ಬ್ರೇಕಿಂಗ್ ನ್ಯೂಸ್
21-03-26 05:32 pm HK News Staffer ಕರ್ನಾಟಕ
ತುಮಕೂರು, ಮಾ.21: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಕಚೇರಿಯಲ್ಲೇ ದುರಂತ ಅಂತ್ಯ ಕಂಡ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಮಲ್ಲಿಕಾರ್ಜುನ ಎಂದು ಗುರುತಿಸಲಾಗಿದೆ. ಮೃತ ಮಲ್ಲಿಕಾರ್ಜುನ್ ನಿನ್ನೆ ತಮ್ಮ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದು ಈ ಬಗ್ಗೆ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಮಲ್ಲಿಕಾರ್ಜುನ ಕಳೆದ ಮೂರು ವರ್ಷಗಳಿಂದ ಪಾವಗಡ ಸಮಾಜ ಕಲ್ಯಾಣ ಇಲಾಖೆಯಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಲ್ಲಿಕಾರ್ಜುನ್ ನಿವೃತ್ತಿಗೆ ಇನ್ನೂ ಕೇವಲ ಒಂದು ವಾರವಷ್ಟೇ ಭಾಕಿ ಇತ್ತು. ಆದ್ರೆ ನಿವೃತ್ತಿಗೂ ಮುನ್ನವೇ ಮಲ್ಲಿಕಾರ್ಜುನ್ ಕೊನೆಯುಸಿರೆಳೆದಿದ್ದಾರೆ.
ಸಾವಿಗೂ ಮುನ್ನ ಅವರು ಸಹೋದ್ಯೋಗಿಗಳಿಗೆ ಕಳುಹಿಸಿದ ವಿಡಿಯೋದಲ್ಲಿ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ನೀಡಿದ ಕಿರುಕುಳವೇ ಈ ನಿರ್ಧಾರಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಅವರಿಗೆ ದೇವರೇ ಶಿಕ್ಷೆ ನೀಡುತ್ತಾನೆ. ಅವನು ತರ್ಲೆ ಇರುವುದರಿಂದ ನಮ್ ಕುಟುಂಬದವರು ಏನು ಸೇಡು ತೀರಿಸಿಕೊಳ್ಳುವ ಅವಶ್ಯಕತೆ ಇಲ್ಲಾ, ಅವನಿಗೆ ದೇವರು, ಕಾನೂನು ಶಿಕ್ಷೆ ಕೊಟ್ಟೆ ಕೊಡುತ್ತಾನೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ಇನ್ನೂ ತಮ್ಮ ಕುಟುಂಬದ ಬಗ್ಗೆ ಉಲ್ಲೇಖಿಸಿದ ಅವರು, ತಾಯಿ, ಪತ್ನಿ ಹಾಗೂ ಮಕ್ಕಳ ಬಗ್ಗೆ ಕಾಳಜಿ ವ್ಯಕ್ತಪಡಿಸಿ, “ನಾನು ಇನ್ನೂ ಅವರಿಗೆ ಸಹಾಯ ಮಾಡಬೇಕಿತ್ತು, ಆದರೆ ಅದು ಸಾಧ್ಯವಾಗುತ್ತಿಲ್ಲ” ಎಂದು ಹೇಳಿದ್ದಾರೆ.
ಈ ಪ್ರಕರಣವು ಸಾರ್ವಜನಿಕ ವಲಯದಲ್ಲಿ ಆತಂಕ ಹುಟ್ಟಿಸಿದ್ದು, ವಿಡಿಯೋದಲ್ಲಿನ ಆರೋಪಗಳ ಆಧಾರವಾಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಲ್ಲಿಕಾರ್ಜುನ ಅವರ ತಂದೆಯೂ ಇದೇ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಮಲ್ಲಿಕಾರ್ಜುನ ತಂದೆ ನಿವೃತ್ತಿಗೆ ಕೆಲವೇ ತಿಂಗಳು ಇರುವಾಗ ಮೃತಪಟ್ಟಿದ್ದರು. ತಂದೆಯ ನಿಧನದ ಬಳಿಕ ಅನುಕಂಪದ ಆಧಾರದ ಮೇಲೆ ಮಲ್ಲಿಕಾರ್ಜುನ ಅವರಿಗೆ ಉದ್ಯೋಗ ನೀಡಲಾಗಿತ್ತು. ಮಲ್ಲಿಕಾರ್ಜನ ಕೂಡ ಸಮಾಜ ಕಲ್ಯಾಣ ಇಲಾಖೆಯಲ್ಲೇ ಕೆಲಸಕ್ಕೆ ಸೇರಿಕೊಂಡಿದ್ದರು. ಇದೀಗ ಇದೀಗ ಮಲ್ಲಿಕಾರ್ಜುನ್ ಗೆ ನಿವೃತ್ತಿ ಕೇವಲ ಒಂದು ವಾರ ಇರುವಾಗ ದುರಂತ ಅಂತ್ಯಕಂಡಿರುವುದು ಅನುಮಾನಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ ಹೇಳಿರುವಂತೆ ಮೇಲಧಿಕಾರಿಗಳ ಕಿರುಕುಳಕ್ಕೆ ಈ ನಿರ್ಧಾರ ಮಾಡಿಕೊಂಡ್ರಾ, ಇಲ್ಲ ಮಕ್ಕಳಿಗೆ ಕೆಲಸ ಸಿಗಲಿ ಎಂದು ದುರಂತ ಅಂತ್ಯ ಕಂಡಿದ್ದಾರಾ ಅನ್ನೋ ಅನುಮಾನ ಶುರುವಾಗಿತ್ತು ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm