ನೋಟಿಸ್ ಜಾರಿ ಮಾಡಲಾಗಿದೆ.
ಕೋಮು ಸಂಘರ್ಷ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಕೆಲ ಮುಸ್ಲಿಂ ಮುಖಂಡರ ಹೆಸರನ್ನೂ ಶಿಫಾರಸ್ಸು ಪಟ್ಟಿಯಲ್ಲಿ ಸೇರಿಸಲಾಗಿದೆ. ಪೊಲೀಸ್ ಇಲಾಖೆಯ ಶಿಫಾರಸ್ಸನ್ನು ಪರಿಗಣಿಸಿರುವ ಉಪ ವಿಭಾಗಾಧಿಕಾರಿ ಅವರು ಈ ಕುರಿತು ವಿಚಾರಣೆ ನಡೆಸಲಿದ್ದು, ವಿಚಾರಣೆಯಲ್ಲಿ ಆರೋಪಿಗಳು ಅಥವಾ ಅವರ ಪರ ವಕೀಲರಿಗೆ ತಮ್ಮ ವಾದ ಮಂಡಿಸಲು ಅವಕಾಶ ನೀಡಲಾಗುತ್ತದೆ.
ವಿಚಾರಣೆಯ ಬಳಿಕ, ಜಿಲ್ಲೆಯ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಿ, ಅಂತಿಮವಾಗಿ ಗಡಿಪಾರು ಕ್ರಮ ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm