ಬ್ರೇಕಿಂಗ್ ನ್ಯೂಸ್
19-03-26 05:01 pm HK News Staffer ಕರ್ನಾಟಕ
ಬೆಂಗಳೂರು, ಮಾ 19: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಭಾರೀ ಕೊರತೆ ಹೋಟೆಲ್ ಉದ್ಯಮವನ್ನು ಗಂಭೀರ ಸಂಕಷ್ಟಕ್ಕೆ ತಳ್ಳಿದೆ. ಸಿಲಿಂಡರ್ ಪೂರೈಕೆ ಸ್ಥಗಿತಗೊಂಡ ಹಿನ್ನೆಲೆ ಹಲವು ಹೋಟೆಲ್ಗಳು ಈಗಾಗಲೇ ಬಾಗಿಲು ಮುಚ್ಚಿದ್ದು, ಈ ಕ್ಷೇತ್ರವನ್ನು ಅವಲಂಬಿಸಿಕೊಂಡಿದ್ದ ಲಕ್ಷಾಂತರ ಕಾರ್ಮಿಕರು ಬದುಕಿನ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್ ಮೊರೆ ಹೋಗಿದ್ದು, ಸಿಲಿಂಡರ್ ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ರಿಟ್ ಅರ್ಜಿ ಸಲ್ಲಿಸಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ತುರ್ತು ಹಸ್ತಕ್ಷೇಪ ಮಾಡುವಂತೆ ಮನವಿ ಮಾಡಲಾಗಿದೆ.
ಬೆಂಗಳೂರು ನಗರದಲ್ಲೇ ಸುಮಾರು 40 ಸಾವಿರಕ್ಕೂ ಹೆಚ್ಚು ಹೋಟೆಲ್ಗಳು ಕಾರ್ಯನಿರ್ವಹಿಸುತ್ತಿದ್ದು, ದಿನನಿತ್ಯದ ಆಹಾರ ಸೇವೆಯನ್ನು ಒದಗಿಸುವ ಪ್ರಮುಖ ವ್ಯವಸ್ಥೆಯಾಗಿದೆ. ಆದರೆ ವಾಣಿಜ್ಯ ಸಿಲಿಂಡರ್ಗಳ ಸರಬರಾಜು ಸಂಪೂರ್ಣ ಸ್ಥಗಿತಗೊಂಡಿರುವುದು 6 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳ ಬದುಕಿಗೆ ದೊಡ್ಡ ಹೊಡೆತ ನೀಡಿದೆ.
ಆಟೋ ಮತ್ತು ಟ್ಯಾಕ್ಸಿ ಚಾಲಕರು, ಡೆಲಿವರಿ ಸಿಬ್ಬಂದಿ, ನಿರ್ಮಾಣ ಕಾರ್ಮಿಕರು, ಆಸ್ಪತ್ರೆ ರೋಗಿಗಳು ಸೇರಿದಂತೆ ಸಾಮಾನ್ಯ ಜನರು ಹೋಟೆಲ್ ಸೇವೆಗಳ ಮೇಲೆ ಅವಲಂಬಿತರಾಗಿದ್ದಾರೆ. ಹೀಗಾಗಿ ಕನಿಷ್ಠ 50 ಶೇಕಡಾ ಸಿಲಿಂಡರ್ ಪೂರೈಕೆಯನ್ನು ತಕ್ಷಣ ಆರಂಭಿಸಲು ಪೆಟ್ರೋಲಿಯಂ ಸಚಿವರಿಗೆ ಸೂಚನೆ ನೀಡುವಂತೆ ಅಸೋಸಿಯೇಷನ್ ಮನವಿ ಮಾಡಿದೆ.
ಕ್ಯಾಂಟೀನ್, ಫಾಸ್ಟ್ ಫುಡ್ ಅಂಗಡಿಗಳನ್ನು ನಡೆಸುವವರು ಹೆಚ್ಚಿನ ಸಮಸ್ಯೆ ಎದುರಿಸುತ್ತಿದ್ದಾರೆ. ಬಹುತೇಕ ಫಾಸ್ಟ್ಫುಡ್ ಸೆಂಟರ್ಗಳು ಬಾಗಿಲು ಮುಚ್ಚಿವೆ ಎನ್ನುತ್ತಾರೆ ಫಾಸ್ಟ್ ಫುಡ್ ಸೆಂಟರ್ ಮಾಲೀಕರು.
ವಾಣಿಜ್ಯ ಬಳಕೆಯ ಸಿಲಿಂಡರ್ ಸ್ಥಗಿತಗೊಂಡು ಹಲವು ದಿನಗಳು ಕಳೆದಿವೆ. ಸಂಬಂಧಪಟ್ಟವರು ಯಾವುದೇ ಪರ್ಯಾಯ ವ್ಯವಸ್ಥೆ ಮಾಡಿಲ್ಲ. ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡಿ ಎನ್ನುತ್ತಿದ್ದಾರೆ. ಆದರೆ ನಗರದ ಹೆಚ್ಚಿನ ಹೋಟೆಲ್ಗಳಲ್ಲಿ ಕಟ್ಟಿಗೆ ಒಲೆಯ ವ್ಯವಸ್ಥೆ ಇಲ್ಲ. ಬಾಡಿಗೆ ಕಟ್ಟಡದಲ್ಲಿ ಹೋಟೆಲ್ ನಡೆಸುವವರಿಗೆ ಕಟ್ಟಿಗೆ ಒಲೆ ಹಾಕಲು ಮಾಲಕರು ಬಿಡುತ್ತಿಲ್ಲ ಎಂದೂ ಹೋಟೆಲ್ ಮಾಲಕರು ಅಳಲು ತೋಡಿಕೊಂಡಿದ್ದಾರೆ.
ಕೆಲವರು ಇಂಡಕ್ಷನ್ ಸ್ಟೌ ಬಳಸುತ್ತಿದ್ದಾರೆ. ಆದರೆ ಇದರಿಂದ ವಿದ್ಯುತ್ ಬಿಲ್ ಅಧಿಕ ಬರುವ ಸಾಧ್ಯತೆ ಇದೆ. ಇಂಡಕ್ಷನ್ ಸ್ಟೌನಲ್ಲಿ ದೊಡ್ಡ ಪ್ರಮಾಣದಲ್ಲಿ ಅಡುಗೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದೂ ಹೇಳುತ್ತಾರೆ.

ಬಡವರ ಹೊಟ್ಟೆಗೆ ತಣ್ಣೀರು ಬಟ್ಟೆ:
ಕಡಿಮೆ ದುಡ್ಡಲ್ಲಿ ಕಾರ್ಮಿಕರು ಮತ್ತು ಬಡವರ ಹಸಿವು ನೀಗಿಸುತ್ತಿದ್ದ ಇಂದಿರಾ ಕ್ಯಾಂಟೀನ್ಗಳಿಗೂ ಗ್ಯಾಸ್ ಅಭಾವ ತಟ್ಟಿದೆ. ಮೆಜೆಸ್ಟಿಕ್ ಬಳಿಯ ಇಂದಿರಾ ಕ್ಯಾಂಟೀನ್ನಲ್ಲಿ ಕಳೆದ 2 ದಿನಗಳಿಂದ ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನು ಸ್ಥಗಿತಗೊಳಿಸಲಾಗಿದೆ. ಬೆಳಗ್ಗಿನ ತಿಂಡಿ ಮಾತ್ರ ಲಭ್ಯವಿದ್ದು, ಊಟಕ್ಕಾಗಿ ಬರುವ ನೂರಾರು ಗ್ರಾಹಕರು ಹಸಿವಿನಿಂದಲೇ ವಾಪಸ್ ಹೋಗುವಂತಾಗಿದೆ. ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುವಂತೆ ಜನರು ಸರ್ಕಾರದ ಮೊರೆ ಹೋಗಿದ್ದಾರೆ.
ಯುಗಾದಿ ಸಂಭ್ರಮಕ್ಕೆ 'ಗ್ಯಾಸ್' ಗಲಿಬಿಲಿ ಎಫೆಕ್ಟ್ ;
ಹಬ್ಬದ ಸೀಸನ್ನಲ್ಲಿ ಬೇಕರಿ ಹಾಗೂ ಸ್ವೀಟ್ ಸ್ಟಾಲ್ಗಳಿಗೂ ಟ್ರಬಲ್ ಶುರುವಾಗಿದೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಸಿಹಿ ತಿನಿಸುಗಳ ತಯಾರಿ ಭರದಿಂದ ಸಾಗಬೇಕಿತ್ತು. ಆದರೆ, ರಾಜಾಜಿನಗರದ ಪ್ರಸಿದ್ಧ ಕರಿಗಿರಿ ಸ್ವೀಟ್ಸ್ ಸೇರಿದಂತೆ ಹಲವೆಡೆ ಕೇವಲ ಒಂದೆರಡು ಗ್ಯಾಸ್ ಸಿಲಿಂಡರ್ ಮಾತ್ರ ಉಳಿದಿರುವುದರಿಂದ ಸ್ವೀಟ್ ತಯಾರಿಕೆ ಸ್ಥಗಿತಗೊಂಡಿದೆ. ಆರ್ಡರ್ ತೆಗೆದುಕೊಳ್ಳಲಾಗದೆ ಮಾಲೀಕರು ಆತಂಕಕ್ಕೆ ಒಳಗಾಗಿದ್ದಾರೆ.
ಒಟ್ಟಾರೆ, ಸಿಲಿಂಡರ್ ಅಭಾವದಿಂದ ಹೋಟೆಲ್ ಉದ್ಯಮವೇ ಕುಸಿಯುವ ಹಂತಕ್ಕೆ ತಲುಪಿದ್ದು, ತುರ್ತು ಪರಿಹಾರಕ್ಕಾಗಿ ಸರ್ಕಾರದ ಕ್ರಮಗಳತ್ತ ಎಲ್ಲರ ಕಣ್ಣು ನೆಟ್ಟಿದೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm