ಬ್ರೇಕಿಂಗ್ ನ್ಯೂಸ್
21-03-26 06:57 pm HK News Staffer ಕರ್ನಾಟಕ
ಚಿಕ್ಕಮಗಳೂರು, ಮಾರ್ಚ್ 21: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ 25ಕ್ಕೂ ಹೆಚ್ಚು ಕಡೆ ಬೆಂಕಿ ಹಾಕಲಾಗಿದ್ದು ಕಳೆದ 2-3 ದಿನಗಳಿಂದ ಧಗ ಧಗನೆ ಅರಣ್ಯ ಉರಿಯುತ್ತಿದೆ. ಬಿಸಿಲ ಬೇಗೆಯ ನಡುವೆ ಶೋಲಾ ಹುಲ್ಲುಗಾವಲು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಹೋಗಿದೆ.
ಶೃಂಗೇರಿ ತಾಲೂಕು ವ್ಯಾಪ್ತಿಯ ಕೆರೆಕಟ್ಟೆ ವಲಯದ ಮಾಣಿಕ್ಯ ಬೆಟ್ಟ ಗಿರಿ ಶ್ರೇಣಿ, ವಾಲಿಕುಂಜ, ನರಸಿಂಹ ಪರ್ವತ, ಕಿತ್ಲೆಮನೆಕೊಡಿಗೆ ಸೇರಿದಂತೆ ಬೆಟ್ಟದ ಸಾಲಿನುದ್ದಕ್ಕೂ ಬೆಂಕಿ ಬಿದ್ದಿದೆ. ಮೊದಲಿಗೆ ಸಣ್ಣ ಪ್ರಮಾಣದಲ್ಲಿದ್ದ ಬೆಂಕಿ ದಿನ ಕಳೆದಂತೆ ಬೆಟ್ಟದ ಸಾಲಿನುದ್ದಕ್ಕೂ ಹರಡಿದ್ದು ನೂರಾರು ಪ್ರಾಣಿ, ಪಕ್ಷಿಗಳು ಆಹುತಿಯಾಗಿವೆ. ಬೇಸಿಗೆಯ ಹುಲ್ಲು, ಒಣಗಿದ ತರಗೆಲೆಗಳು, ಭಾರೀ ಬಿಸಿಲು ಬೆಂಕಿ ಮತ್ತಷ್ಟು ಹರಡಲು ಕಾರಣವಾಗಿದೆ.
ಯಾರೋ ಕಿಡಿಗೇಡಿಗಳು ಕಾಡಿಗೆ ಬೆಂಕಿ ಹಚ್ಚಿರುವ ಶಂಕೆಯಿದ್ದು ವಿಷಯ ತಿಳಿದು ಅರಣ್ಯ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ ಮಾಡಿದ್ದಾರೆ. ಮಂಗಳೂರು ವಿಭಾಗದ ಅರಣ್ಯಾಧಿಕಾರಿ ಮರಿಯಪ್ಪ ಕರಿಕಳನ್ ಅವರಿಗೆ ತನಿಖೆಗೆ ಸೂಚಿಸಿದ್ದು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.






ನಾಲ್ಕೈದು ದಿನಗಳಿಂದ ಕಾಡು ಉರಿಯುತ್ತಿದ್ದು ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದಾಗಿ ನೆಲದಲ್ಲಿ ಗೂಡುಕಟ್ಟುವ ಪಕ್ಷಿ, ಪ್ರಾಣಿಗಳು, ಅಪರೂಪದ ಸಸ್ಯಸಂಪತ್ತು ಸುಟ್ಟು ಹೋಗಿದೆ. ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ನೂರಾರು ಎಕರೆ ಅರಣ್ಯ ನಾಶವಾಗಿದೆ ಎನ್ನುವ ಆರೋಪವನ್ನು ಪರಿಸರ ಪ್ರೇಮಿಗಳು ಮಾಡಿದ್ದಾರೆ.
ಅರಣ್ಯ ವೀಕ್ಷಕರ ನೇಮಕ ಮಾಡಿಕೊಳ್ಳದೇ ಇರೋದು, ಬೆಂಕಿ ನಿಯಂತ್ರಣ ರೇಖೆ, ವೀಕ್ಷಣಾ ಗೋಪುರ ಮಾಡದೇ ಇರುವುದರಿಂದ ಬೆಂಕಿ ದೊಡ್ಡ ಪ್ರಮಾಣದಲ್ಲಿ ಹರಡಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ವಾರದಿಂದ ಕಾಡು ಹೊತ್ತಿ ಉರಿಯುತ್ತಿದ್ದರೂ ಸ್ಥಳಕ್ಕೆ ಯಾರೂ ಭೇಟಿ ನೀಡಿಲ್ಲ ಎಂದು ಕಾರ್ಕಳ ಡಿಎಫ್ಓ ಶಿವರಾಮ್ ಬಾಬು ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು- ಶಿವಮೊಗ್ಗ- ಉಡುಪಿ ಜಿಲ್ಲೆಯ ಗಡಿಯನ್ನು ಹಂಚಿಕೊಂಡಿರುವ ಕುದುರೆಮುಖ ಅರಣ್ಯದಲ್ಲಿ ಬೆಂಕಿ ಬಿದ್ದರೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ದೊಡ್ಡ ಪ್ರಮಾಣದ ನಾಶಕ್ಕೆ ಕಾರಣವಾಗುತ್ತಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm