ಬ್ರೇಕಿಂಗ್ ನ್ಯೂಸ್
18-03-26 09:44 pm Hk Desk ಕರ್ನಾಟಕ
ಬೆಂಗಳೂರು, ಮಾರ್ಚ್ 18: ಕನ್ನಡದ ಖ್ಯಾತ ನಿರ್ದೇಶಕ ಪ್ರೇಮ್ ನಿರ್ದೇಶನ, ಧ್ರುವ ಸರ್ಜಾ ಕಾಂಬಿನೇಶನ್ ಒಳಗೊಂಡ ಕೆಡಿ- ಡೆವಿಲ್ ಚಿತ್ರದ ಹಾಡು ಭಾರೀ ವಿವಾದಕ್ಕೆ ಕಾರಣವಾಗಿದೆ. ಸಿನಿಮಾದ ‘ಸರ್ಸೆ ಸರ್ಸೆ ಸೆರಗ ನಿನ್ನ’ ಹಾಡಿಗೆ ಭಾರೀ ಆಕ್ಷೇಪ ಕೇಳಿಬಂದಿದ್ದು ಸಂಸತ್ತಿನಲ್ಲು ಪ್ರತಿಧ್ವನಿಸಿದೆ. ಅದರಲ್ಲೂ ಹಾಡಿನ ಹಿಂದಿ ಆವೃತ್ತಿಯ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗಿದ್ದು, ಪ್ರೇಮ್ ಸೇರಿದಂತೆ ಚಿತ್ರ ತಂಡದ ವಿರುದ್ಧ ಮುಂಬೈ ಸೇರಿ ಹಲವೆಡೆ ದೂರು ದಾಖಲಾಗಿದೆ. ತೀವ್ರ ಆಕ್ಷೇಪ ಬಂದಿದ್ದರಿಂದ ಈ ಹಾಡನ್ನು ನಿಷೇಧ ಮಾಡಿರುವುದಾಗಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಹೇಳಿಕೆ ನೀಡಿದ್ದಾರೆ. ಕೇಂದ್ರ ಸೆನ್ಸಾರ್ ಮಂಡಳಿ, ಮಾನವ ಹಕ್ಕು ಆಯೋಗಕ್ಕೆ ದೂರು ಹೋಗಿದೆ. ಅಲ್ಲದೆ, ರಾಜ್ಯ ಮಹಿಳಾ ಆಯೋಗ ಕೇಂದ್ರಕ್ಕೆ ಪತ್ರ ಬರೆದು ಕಠಿಣ ಕ್ರಮಕ್ಕೆ ಆಗ್ರಹಿಸಿದೆ.
ಹಿಂದಿ, ತಮಿಳು, ಕನ್ನಡ, ತೆಲುಗು, ಮಲಯಾಳ ಭಾಷೆಯಲ್ಲಿ ಚಿತ್ರದ ಹಾಡನ್ನು ರಿಲೀಸ್ ಮಾಡಲಾಗಿತ್ತು. ಆದರೆ ಹಿಂದಿ ಹಾಡು ಬರುತ್ತಿದ್ದಂತೆ ದೇಶಾದ್ಯಂತ ಇದರ ಬಗ್ಗೆ ಟೀಕೆ ವ್ಯಕ್ತವಾಗಿದೆ. ಮಹಿಳೆಯ ಬಗ್ಗೆ ತೀರಾ ಕೀಳಾಗಿ ಬಿಂಬಿಸಿ ಸಾಹಿತ್ಯ ರಚಿಸಲಾಗಿದೆ ಎಂದು ಜಾಲತಾಣದಲ್ಲಿ ಟೀಕಿಸಿದ್ದಾರೆ. ಹಾಡಿನಲ್ಲಿ ಸಂಜಯ್ ದತ್ ಹಾಗೂ ನೋರಾ ಫತೇಹಿ ಕಾಣಿಸಿಕೊಂಡಿದ್ದು ಅವರ ಬಗ್ಗೆಯೂ ಟೀಕೆ ವ್ಯಕ್ತವಾಗಿದೆ. ಸ್ವತಃ ನೋರಾ ಫತೇಹಿ ಕೂಡ ಹಾಡಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನನಗೆ ಅರ್ಥ ತಿಳಿದಿರಲಿಲ್ಲ, ಎಐ ಬಳಸಿ ಸೃಷ್ಟಿಸಿದ್ದಾರೆ ; ಫತೇಹಿ
'ಹಾಡನ್ನು 3 ವರ್ಷಗಳ ಹಿಂದೆ ಕನ್ನಡ ಭಾಷೆಯಲ್ಲಿ ಚಿತ್ರೀಕರಿಸಿದ್ದೆ. ಸಂಜಯ್ ದತ್ ರಂತಹ ದೊಡ್ಡ ಕಲಾವಿದರು ಇರುವ ಸಿನಿಮಾ ಎಂಬ ಕಾರಣಕ್ಕೆ ಒಪ್ಪಿಕೊಂಡಿದ್ದೆ. ಕನ್ನಡ ಭಾಷೆ ನನಗೆ ತಿಳಿಯಲ್ಲ. ಶೂಟಿಂಗ್ ಮಾಡುವಾಗ ಹಾಡಿನ ಅರ್ಥ ಕೇಳಿ ತಿಳ್ಕೊಂಡಿದ್ದೆ. ಅವರು ಹೇಳಿದಾಗ ನನಗೆ ಅಸಭ್ಯ ಅಂತ ಅನಿಸಿರಲಿಲ್ಲ. ಈಗ ಹಿಂದಿಗೆ ಭಾಷಾಂತರ ಮಾಡಿರುವುದು ತುಂಬ ಆಕ್ಷೇಪಾರ್ಹವಾಗಿದೆ. ಅದರ ಬಗ್ಗೆ ನನಗೆ ಮಾಹಿತಿಯೇ ಇರಲಿಲ್ಲ. ಹಾಡು ಬಿಡುಗಡೆಗೆ ನನ್ನನ್ನು ಕರೆದಾಗ ನನ್ನ ಫೋಟೋಗಳನ್ನು ಬಳಸಿದ ರೀತಿ ಕಂಡು ನನಗೆ ಬೇಸರ ಆಯಿತು. ನನ್ನ ಮತ್ತು ಸಂಜಯ್ ದತ್ ಅವರ ಫೋಟೋಗಳನ್ನು ಎಐ ಮೂಲಕ ಸೃಷ್ಟಿಸಿ ಬಳಸಿದ್ದಾರೆ ಎಂದು ನೋರಾ ಫತೇಹಿ ಆಕ್ಷೇಪಿಸಿದ್ದಾರೆ.
ವಿವಾದ ಭುಗಿಲೇಳುತ್ತಿದ್ದಂತೆ ಹಿಂದಿ ಹಾಡನ್ನು ಯೂಟ್ಯೂಬ್ ನಿಂದ ಹಿಂಪಡೆಯಲಾಗಿದೆ. ಕನ್ನಡ ಮತ್ತು ಇತರ ಭಾಷೆಗಳಲ್ಲಿ ಹಾಡು ಇನ್ನೂ ಚಾಲ್ತಿಯಲ್ಲಿದೆ. ಇದೇ ವೇಳೆ, ನಿರ್ದೇಶಕ ಪ್ರೇಮ್ ವಿವಾದ ವಿಚಾರದಲ್ಲಿ ಜಾಲತಾಣದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಬೇಕಂತ ಮಾಡಿಲ್ಲ, ಹರ್ಟ್ ಆಗಿದ್ದರೆ ಚೇಂಜ್ ಮಾಡ್ತೀನಿ..
ಬೇಕೆಂದೇ ಅಶ್ಲೀಲತೆ ತುಂಬಿಸಿ ಇಂತಹ ತಪ್ಪು ಮಾಡಿಲ್ಲ. ಬೇರೆಯೇ ದೃಷ್ಟಿಕೋನದಲ್ಲಿ ಹಾಡು ರಚಿಸಿದ್ದೆ. ಎಣ್ಣೆ ಬಾಟಲಿ, ಉಪ್ಪಿನಕಾಯಿ ಕಲ್ಪಿಸಿಕೊಂಡು ಹಾಡು ಬರೆದಿದ್ದೆ. ಬಾಟಲ್ನ ಮೇಲೆತ್ತಿ ಎಂದು ಬರಬೇಕಿತ್ತು. ಹಾಡಿನಲ್ಲಿ ಕುತೂಹಲ ಇರಲಿ ಎಂಬ ಕಾರಣಕ್ಕೆ ಬಾಟಲಿ ಪದವನ್ನು ಕೊನೆಯಲ್ಲಿ ಬಳಸಿದ್ದೆ. ಆದರೆ ಜನ ಅದನ್ನು ಬೇರೆಯದ್ದೇ ರೀತಿಯಲ್ಲಿ ಅರ್ಥ ಮಾಡಿಕೊಂಡಿದ್ದಾರೆ. ಕೆಲವರು ನನ್ನ ವಿರುದ್ಧ ಕಾಲೆಳೆಯಲು, ಹೀಗಳೆಯಲು ಇದನ್ನು ಬಳಸಿಕೊಳ್ಳುತ್ತಿದ್ದಾರೆ. ಹಲವಾರು ಪದ್ಯಗಳನ್ನು ರಚಿಸಿದ್ದೇನೆ. ಈವರೆಗೂ ಕೆಟ್ಟ ಅರ್ಥದ ಹಾಡುಗಳನ್ನು ಬರೆದಿಲ್ಲ. ಇದನ್ನು ಹಿಂದೆಯೂ ಮೀಡಿಯಾ ಮುಂದೆ ಹೇಳಿದ್ದೇನೆ. ಆದರೆ ಹಾಡು ಕೇಳಿದ ಕೆಲವರಿಗೆ ಹರ್ಟ್ ಆಗಿರಬಹುದು. ಸಾಹಿತಿ ಆದ ಮೇಲೆ ಎಲ್ಲ ರೀತಿಯಲ್ಲಿಯೂ ಬರೆಯಬೇಕಾಗುತ್ತದೆ. ಆದರೆ ನಾನು ಅಶ್ಲೀಲ ಅರ್ಥದಲ್ಲಿ ಬರೆದಿಲ್ಲ. ನನ್ನಿಂದ ಬೇಸರ ಆಗಿದ್ದರೆ ಕ್ಷಮೆ ಕೇಳುತ್ತೇನೆ. ಹಾಡನ್ನು ಬೇರೆ ರೀತಿ ಬರೆದು ಮತ್ತೆ ಅಪ್ಲೋಡ್ ಮಾಡುತ್ತೀವಿ ಎಂದು ಪ್ರೇಮ್ ಹೇಳಿದ್ದಾರೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm