ಬ್ರೇಕಿಂಗ್ ನ್ಯೂಸ್
20-03-26 12:00 pm HK News Staffer ಕರ್ನಾಟಕ
ಹುಬ್ಬಳ್ಳಿ, ಮಾರ್ಚ್ 20: ಸೋಶಿಯಲ್ ಮೀಡಿಯಾ ರೀಲ್ಸ್ ಹುಚ್ಚಾಟ ಮತ್ತೊಂದು ಅಮಾಯಕ ಜೀವ ಬಲಿ ಪಡೆದಿರುವ ದಾರುಣ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸ್ಟಂಟ್ ಹಾಗೂ ಕ್ರ್ಯಾಶ್ ರೀಲ್ಸ್ ಚಿತ್ರೀಕರಣದ ವೇಳೆ ಸಂಭವಿಸಿದ ಅಪಘಾತದಲ್ಲಿ ಬಿಜೆಪಿ ಮುಖಂಡನ ಪುತ್ರ ನಮೀಷ ಸಂಗಳದ (15) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಲಕ್ಷ್ಮಿ ನಗರ ನಿವಾಸಿಯಾದ ನಮೀಷ, ಮೈಸೂರಿನಲ್ಲಿ 9ನೇ ತರಗತಿ ಓದುತ್ತಿದ್ದನು. ಯುಗಾದಿ ಹಬ್ಬದ ನಿಮಿತ್ತ ಊರಿಗೆ ಬಂದಿದ್ದ ಆತ, ಗೆಳೆಯರೊಂದಿಗೆ ರೀಲ್ಸ್ ಮಾಡಲು ಸೇಜವಾಡಕ್ಕರ್ ಪ್ಲಾಟ್ಗೆ ತೆರಳಿದ್ದನು. ವೇಗವಾಗಿ ವಾಹನ ಚಲಾಯಿಸುವ ರೀಲ್ಸ್ ಮಾಡಲು ಪ್ಲ್ಯಾನ್ ಮಾಡಿದ್ದರು. ಅದರಂತೆ ಓರ್ವ ಅಪ್ರಾಪ್ತ ಬಾಲಕ ಆಡಿ ಕಾರು ಓಡಿಸುತ್ತಿದ್ದರೆ, ಇನ್ನೊಂದೆಡೆ ಮೃತ ನಮೀಷ ಸಂಗಳದ ಬೈಕ್ ನಲ್ಲಿದ್ದು, ಸ್ಟಂಟ್ ಮತ್ತು ಕ್ರ್ಯಾಶ್ ರೀಲ್ಸ್ ಮಾಡುತ್ತಿದ್ದಾಗ ಕಾರು ವೇಗವಾಗಿ ಬಂದು ನಿಯಂತ್ರಣ ತಪ್ಪಿ ನಮೀಷ ಸಂಗಳದ ಇದ್ದ ಬೈಕ್ಗೆ ಗುದ್ದಿದೆ. ಪರಿಣಾಮ ನಮೀಷ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.
ಘಟನೆ ತಿಳಿಯುತ್ತಿದ್ದಂತೆಯೇ ವಿದ್ಯಾನಗರ ಪೊಲೀಸ್ ಠಾಣೆ ಪೊಲೀಸರು ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿದ್ದು, ಕಾರು ಚಲಾಯಿಸಿದ್ದ ಅಪ್ರಾಪ್ತನನ್ನು ವಿಚಾರಣೆಗೊಳಪಡಿಸಲಾಗಿದೆ. ಯುಗಾದಿ ಸಂಭ್ರಮದಲ್ಲಿದ್ದ ಮನೆಗೆ ದುಃಖದ ನೆರಳು ಆವರಿಸಿದ್ದು, ಮಗನ ಅಕಾಲಿಕ ಮರಣದಿಂದ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm