ಬ್ರೇಕಿಂಗ್ ನ್ಯೂಸ್
20-03-26 10:03 am HK News Staffer ಕರ್ನಾಟಕ
ಶಿವಮೊಗ್ಗ, ಮಾ 20: ತಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ಗುರುವಾರ ತಡರಾತ್ರಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ವನ್ಯಜೀವಿ ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಸಮೀಕ್ಷಾ ರೆಡ್ಡಿ (26) ಮೂಲತಃ ಬೆಂಗಳೂರಿನ ಬನ್ನೇರುಘಟ್ಟ ನಿವಾಸಿ. ಬೆಂಗಳೂರಿನ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ (ಜಿಕೆವಿಕೆ) ಪದವಿ ಮುಗಿಸಿದ್ದ ಅವರು ಒಂದೂವರೆ ತಿಂಗಳ ಹಿಂದಷ್ಟೇ ಇಲ್ಲಿನ ಹುಲಿ ಸಿಂಹ ಧಾಮಕ್ಕೆ ತರಬೇತಿಗೆ ನೇಮಕಗೊಂಡಿದ್ದರು.
ಗರ್ಭಿಣಿ ಆಗಿದ್ದ ನೀರಾನೆ ಇನ್ನು ನಾಲ್ಕು ದಿನಗಳಲ್ಲಿ ಅದರ ಹೆರಿಗೆಗೆ ದಿನ ನಿಗದಿಯಾಗಿತ್ತು. ಅದು ರಾತ್ರಿ ಆಹಾರ ಸೇವಿಸಿರದ ಕಾರಣ ಪರಿಶೀಲನೆಗೆ ಡಾ.ಸಮೀಕ್ಷಾ ಅದರ ನೆಲೆಯತ್ತ ತೆರಳಿದ್ದಾರೆ. ಈ ವೇಳೆ ನೀರಾನೆ ದಾಳಿ ಮಾಡಿದೆ. ತೀವ್ರ ರಕ್ತ ಸ್ರಾವದಿಂದ ಪ್ರಜ್ಞಾಹೀನರಾಗಿದ್ದ ಅವರನ್ನು ಮೃಗಾಲಯ ಸಿಬ್ಬಂದಿ ಇಲ್ಲಿನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ತನಿಖೆಗೆ ಸೂಚನೆ:
ಸಮೀಕ್ಷಾ ರೆಡ್ಡಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ಅಲ್ಲಿ
ಸುರಕ್ಷತಾ ನಿಯಮಗಳ ಪಾಲನೆಯಾಗಿದ್ದವೇ ಎಂಬುದರ ಬಗ್ಗೆ ತನಿಖೆ ನಡೆಸಿ ಏಳು ದಿನಗಳ ಒಳಗೆ ವರದಿ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಶಿವಮೊಗ್ಗದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm