ಬ್ರೇಕಿಂಗ್ ನ್ಯೂಸ್
21-03-26 06:57 pm HK News Staffer ಕರ್ನಾಟಕ
ಚಿಕ್ಕಮಗಳೂರು, ಮಾರ್ಚ್ 21: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ 25ಕ್ಕೂ ಹೆಚ್ಚು ಕಡೆ ಬೆಂಕಿ ಹಾಕಲಾಗಿದ್ದು ಕಳೆದ 2-3 ದಿನಗಳಿಂದ ಧಗ ಧಗನೆ ಅರಣ್ಯ ಉರಿಯುತ್ತಿದೆ. ಬಿಸಿಲ ಬೇಗೆಯ ನಡುವೆ ಶೋಲಾ ಹುಲ್ಲುಗಾವಲು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಹೋಗಿದೆ.
ಶೃಂಗೇರಿ ತಾಲೂಕು ವ್ಯಾಪ್ತಿಯ ಕೆರೆಕಟ್ಟೆ ವಲಯದ ಮಾಣಿಕ್ಯ ಬೆಟ್ಟ ಗಿರಿ ಶ್ರೇಣಿ, ವಾಲಿಕುಂಜ, ನರಸಿಂಹ ಪರ್ವತ, ಕಿತ್ಲೆಮನೆಕೊಡಿಗೆ ಸೇರಿದಂತೆ ಬೆಟ್ಟದ ಸಾಲಿನುದ್ದಕ್ಕೂ ಬೆಂಕಿ ಬಿದ್ದಿದೆ. ಮೊದಲಿಗೆ ಸಣ್ಣ ಪ್ರಮಾಣದಲ್ಲಿದ್ದ ಬೆಂಕಿ ದಿನ ಕಳೆದಂತೆ ಬೆಟ್ಟದ ಸಾಲಿನುದ್ದಕ್ಕೂ ಹರಡಿದ್ದು ನೂರಾರು ಪ್ರಾಣಿ, ಪಕ್ಷಿಗಳು ಆಹುತಿಯಾಗಿವೆ. ಬೇಸಿಗೆಯ ಹುಲ್ಲು, ಒಣಗಿದ ತರಗೆಲೆಗಳು, ಭಾರೀ ಬಿಸಿಲು ಬೆಂಕಿ ಮತ್ತಷ್ಟು ಹರಡಲು ಕಾರಣವಾಗಿದೆ.
ಯಾರೋ ಕಿಡಿಗೇಡಿಗಳು ಕಾಡಿಗೆ ಬೆಂಕಿ ಹಚ್ಚಿರುವ ಶಂಕೆಯಿದ್ದು ವಿಷಯ ತಿಳಿದು ಅರಣ್ಯ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ ಮಾಡಿದ್ದಾರೆ. ಮಂಗಳೂರು ವಿಭಾಗದ ಅರಣ್ಯಾಧಿಕಾರಿ ಮರಿಯಪ್ಪ ಕರಿಕಳನ್ ಅವರಿಗೆ ತನಿಖೆಗೆ ಸೂಚಿಸಿದ್ದು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.






ನಾಲ್ಕೈದು ದಿನಗಳಿಂದ ಕಾಡು ಉರಿಯುತ್ತಿದ್ದು ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದಾಗಿ ನೆಲದಲ್ಲಿ ಗೂಡುಕಟ್ಟುವ ಪಕ್ಷಿ, ಪ್ರಾಣಿಗಳು, ಅಪರೂಪದ ಸಸ್ಯಸಂಪತ್ತು ಸುಟ್ಟು ಹೋಗಿದೆ. ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ನೂರಾರು ಎಕರೆ ಅರಣ್ಯ ನಾಶವಾಗಿದೆ ಎನ್ನುವ ಆರೋಪವನ್ನು ಪರಿಸರ ಪ್ರೇಮಿಗಳು ಮಾಡಿದ್ದಾರೆ.
ಅರಣ್ಯ ವೀಕ್ಷಕರ ನೇಮಕ ಮಾಡಿಕೊಳ್ಳದೇ ಇರೋದು, ಬೆಂಕಿ ನಿಯಂತ್ರಣ ರೇಖೆ, ವೀಕ್ಷಣಾ ಗೋಪುರ ಮಾಡದೇ ಇರುವುದರಿಂದ ಬೆಂಕಿ ದೊಡ್ಡ ಪ್ರಮಾಣದಲ್ಲಿ ಹರಡಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ವಾರದಿಂದ ಕಾಡು ಹೊತ್ತಿ ಉರಿಯುತ್ತಿದ್ದರೂ ಸ್ಥಳಕ್ಕೆ ಯಾರೂ ಭೇಟಿ ನೀಡಿಲ್ಲ ಎಂದು ಕಾರ್ಕಳ ಡಿಎಫ್ಓ ಶಿವರಾಮ್ ಬಾಬು ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು- ಶಿವಮೊಗ್ಗ- ಉಡುಪಿ ಜಿಲ್ಲೆಯ ಗಡಿಯನ್ನು ಹಂಚಿಕೊಂಡಿರುವ ಕುದುರೆಮುಖ ಅರಣ್ಯದಲ್ಲಿ ಬೆಂಕಿ ಬಿದ್ದರೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದು ದೊಡ್ಡ ಪ್ರಮಾಣದ ನಾಶಕ್ಕೆ ಕಾರಣವಾಗುತ್ತಿದೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am